ತಣ್ಣೀರುಪಂತ ಗ್ರಾಮವೊಂದರಲ್ಲೇ 15 ಮನೆ ಶೌಚಾಲಯ ರಹಿತ !


Team Udayavani, Aug 28, 2017, 7:35 AM IST

NO-Toilet.jpg

ಉಪ್ಪಿನಂಗಡಿ: ದ.ಕ.ಜಿಲ್ಲೆ ಬಯಲು ಶೌಚ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿರುವಂತೆಯೇ ಸರಕಾರ ನಡೆಸುತ್ತಿರುವ ಶೌಚಾಲಯಗಳ ಗಣತಿ ವೇಳೆ ಭಿನ್ನ ನೈಜಾಂಶಗಳು ಅನಾವರಣಗೊಳ್ಳಲಾರಂಭಿಸಿವೆ. ಬೆಳ್ತಂಗಡಿ ತಾ|ನ ತಣ್ಣೀರು ಪಂತ ಗ್ರಾಮವೊಂದರಲ್ಲೇ 15 ಮನೆಗಳು ಶೌಚಾಲಯ ರಹಿತ ಎಂದು ಪತ್ತೆಯಾಗಿ ಪಂಚಾಯತ್‌ ಆಡಳಿತವನ್ನು ಕಂಗೆಡಿಸಿದೆ.

ಸ್ವತ್ಛ ಭಾರತ ಮಿಷನ್‌ ಕಾರ್ಯಕ್ರಮದಡಿ ದ.ಕ. ಜಿಲ್ಲೆಯನ್ನು ಬಯಲುಶೌಚ ಮುಕ್ತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ಗ್ರಾ.ಪಂ. ವ್ಯಾಪ್ತಿಯ ಎಲ್ಲ ಮನೆಗಳಲ್ಲಿ ಶೌಚಾಲಯವನ್ನು ಹೊಂದಿಕೊಂಡು ಬಳಕೆ ಮತ್ತು ನಿರ್ವಹಣೆ ಮಾಡುತ್ತಿರುವ ಬಗ್ಗೆ ಸಾಮಾಜಿಕ ಪರಿಶೋಧನಾ ಕಾರ್ಯ ಆಗಸ್ಟ್‌ 16ರಿಂದ ಸೆಪ್ಟಂಬರ್‌ 2ರ ವರೆಗೆ ಜಿಲ್ಲೆಯಾದ್ಯಂತ ನಡೆಯುತ್ತಿದೆ.

ತಣ್ಣೀರುಪಂತ ಗ್ರಾಮದ ಸಾಮಾನ್ಯ ಸಭೆಯಲ್ಲಿ ಪಿಡಿಒ ಈ ವಿಚಾರವನ್ನು ಪ್ರಸ್ತಾವಿಸುತ್ತಿದ್ದಂತೆಯೇ ಸದಸ್ಯರಿಂದ ಕಳವಳ ವ್ಯಕ್ತವಾಯಿತು. ಶೌಚಾಲಯ ರಹಿತ ಮನೆಗಳ ಪೈಕಿ ಓರ್ವ ನಿವೃತ್ತ ಸರಕಾರಿ ನೌಕರನ ಮನೆಯೂ ಸೇರಿದೆ. ಬ್ಯಾಂಕ್‌ ಖಾತೆಯಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಠೇವಣಿಯಿರಿಸಿದ್ದರೂ ಈ ನಿವೃತ್ತ ಸರಕಾರಿ ನೌಕರ ಇನ್ನೂ ಬಯಲು ಶೌಚಾಲಯದಲ್ಲಿ ಪರಮ ಸುಖ ಕಾಣುತ್ತಿರುವುದು ವಿಪರ್ಯಾಸ ಎಂದರು.

ಸಿಬಂದಿ ಜತೆ ಗಣತಿ ಕಾರ್ಯಕ್ಕೆ ಹೋಗಿದ್ದ ಪಿಡಿಒ ಪೂರ್ಣಿಮಾ ಅವರು ತನ್ನ ಅನುಭವಗಳನ್ನು ವಿವರಿಸಿದ್ದು ಹೀಗೆ….
ಶೌಚಾಲಯ ನಿರ್ಮಾಣಕ್ಕೆ ಸರಕಾರದಿಂದ ಹಣಕಾಸಿನ ನೆರವು ಲಭಿಸುತ್ತದೆ ಎಂದು ಅರಿತಾಗ ಹಲವು ಮಂದಿ ತಮ್ಮ ಮನೆ ಯಲ್ಲಿ ಶೌಚಾಲಯ ಇದ್ದರೂ ಇಲ್ಲ ಎನ್ನುತ್ತಿದ್ದರು. ಎದು ರಲ್ಲಿ ಕಾಣಿಸುವಂತಿದ್ದರೆ ಅದು ಎಂದೋ ಕೆಟ್ಟು ಹೋಗಿ ಉಪ ಯೋಗಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಸುಳ್ಳು ಹೇಳುತ್ತಿದ್ದರು.”ಯಾವೆಲ್ಲ ಮನೆಗಳಲ್ಲಿ ಶೌಚಾಲಯ ಇಲ್ಲವೋ ಅಂತಹ ಮನೆಗಳಿಗೆ ಪಡಿತರ ಸಹಿತ ಎಲ್ಲ ಸೌಲಭ್ಯಗಳನ್ನು ರದ್ದುಪಡಿಸುವ ಸಲುವಾಗಿ ಗಣತಿ ನಡೆಯುತ್ತಿದೆ’ ಎಂದು ಹೇಳಿದಾಗ ಮಾತಿನ ವರಸೆ ಬದಲಾಯಿಸುತ್ತಾ “ಇಲ್ಲ ಇಲ್ಲ ನಮ್ಮ ಮನೆಯ ಶೌಚಾಲಯ ಸರಿಯಾಗಿ ಇದೆ. ಸ್ವಲ್ಪ ಸಮಸ್ಯೆ ಇದೆ. ಅದನ್ನು ನಾವೇ ಸರಿ ಪಡಿಸಿಕೊಳ್ಳುತ್ತೇವೆ. ನೀವು ಯಾವುದೇ ಸೌಲಭ್ಯವನ್ನು ಕಡಿತಗೊಳಿಸಬೇಡಿ’ ಎಂದು ಅಂಗಲಾಚುತ್ತಿದ್ದರು ಎಂದು ವಿವರಿಸಿದಾಗ ಸಭೆಯಲ್ಲಿ ನಗುವಿನ ಅಲೆ ಎದ್ದಿತ್ತು.

ಗ್ರಾ.ಪಂ. ವ್ಯಾಪ್ತಿಯಲ್ಲಿ ಇನ್ನೂ ಶೌಚಾಲಯ ಹೊಂದಿರದ 15 ಮನೆಗಳು ಪತ್ತೆಯಾದ ಬಗ್ಗೆ ಖೇದ ವ್ಯಕ್ತಪಡಿಸಿದ ಪಂಚಾಯತ್‌ ಅಧ್ಯಕ್ಷ ಜಯವಿಕ್ರಂ ಅವರು, ತನ್ನ ಮೂರು ತಿಂಗಳ ಗೌರವಧನವನ್ನು ಓರ್ವ ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಲು ವಿನಿಯೋಗಿಸುವುದಾಗಿ ತಿಳಿಸಿದರು. ಸಂಘ-ಸಂಸ್ಥೆಗಳೂ ಕೈ ಜೋಡಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.