ಎನ್‌ಎಂಪಿಟಿಯಲ್ಲಿ  150ರಷ್ಟು ಮೀನುಗಾರಿಕಾ ಬೋಟು


Team Udayavani, Aug 18, 2018, 10:33 AM IST

18-agust-3.jpg

ಮಹಾನಗರ: ಭಾರೀ ಗಾಳಿ- ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಹಳೆಬಂದರಿಗೆ ಆಗಮಿಸಲು ಸಾಧ್ಯವಾಗದ ಸುಮಾರು 150ರಷ್ಟು ಮೀನುಗಾರಿಕಾ ಬೋಟುಗಳು ಎನ್‌ಎಂಪಿಟಿ ಬಂದರಿನಲ್ಲಿ ಲಂಗರು ಹಾಕಿದ್ದು, ಶುಕ್ರವಾರವೂ ಹಳೆಬಂದರಿಗೆ ಬರಲು ಸಾಧ್ಯವಾಗಲಿಲ್ಲ.

ಎನ್‌ಎಂಪಿಟಿಯಲ್ಲಿ ನಿಂತಿರುವ ಬೋಟುಗಳಲ್ಲಿರುವ ಮೀನುಗಾರರಿಗೆ ನವಮಂಗಳೂರು ಬಂದರಿನ ಮೂಲಕ ಹೊರಭಾಗಕ್ಕೆ ಬರಲು ಅನುಮತಿ ಇಲ್ಲದ ಕಾರಣ ಮೀನುಗಾರರು ಬೋಟುನಲ್ಲಿಯೇ ಉಳಿದುಕೊಳ್ಳುವಂತಾಗಿದೆ. ಮೀನುಗಾರಿಕಾ ರಜೆ ಮುಗಿಸಿ ಆಗಸ್ಟ್‌ ಮೊದಲ ವಾರದಲ್ಲಿ ಸುಮಾರು 500ರಷ್ಟು ಬೋಟುಗಳು ಮೀನುಗಾರಿಕೆಗೆ ತೆರಳಿದ್ದವು. ಈ ಪೈಕಿ ಸುಮಾರು 350ರಷ್ಟು ಬೋಟುಗಳು ಈಗಾಗಲೇ ಹಳೆಬಂದರಿಗೆ ಆಗಮಿಸಿವೆ. ಉಳಿದ ಬೋಟುಗಳಿಗೆ ಸಮುದ್ರ ಪ್ರಕ್ಷುಬ್ಧಗೊಂಡು ಆತಂಕ ಎದುರಾಗಿದ್ದು, ಅಳಿವೆಬಾಗಿಲಿನಿಂದ ಹಳೆಬಂದರಿಗೆ ಆಗಮಿಸಲು ಸಾಧ್ಯವಾಗಿರಲಿಲ್ಲ.

ಅಳಿವೆಬಾಗಿಲಿನ ಮೂಲಕ ಹಳೆಬಂದರಿಗೆ ಆಗಮಿಸುವಲ್ಲಿ ಸಮು ದ್ರದ ಆಳ ಅತ್ಯಂತ ಕಡಿಮೆ ಇರುವುದರಿಂದ (ಸುಮಾರು 3 ಮೀಟರ್‌) ಬೋಟುಗಳ ಸಮತೋಲನ ತಪ್ಪುತ್ತವೆ. ಭಾರೀ ಗಾಳಿ- ಮಳೆಯಿಂದ ನೇತ್ರಾವತಿ- ಫಲ್ಗುಣಿ ನದಿ ನೀರು ಅಳಿವೆ ಬಾಗಿಲಿನ ಮೂಲಕ ಸಮುದ್ರ ಸೇರುವ ಭಾಗದಲ್ಲಿ ಅಲೆ ಜೋರಾಗಿದ್ದು, ಬೋಟುಗಳ ಪ್ರವೇಶಕ್ಕೆ ಅನುಕೂಲಕರವಾಗಿಲ್ಲ.

ಹಾಗಾಗಿ ಸಮುದ್ರ ಮಧ್ಯೆ ಆತಂಕಕ್ಕೆ ತುತ್ತಾದ ಮೀನುಗಾರಿಕಾ ದೋಣಿಗಳು ದಡಕ್ಕೆ ಬರಲು ಸಾಧ್ಯವಾಗದ ಕಾರಣ ರಕ್ಷಣೆ ಹಿನ್ನೆಲೆಯಲ್ಲಿ ಮೀನುಗಾರಿಕಾ ಇಲಾಖೆಯ ಮೂಲಕ ಎನ್‌ಎಂಪಿಟಿಗೆ ಮನವಿ ಸಲ್ಲಿಸಿ ಮೀನುಗಾರಿಕಾ ಬೋಟುಗಳ ನಿಲುಗಡೆಗೆ ಅವಕಾಶ ಕೇಳಲಾಯಿತು. ಇದರಂತೆ ಗುರುವಾರ ಬೋಟುಗಳು ಎನ್‌ಎಂಪಿಟಿಯಲ್ಲಿ (14 ಮೀಟರ್‌ ಆಳ) ಆಶ್ರಯ ಪಡೆದಿವೆ ಎಂದು ಇಲಾಖೆಯ ಉಪನಿರ್ದೇಶಕ ಮಹೇಶ್‌ ಕುಮಾರ್‌ ತಿಳಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯಿಂದ ಸೂಚನೆ ಬಂದಿರುವುದರಿಂದ ಯಾರೂ ಮೀನುಗಾರಿಕೆ ನಡೆಸುತ್ತಿಲ್ಲ. 

ಎನ್‌ಎಂಪಿಟಿಗೆ ಎಂಟ್ರಿ ಇಲ್ಲ !
ವಾಣಿಜ್ಯ ವಹಿವಾಟು ಹಾಗೂ ಭದ್ರತೆ ದೃಷ್ಟಿಯಿಂದ ಮೀನುಗಾರಿಕಾ ಬೋಟುಗಳಿಗೆ ಎನ್‌ ಎಂಪಿಟಿಗೆ ಪ್ರವೇಶ ನೀಡುತ್ತಿರಲಿಲ್ಲ. ಆದರೆ, ತುರ್ತು ಸಂದರ್ಭದಲ್ಲಿ ಮಾತ್ರ ಅನುಮತಿ ಮೇರೆಗೆ ಎನ್‌ಎಂಪಿಟಿ ಪ್ರವೇಶಕ್ಕೆ ಅವಕಾಶವಿದೆ. ಸುಮಾರು 20 ವರ್ಷಗಳಲ್ಲಿ ಬೆರಳೆಣಿಕೆ ಬೋಟುಗಳು ಮಾತ್ರ ಎನ್‌ಎಂಪಿಟಿಯಲ್ಲಿ ತುರ್ತು ಕಾಲದಲ್ಲಿ ಆಶ್ರಯ ಪಡೆದಿತ್ತು. ಆದರೆ ಬೃಹತ್‌ ಪ್ರಮಾಣದಲ್ಲಿ ಬೋಟುಗಳು ಎನ್‌ಎಂಪಿಟಿಗೆ ಬಂದಿರುವುದು ಇದೇ ಮೊದಲು. ಸಮುದ್ರ ಸಹಜಸ್ಥಿತಿಗೆ ಬಂದ ಅನಂತರ ಬೋಟುಗಳು ಮತ್ತೆ ಹಳೆಬಂದರಿಗೆ ಆಗಮಿಸುವ ನಿರೀಕ್ಷೆ ಇದೆ. 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.