ಶಾಂತಿಯುತ ಮತದಾನಕ್ಕೆ ಸಿದ್ಧತೆ: ನರೆಯಿನ್‌ಲಾಲ್‌


Team Udayavani, May 10, 2018, 10:22 AM IST

10-May-5.jpg

ಸುಳ್ಯ: ಕ್ಷೇತ್ರದಲ್ಲಿ 16 ನಕ್ಸಲ್‌ ಬಾಧಿತ, 48 ಅತಿ ಸೂಕ್ಷ್ಮ, 43 ಸೂಕ್ಷ ಮತಗಟ್ಟೆಗಳಿದ್ದು, ಅಲ್ಲೆಲ್ಲ ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ವೀಕ್ಷಕ ನರೈನ್‌ಲಾಲ್‌ ಹೇಳಿದರು. ಮೇ 12ರ ಮತದಾನದ ಸಿದ್ಧತೆಗಳ ಕುರಿತು ಮಾತನಾಡಿದ ಅವರು, ಈ ಮತಗಟ್ಟೆಗಳಲ್ಲಿ ಓರ್ವ ಪೊಲೀಸ್‌ ಸಿಬಂದಿ, ನಾಲ್ವರು ಅರೆಸೇನಾ ಪಡೆ ಸಿಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಆವಶ್ಯಕ ಇರುವೆಡೆ ವೆಬ್‌ ಕೆಮರಾ, ವಿಡಿಯೋ ಚಿತ್ರೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕ್ಷೇತ್ರದಲ್ಲಿ 1,98,682 ಮತದಾರರಿದ್ದು, 98,914 ಪುರುಷ, 99,768 ಮಹಿಳೆಯರು ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. 713 ಪುರುಷ ಮತ್ತು 416 ಮಹಿಳೆಯರ ಸಹಿತ 1,129 ಅಂಗವಿಕಲ ಮತದಾರರನ್ನು ಗುರುತಿಸಲಾಗಿದೆ. ಇವರಿಗೆ ಮತಗಟ್ಟೆ ಕೊಠಡಿಗೆ ತೆರಳಲು ಗಾಲಿಕುರ್ಚಿ ವ್ಯವಸ್ಥೆ ಮಾಡಲಾಗಿದೆ. 50 ಮತಗಟ್ಟೆಗಳಲ್ಲಿ 50 ಗಾಲಿ ಕುರ್ಚಿ ರವಾನಿಸಲಾಗಿದೆ ಎಂದು ನುಡಿದರು.

ಮಹಿಳಾ ಮತಗಟ್ಟೆ
ಚುನಾವಣಾಧಿಕಾರಿ ಬಿ.ಟಿ ಮಂಜುನಾಥ್‌ ಮಾತನಾಡಿ, ಕ್ಷೇತ್ರದಲ್ಲಿ 229 ಮತಗಟ್ಟೆಗಳಿವೆ. ಬೆಳಂದೂರಿನಲ್ಲಿ ಒಂದು ಹೆಚ್ಚುವರಿ ಮತಗಟ್ಟೆ ಸೇರ್ಪಡೆ ಆಗಿವೆ. ಸ.ಹಿ.ಪ್ರಾ. ಶಾಲೆ ಗುತ್ತಿಗಾರು (ಪೂ.ಭಾ.) ಮತಗಟ್ಟೆಯನ್ನು ಮಹಿಳಾ ಮತಗಟ್ಟೆ ಎಂದು ಗುರುತಿಸಿದ್ದು, ಇಲ್ಲಿ ಜಿ.ಪಂ. ವತಿಯಿಂದ ವಿಶೇಷ ರೀತಿಯಲ್ಲಿ ಅಲಂಕಾರ ನಡೆಯಲಿದೆ. ಮಹಿಳಾ ಮತದಾರರು ಹೆಚ್ಚಿರುವ ಕಾರಣ, ಇಲ್ಲಿನ ಮತಗಟ್ಟೆಯಲ್ಲಿ ಮಹಿಳಾ ಸಿಬಂದಿಯೇ ಕರ್ತವ್ಯ ನಿರ್ವಹಿಸಲಿದ್ದಾರೆ. ಮತಗಟ್ಟೆ 114 ಸ.ಹಿ.ಪ್ರಾ. ಶಾಲೆ ಸುಬ್ರಹ್ಮಣ್ಯ (ಮ.ಭಾ.) ಇಲ್ಲಿ ಜನಾಂಗೀಯ ಮತ ಗಟ್ಟೆ (ಎತ್ನಿಕ್‌ ಪೋಲಿಂಗ್‌ ಸ್ಟೇಷನ್‌) ಎಂದು ವರ್ಗೀಕರಿಸಲಾಗಿದೆ. ಇಲ್ಲಿ ಪ. ಜಾತಿ, ಪಂಗಡದ ಮತದಾರರೇ ಅಧಿಕ ಸಂಖ್ಯೆಯಲಿದ್ದಾರೆ. ಇದನ್ನು ಸಾಂಪ್ರದಾಯಿಕ ನೆಲೆಯಲ್ಲಿ ಅಲಂಕರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ನೆಟ್‌ವರ್ಕ್‌ಗೆ ಕ್ರಮ
ಮತದಾನ ಆರಂಭಕ್ಕೆ ಮೊದಲು ಏಜೆಂಟರ ಸಮ್ಮುಖದಲ್ಲಿ 50 ಅಣಕು ಮತದಾನ ಮಾಡಿ ಮತಯಂತ್ರದ ಗುಣಮಟ್ಟದ ಬಗ್ಗೆ ಖಾತರಿ ಪಡಿಸಲಾಗುವುದು. ಏಜೆಂಟರು ಮತದಾನ ಕೇಂದ್ರದಲ್ಲಿ ಮುಂಚಿತವಾಗಿಯೇ ಇರಬೇಕು ಎಂದರು.

ಮೊಬೈಲ್‌ ರೇಂಜ್‌ ಇಲ್ಲದ ಮತಗಟ್ಟೆಗಳಿಗೆ ತಾತ್ಕಾಲಿಕ ದೂರವಾಣಿ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಸಂಖ್ಯೆ 116 ಕೊಯಿಕುಳಿ, 169 ಜಟ್ಟಿಪಳ್ಳ, 174 ಸಾಮರ್ಥ್ಯ ಸೌಧ, 178 ಸ.ಪ.ಪೂ. ಕಾಲೇಜು ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಸಿಬಂದಿಗೆ ಊಟ-ಉಪಾಹಾರಕ್ಕಾಗಿ ಅಕ್ಷರ ದಾಸೋಹ ನೌಕರರು ಕರ್ತವ್ಯ ನಿರ್ವಹಿಸಲಿದ್ದಾರೆ. 

ಬೆಳಗ್ಗೆ 7ರಿಂದ ಸಂಜೆ 6
ಮತದಾನ ಸಮಯವನ್ನು ಬೆಳಗ್ಗೆ 7ರಿಂದ ಸಂಜೆ 6ರ ತನಕ ನಿಗದಿ ಪಡಿಸಿದ್ದು, ಸಮಯ ವಿಸ್ತರಣೆಗೆ ಅವಕಾಶ ಇಲ್ಲ. ಮತದಾರರು ಆಯೋಗ ಸೂಚಿಸಿದ 12 ಗುರುತು ಪತ್ರಗಳ ಪೈಕಿ ಯಾವುದಾದರೂ ಒಂದನ್ನು ಅಥವಾ ಚುನಾವಣಾ ಆಯೋಗ ನೀಡಿದ ಮತಚೀಟಿಯೊಂದಿಗೆ ಬಂದು ಮತ ಚಲಾಯಿಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.