ಇಳಂತಿಲ: 16ನೇ ಶತಮಾನದ ಅಪೂರ್ವ ತುಳು ಶಾಸನ ಪತ್ತೆ


Team Udayavani, Oct 5, 2019, 5:33 AM IST

z-37

ಬೆಳ್ತಂಗಡಿ: ತಾಲೂಕಿನ ಇಳಂತಿಲ ಗ್ರಾಮದ ಇಚ್ಚಾರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಚೀನ ತುಳು ಶಾಸನವೊಂದು ಬೆಳಕಿಗೆ ಬಂದಿದೆ.

ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದ ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ ಶಿಲಾಖಂಡವು ಪ್ರಾಚೀನ ಶಾಸನ ಎಂಬುದು ತಡವಾಗಿ ಬೆಳಕಿಗೆ ಬಂದಿದೆ.

ಭೂತದ ಕಲ್ಲು ಎಂದು ಭಾವಿಸಲಾಗಿದ್ದ ಈ ಕಲ್ಲಿನ ಕುರಿತು ಜೋತಿಷಿಗಳು ಅನುಮಾನಗೊಂಡು ವಿಶ್ಲೇಷಿಸಿದಾಗ ದೇವಸ್ಥಾನದ ಆಡಳಿತ ಮೊಕ್ತೇಸರರ ಸೂಚನೆಯಂತೆ ಹಿರಿಯ ಶಾಸನ ತಜ್ಞ ಡಾ| ವೈ. ಉಮಾನಾಥ ಶೆಣೈ ಮತ್ತು ಡಾ| ಎಸ್‌.ಆರ್‌. ವಿಘ್ನರಾಜರನ್ನು ಕರೆಸಿ ಓದಿಸಿದಾಗ ಇದು ಒಟ್ಟು 8 ಪಂಕ್ತಿಗಳಲ್ಲಿ ಬರೆದಿರುವ ಕ್ರಿ.ಶ. ಸುಮಾರು 16ನೇ ಶತಮಾನದ ಒಂದು ಅಪೂರ್ವ ತುಳುಶಾಸನವೆಂದು ತಿಳಿದು ಬಂದಿದೆ.

ತುಳು ಲಿಪಿ ಅಡಕ
-ಸ್ವಸ್ತಿಶ್ರೀ
-ಹ (ಇ) ಚ್ಚಾರ ಉದಕ
-ಮಣಿಗಾದ್‌
-ರಾಜಕೃತ
-ಜ್ಜೆ (?) ಮಾಜಾರ
-ನರಮಾನಿಯೆರೆ
-ಮಾ (ವಾ) ಸಪ್ಪೆರೆ
-ಪದ ಬರಹ (ವು)
ಶಾಸನದಲ್ಲಿ ಎರಡು ವಿಚಾರಗಳನ್ನು ತಿಳಿಸಲಾಗಿದೆ. ಇಚ್ಚಾರ ಉದಕಮಣಿ ಎಂದು ಪ್ರಸಿದ್ಧಿ ಪಡೆದ ಈ ಬಾಲಸುಬ್ರಹ್ಮಣ್ಯ ದೇವಾಲಯವು ರಾಜನಿರ್ಮಿತವಾದುದು. ಆದರೆ ಇಲ್ಲಿ ರಾಜನ ಹೆಸರು ಉಲ್ಲೇಖಗೊಂಡಿಲ್ಲ.

ಉಳಿದಂತೆ ಮಾಚಾರ ಸಮಾಜದ ವಾಸಪ್ಪ ಎಂಬವನು ಶಾಸನವನ್ನು ರಚಿಸಿ ಈ ಶಿಲೆಯ ಮೇಲೆ ಬರೆದ. ನಾಗಗಳಿಗೆ ಮತ್ತು ಜಲಕ್ಕೆ ದೇವತೆಯಾಗಿರುವ ಸುಬ್ರಹ್ಮಣ್ಯನನ್ನು ಇಲ್ಲಿ ಉದಕಮಣಿ ಎಂದು ವಿಶೇಷವಾಗಿ ಕರೆಯಲಾಗುತ್ತಿತ್ತು. ಇಂದಿಗೂ ಇಲ್ಲಿ ಶ್ರೀ ಬಾಲಸುಬ್ರಹ್ಮಣ್ಯನನ್ನು ನೀರಿಗಾಗಿ ಪ್ರಾರ್ಥಿಸಿ ಧಾರಾಳ ನೀರನ್ನು ಪಡೆಯಲಾಗುತ್ತದೆ. ಆದುದರಿಂದ ಪ್ರಾಚೀನ ಕಾಲ ದಿಂದಲೂ ಉದಕ ಮಣಿಯೆಂದು ಶ್ರೀ ದೇವರನ್ನು ಸಂಬೋಧಿಸಲಾಗುತ್ತಿತ್ತು.
ಈ ಶಾಸನವನ್ನು ಓದುವುದರಲ್ಲಿ ಧರ್ಮಸ್ಥಳದ ಪವನಕುಮಾರ್‌ ಸಹಕರಿಸಿದ್ದರು.

ದೇವಾಲಯದ ಆಡಳಿತ ಮೊಕ್ತೇಸರ ಹಾಗೂ ಅರ್ಚಕರಾದ ಸತೀಶ ಪುತ್ತೂರಾಯ, ಸಹೋದರ ಸೂರ್ಯ ನಾರಾಯಣ ಪುತ್ತೂರಾಯರು ವ್ಯವಸ್ಥೆಗೊಳಿ ಸಿದ್ದರು. ಚರಸ್ಥಿತಿಯಲ್ಲಿದ್ದ ಈ ಶಿಲಾ ಶಾಸನವನ್ನು ಈಗ ಸುರಕ್ಷಿತವಾಗಿ ಇಡಲಾಗಿದೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.