1983: ಎ ಸ್ಪೆಶಲ್‌ ಸ್ಟೋರಿ !


Team Udayavani, Mar 28, 2018, 11:39 AM IST

28-March-8.jpg

ಮಂಗಳೂರು: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸಹಿತವಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಮತ್ತು ಆಡಳಿತಾತ್ಮಕ ರಂಗಗಳ ಮಹತ್ವದ ಬದಲಾವಣೆಗೆ ಕಾರಣವಾದದ್ದು 1983ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ. ಮೈಸೂರು ಎಂಬ ಹೆಸರಿನಿಂದ ಕರ್ನಾಟಕ ಎಂಬುದಾಗಿ ಹೆಸರು ಬದಲಾವಣೆಗೊಂಡ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೂ ಇದು ಬದಲಾವಣೆಗೆ ನಾಂದಿಯಾಯಿತು.

ಮೈಸೂರು – ಬಳಿಕ ಕರ್ನಾಟಕ ರಾಜ್ಯದಲ್ಲಿ ಆರಂಭಿಕ ಚುನಾವಣೆಯ ಕಾಲದಿಂದಲೂ ಕಾಂಗ್ರೆಸ್‌ ಪ್ರಾಬಲ್ಯ ಹೊಂದಿತ್ತು. ವಿಭಜನೆಗಳು ಪಕ್ಷದಲ್ಲಿ ನಡೆದಿದ್ದರೂ ನೆಹರೂ, ಬಳಿಕ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪಕ್ಷವೇ ರಾಜ್ಯ ಸಹಿತ ದೇಶದಲ್ಲಿ ಪ್ರಾಬಲ್ಯ ಪಡೆದಿತ್ತು. ಆದರೆ ತುರ್ತು ಪರಿಸ್ಥಿತಿಯ ಅನಂತರದಲ್ಲಿ ಈ ಪ್ರಾಬಲ್ಯಕ್ಕೆ ಸ್ವಲ್ಪಮಟ್ಟಿನ ಧಕ್ಕೆಯಾಗಿದ್ದರೂ ಬಳಿಕ ಚೇತರಿಸಿಕೊಂಡಿತ್ತು. ಸ್ವ ಕ್ಷೇತ್ರದಲ್ಲಿ ಸೋತಿದ್ದ ಇಂದಿರಾಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಕೂಡ ಕರ್ನಾಟಕ; ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅವರು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ತುರ್ತು ಪರಿಸ್ಥಿತಿಯ ಸಂದರ್ಭದ ಚುನಾವಣೆಯಲ್ಲಿ ಕಾಂಗ್ರೆಸ್ಸೇತರ ಪಕ್ಷಗಳು ಜತೆಯಾಗಿ ಜನತಾ ಪಕ್ಷ ಸ್ಥಾಪನೆ ಯಾಯಿತು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೊರಾರ್ಜಿ ದೇಸಾೖ (1977-79); ಬಳಿಕ ಚರಣ್‌ಸಿಂಗ್‌ (1979-80) ಪ್ರಧಾನಿಯಾದರು. ಆಂತರಿಕ ಭಿನ್ನಮತ ಸ್ಫೋಟವಾಗಿ ಸರಕಾರ ಉರುಳಿತು. 1980ರ ಚುನಾವಣೆಯಲ್ಲಿ ಇಂದಿರಾ ಮತ್ತೆ ಪ್ರಧಾನಿಯಾದರು. ಈ ಎಲ್ಲ ಬೆಳವಣಿಗೆಗಳು ರಾಜ್ಯದ ರಾಜಕಾರಣದಲ್ಲೂ ಪ್ರಭಾವ ಬೀರಿದವು. ಹೀಗೆ 1978ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಭಾರೀ ಗೆಲುವು ಸಾಧಿಸಿತು. 224ರಲ್ಲಿ 149 ಸ್ಥಾನಗಳ ಭರ್ಜರಿ ಗೆಲುವು. ಆಗ ತಾನೇ ರೂಪುಗೊಂಡಿದ್ದ ಜನತಾ ಪಕ್ಷಕ್ಕೆ ಕೇವಲ 59 ಸ್ಥಾನ. ಆ ಬಳಿಕ ಜನತಾ ಪಕ್ಷ ಸಂಪೂರ್ಣ ವಿಭಜನೆಯಾಯಿತು. ಆವರೆಗೆ ಅದರ ಘಟಕ ಪಕ್ಷವಾಗಿದ್ದ ಭಾರತೀಯ ಜನಸಂಘ ದೇಶದಲ್ಲಿ ಭಾರತೀಯ ಜನತಾ ಪಕ್ಷವಾಗಿ (ಬಿಜೆಪಿ) ಸಂಘಟನೆಯಾಯಿತು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1983ರ ವಿಧಾನಸಭಾ ಚುನಾವಣೆ ನಡೆಯಿತು. ಯಾರೂ ನಿರೀಕ್ಷಿಸದ ಫಲಿತಾಂಶ ದಾಖಲಾಯಿತು. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಜನತಾ ಪಕ್ಷ- 95, ಕಾಂಗ್ರೆಸ್‌ 82, ಬಿಜೆಪಿ- 18, ಪಕ್ಷೇತರರು- 22, ಸಿಪಿಐ ಮತ್ತು ಸಿಪಿಐಎಂ ತಲಾ 3, ಆರ್‌ಪಿಐ-1. ಅತಂತ್ರ ಪರಿಸ್ಥಿತಿ! ಜನತಾ ಪಕ್ಷಕ್ಕೆ ಬಿಜೆಪಿ ಮತ್ತು ಕೆಲವು ಪಕ್ಷೇತರರ ಬೆಂಬಲ ದೊರೆಯಿತು. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾದರು.

ಈ ಫಲಿತಾಂಶದ ವಿಶೇಷವೆಂದರೆ, ಕಾಂಗ್ರೆಸ್‌ನ ಭದ್ರಕೋಟೆ ಎಂದು ಹೆಸರಾಗಿದ್ದ ದ.ಕ. ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಸಾಧನೆ ಮಾಡಿತು. ಒಟ್ಟು 15 ಕ್ಷೇತ್ರಗಳಲ್ಲಿ ಬಿಜೆಪಿಗೆ 8, ಕಾಂಗ್ರೆಸ್‌ ಮತ್ತು ಜನತಾ ಪಕ್ಷ ತಲಾ 3 ಮತ್ತು ಸಿಪಿಎಂಗೆ 1. ಮಂಗಳೂರು, ಉಡುಪಿ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವಿಟ್ಲ, ಸುಳ್ಯ, ಬ್ರಹ್ಮಾವರ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ಒಲಿದು ಬಂತು.

ಮುಂದೆ ವಿವಿಧ ಚುನಾವಣೆಗಳಲ್ಲಿ ಈ ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು 1983ರ ಚುನಾವಣೆಯೇ ಮುಖ್ಯ ಕಾರಣವಾಯಿತು!

ಆದರೆ ವಿವಿಧ ರಾಜಕೀಯ ಒತ್ತಡಗಳನ್ನು ಎದುರಿಸಬೇಕಾಗಿ ಬಂದ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ರಾಜೀನಾಮೆ ನೀಡಿ ಚುನಾವಣೆಗೆ ಮುಂದಾದರು. 1985ರಲ್ಲಿ ನಡೆದ ಚುನಾವಣೆಯಲ್ಲಿ ಅವರ ನೇತೃತ್ವದ ಜನತಾ ಪಕ್ಷ ಅಧಿಕಾರಕ್ಕೆ ಬಂತು.

ಬಿಜೆಪಿ ಶಾಸಕರು
1983ರ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಶಾಸಕರು: ಡಾ| ವಿ.ಎಸ್‌. ಆಚಾರ್ಯ (ಉಡುಪಿ), ಕೆ. ರಾಮ ಭಟ್‌ (ಪುತ್ತೂರು), ವಿ. ಧನಂಜಯ ಕುಮಾರ್‌ (ಮಂಗಳೂರು), ಡಾ| ಬಿ.ಬಿ. ಶೆಟ್ಟಿ (ಬ್ರಹ್ಮಾವರ), ಕೆ. ರುಕ್ಮಯ ಪೂಜಾರಿ (ವಿಟ್ಲ), ಕೆ. ವಸಂತ ಬಂಗೇರ (ಬೆಳ್ತಂಗಡಿ), ಎನ್‌. ಶಿವರಾವ್‌ (ಬಂಟ್ವಾಳ), ಬಾಕಿಲ ಹುಕ್ರಪ್ಪ (ಸುಳ್ಯ).

 ಮನೋಹರ ಪ್ರಸಾದ್‌

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.