ಧರ್ಮಸ್ಥಳ ಕಿಂಡಿ ಅಣೆಕಟ್ಟು ತಡೆಗೋಡೆಗೆ 2.60 ಕೋ.ರೂ.: ಅಶ್ವತ್ಥ ನಾರಾಯಣ
Team Udayavani, Nov 27, 2019, 5:49 AM IST
ಬೆಳ್ತಂಗಡಿ: ನೆರೆಯಿಂದ ಹಾನಿಗೊಳಗಾಗಿರುವ ಧರ್ಮಸ್ಥಳ ಸಮೀಪದ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿಗೆ ಕಾಂಕ್ರೀಟ್ ತಡೆಗೋಡೆ ಮತ್ತು ರ್ಯಾಂಪ್ ನಿರ್ಮಿಸಲು ಟಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ 2.60 ಕೋ.ರೂ. ಅಂದಾಜು ಪಟ್ಟಿ ಸಿದ್ಧಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ| ಅಶ್ವತ್ಥ ನಾರಾಯಣ ತಿಳಿಸಿದರು.
ಲಕ್ಷದೀಪೋತ್ಸವ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಆಗಮಿಸಿದ ಅವರು ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟು ವೀಕ್ಷಿಸಿ ಮಾತನಾಡಿದರು. ಚಾರ್ಮಾಡಿ ರಸ್ತೆ ದುರಸ್ತಿ ಮತ್ತು ಬೇಸಗೆಯಲ್ಲಿ ಧರ್ಮಸ್ಥಳ ಸೇರಿದಂತೆ ಈ ಭಾಗದ ಜನತೆಗೆ ನೀರು ಪೂರೈಕೆಗೆ ನೆರಿಯ ಹೊಳೆಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ಪ್ರಸ್ತಾವಕ್ಕೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಿಂದೆ 14 ಕೋಟಿ ರೂ. ಘೋಷಣೆಯಾಗಿತ್ತು. ಸದ್ಯ ಭಕ್ತರಿಗೆ ಯಾವುದೇ ಸಮಸ್ಯೆ ಬಾರದಂತೆ ಯೋಜನೆ ವಿಚಾರವಾಗಿ ಕ್ಯಾಬಿನೆಟ್ ಮುಂದಿಟ್ಟು ಅಗತ್ಯ ಕ್ರಮಕ್ಕೆ ಚಿಂತನೆ ನಡೆಸಲಾಗುತ್ತದೆ ಎಂದರು.
ಶಾಸಕರ ಹರೀಶ್ ಪೂಂಜ, ಧರ್ಮಸ್ಥಳ ಡಿ. ಸುರೇಂದ್ರ ಕುಮಾರ್, ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ