2 ದಿನದ ಮಗುವಿನ ಸಂಕೀರ್ಣ ಹೃದ್ರೋಗ ಶಸ್ತ್ರಚಿಕಿತ್ಸೆ


Team Udayavani, Feb 9, 2017, 3:45 AM IST

08-LOC-3.jpg

ಮಂಗಳೂರು: ಎರಡು ದಿನದ, ಸುಮಾರು 2.3 ಕೆ.ಜಿ. ತೂಕದ ನೀಲಿ ಬಣ್ಣದ ಮಗುವಿಗೆ ಎದುರಾದ ಹೃದಯ ಸಂಬಂಧಿ ಸಮಸ್ಯೆಗೆ ನಗರದ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಮಕ್ಕಳ ಹೃದ್ರೋಗ ತಜ್ಞರಾದ ಡಾ| ಪ್ರೇಮ್‌ ಆಳ್ವ ಅವರು 5ನೇತಿಂಗಳ ಭ್ರೂಣದ ಇಕೋ ಕಾರ್ಡಿಯೋ ಗ್ರಫಿ ನಡೆಸಿದಾಗ ಮಗುವಿನ ಮಹಾ ಅಪಧಮನಿ ಸ್ಥಳಾಂತರ ಹೊಂದಿರುವುದನ್ನು ಪತ್ತೆ ಹಚ್ಚಲಾಗಿತ್ತು. ಹೃದಯ
ದಿಂದ ಹೊರಹೊಮ್ಮುವ ಎರಡು ಮುಖ್ಯ ರಕ್ತನಾಳಗಳು ಸಂಪರ್ಕಿಸ ಬೇಕಾದ ಕೋಣೆಗಳನ್ನು ಬಿಟ್ಟು ಹೃದಯದ ತಪ್ಪು ಕೋಣೆಗಳನ್ನು ಸಂಪರ್ಕಿಸಿರುವ ಸ್ಥಿತಿ ಇತ್ತು. ಈ ಸ್ಥಿತಿಯಲ್ಲಿ ದೇಹದ ಪೋಷಣೆಗೆ ಅಗತ್ಯವಿರುವ ಆಮ್ಲಜನಕ ಪೂರೈಸುವ ರಕ್ತ ಹೃದಯದ ಬದಲು ಮರಳಿ ಶ್ವಾಸಕೋಶ ಸೇರುತ್ತಿತ್ತು. ಈ ಸ್ಥಿತಿ ಸರಿಪಡಿಸಲು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿತ್ತು.

ಹೃದ್ರೋಗ ಸಮಸ್ಯೆಯಿಂದ ಜನಿಸುವ ಶಿಶುಗಳಲ್ಲಿ ಸುಮಾರು ಶೇ. 5ರಷ್ಟು ಇಂತಹ ಸ್ಥಿತಿ ಹೊಂದಿರುವ ಮಕ್ಕಳು ಜನಿಸುತ್ತಾರೆ. ಈ ಸ್ಥಿತಿ ಸರಿ ಪಡಿಸಲು ಮಗು ಹುಟ್ಟಿದ ತತ್‌ಕ್ಷಣ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ. ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಮಕ್ಕಳ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಗೌರವ್‌ ಎಸ್‌. ಶೆಟ್ಟಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಇಂತಹ ಮಕ್ಕಳ ಹೃದ್ರೋಗ ಶಸ್ತ್ರಚಿಕಿತ್ಸೆ  ನಡೆಸಿದ್ದಾರೆ. ಹೀಗಾಗಿ ಈ ಮಗುವಿನ ಹೆತ್ತವರೊಡನೆ ಸಮಾಲೋಚಿಸಿ ಮಗುವಿನ ಹೃದಯದ ಶಸ್ತ್ರಚಿಕಿತ್ಸೆ ಸಂಕೀರ್ಣತೆ ಮತ್ತು ಶಸ್ತ್ರಚಿಕಿತ್ಸೆಗೆ ಬೇಕಾದ ಪರಿಣತಿ ವಿವರಿಸಿದರು.

ಈ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಡಾ| ಗೌರವ್‌ ಎಸ್‌. ಶೆಟ್ಟಿ, ಮಕ್ಕಳ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಅವರ ತಂಡದವರಾದ ಡಾ| ಗುರುರಾಜ್‌ ತಂತ್ರಿ, ಮುಖ್ಯ ಅರಿವಳಿಕೆ ತಜ್ಞರು ಮತ್ತು ಡಾ| ಸುಹಾಸ್‌ ಅರಿವಳಿಕೆ ತಜ್ಞರ ಸಹ ಯೋಗದೊಂದಿಗೆ ನಡೆಸಿದ್ದು, ಮಗು ವನ್ನು ಎದೆಗೂಡಿನ ತೀವ್ರ ನಿಗಾ ಘಟಕದಲ್ಲಿ ಯಶಸ್ವಿಯಾಗಿ ನಿಗಾವಹಿಸಿದ್ದರು.

ಮಗುವನ್ನು 7ನೇ ದಿನ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಒಂದು ವಾರದ ಅನಂತರ ಮರು ಪರಿಶೀಲನೆಗೆ ಒಳಪಡಿಸಿದಾಗ  ಮಗು ಆರೋಗ್ಯದಿಂದಿದೆ ಎಂದು ಆಸ್ಪತ್ರೆ ಯ ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್‌ ಮಾರ್ಲ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.