200ನೇ ವರ್ಷದ ಮಂಗಳೂರು ರಥೋತ್ಸವ
Team Udayavani, Feb 20, 2021, 1:43 AM IST
ಚಿತ್ರ : ಸತೀಶ್ ಇರಾ
ಮಂಗಳೂರು: ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 200ನೇ ವರ್ಷದ ಮಂಗಳೂರು ರಥೋತ್ಸವ ಶುಕ್ರವಾರ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರಗಿತು.
ರಥ ಸಪ್ತಮಿಯ ಪರ್ವ ದಿನದಂದು ಬೆಳಗ್ಗೆ ಶ್ರೀ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ, ಪಂಚಾಮೃತ ಅಭಿಷೇಕ ನಡೆಯಿತು. ಅನಂತರ ಶ್ರೀಗಳಿಂದ ಶ್ರೀವೀರ ವೆಂಕಟೇಶ ದೇವರಿಗೆ ಶತ ಕಲಶಾಭಿಷೇಕ, ಗಂಗಾಭಿಷೇಕ, ಮಹಾ ಮಂಗಳಾರತಿ ಜರಗಿತು. ಮಹಾ ಯಜ್ಞದ ಪೂರ್ಣಾಹುತಿಯ ಬಳಿಕ ಸರ್ವಾಲಂಕಾರ ಭೂಷಿತ ಶ್ರೀ ವೀರ ವೆಂಕಟೇಶ ಹಾಗೂ ಶ್ರೀನಿವಾಸ ದೇವರು ಪುಷ್ಪಾಲಂಕೃತ ಸ್ವರ್ಣ ಪಲ್ಲಕಿಯಲ್ಲಿ ವಿರಾಜ ಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಸಾವಿರಾರು ಭಜಕರ ಸಮ್ಮುಖದಲ್ಲಿ ಮಂಗಳೂರು ರಥೋತ್ಸವ ಸಮಾಪನಗೊಂಡಿತು. ಸಹಸ್ರಾರು ಭಕ್ತರಿಗೆ ಸಮಾರಾಧನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ