23.55 ಕೋ.ರೂ. ಪರಿಹಾರ ಜಮೆ

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ

Team Udayavani, May 3, 2022, 9:40 AM IST

solution

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ 2020-21ನೇ ಸಾಲಿನಲ್ಲಿ 23.55 ಕೋ.ರೂ.ಬೆಳೆ ನಷ್ಟ ವಿಮೆ ಪರಿಹಾರ ಮೊತ್ತ 5,675 ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆ ಆಗಿದೆ.

ತಾಂತ್ರಿಕ ಕಾರಣದಿಂದ ಕೆಲವು ಅರ್ಜಿಗಳಿಗೆ ಪರಿಹಾರ ಮೊತ್ತ ಪಾವತಿ ಆಗದಿರುವುದನ್ನು ಹೊರತುಪಡಿಸಿ ಉಳಿದಂತೆ ಹೆಚ್ಚಿನ ಅರ್ಜಿದಾರರಿಗೆ ವಿಮೆ ಪರಿಹಾರ ಮೊತ್ತವು ದೊರೆತಿದೆ.

ಅರ್ಜಿಗೆ ಆವಶ್ಯಕ ದಾಖಲೆ

ಹವಾಮಾನ ಆಧಾರಿತ ವಿಮೆ ಪರಿಹಾರ ಮೊತ್ತಕ್ಕೆ ಅರ್ಜಿ ಸಲ್ಲಿಸಲು ಬೆಳೆ ನಮೂದು ಇರುವ ಪ್ರಸಕ್ತ ಸಾಲಿನ ಆರ್‌ಟಿಸಿ, ಬ್ಯಾಂಕ್‌ ಖಾತೆಯ ಪಾಸ್‌ ಪುಸ್ತಕ, ಆಧಾರ್‌ಕಾರ್ಡ್‌, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ರೈತರು ಅರ್ಜಿ ಸಲ್ಲಿಸಬೇಕು. ಸೊಸೈಟಿ ಮೂಲಕ ನಿಗದಿತ ಸಮಯದೊಳಗೆ ದಾಖಲೆ ಸಲ್ಲಿಸಿ, ವಿಮೆ ಕಂತು ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು.

ರಾಜ್ಯ ನೈಸರ್ಗಿಕ ಉಸ್ತುವಾರಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾದ ಮಾಹಿತಿ, ಅಧಿಕ ಮಳೆ, ಕಡಿಮೆ ಮಳೆಯಿಂದ ಬೆಳೆ ಮೇಲಾಗುವ ಪ್ರತಿಕೂಲ ಅಂಶಗಳನ್ನು ಅಂದಾಜಿಸಿ ಬೆಳೆ ವಿಮೆ ಮೊತ್ತ ಬಿಡುಗಡೆ ಮಾಡಲಾಗುತ್ತದೆ. ಆಲಿಕಲ್ಲು ಮಳೆ, ಭೂಕುಸಿತ, ಮುಳುಗಡೆ ಸಂದರ್ಭ ಬೆಳೆ ನಷ್ಟವಾದರೆ ಸಂಬಂಧಿತ ಹಣಕಾಸು ಸಂಸ್ಥೆ, ವಿಮೆ ಕಚೇರಿಗೆ ಹಾನಿ ಪ್ರದೇಶದ ವ್ಯಾಪ್ತಿ ಕುರಿತು ಮಾಹಿತಿ ಸಲ್ಲಿಸುವುದು ಕಡ್ಡಾಯ.

21,907 ಅರ್ಜಿ ಸಲ್ಲಿಕೆ

2021-22ನೇ ಸಾಲಿನಲ್ಲಿ ತಾಲೂಕಿನಲ್ಲಿ 21,907 ಅರ್ಜಿ ಸಲ್ಲಿಕೆಯಾಗಿದೆ. ವರ್ಷದಿಂದ ವರ್ಷಕ್ಕೆ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಆದರೆ ದೊರೆಯುವ ಪರಿಹಾರ ಮೊತ್ತ ಇಳಿಮುಖವಾಗುತ್ತಿದೆ. ಎರಡು ವರ್ಷಗಳ ಹಿಂದೆ ಒಂದು ಲಕ್ಷ ರೂ. ದೊರೆತವರಿಗೆ ಕಳೆದ ವರ್ಷ ಅಷ್ಟೇ ಪ್ರಮಾಣದ ನಷ್ಟಕ್ಕೆ 50ರಿಂದ 60 ಸಾವಿರ ರೂ. ಮಾತ್ರ ಸಿಕ್ಕಿದೆ ಎನ್ನುವುದು ಬೆಳೆಗಾರರ ಅಭಿಪ್ರಾಯ. ಫಸಲು ಆಧಾರಿತವಾಗಿ ನಷ್ಟ ಮೊತ್ತ ನಿರ್ಧಾರ ಆಗುವ ಕಾರಣ ನೀಡುವ ಪರಿಹಾರ ಮೊತ್ತದಲ್ಲಿಯೂ ವ್ಯತ್ಯಾಸ ಆಗಿರಬಹುದು ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

 789 ಮಂದಿಗೆ ಸಿಕ್ಕಿಲ್ಲ

ಪರಿಹಾರ ನಾನಾ ಕಾರಣಗಳಿಂದ ತಾಲೂಕಿನ 789 ಮಂದಿಗೆ 2020-21ನೇ ಸಾಲಿನಲ್ಲಿ ಬೆಳೆ ವಿಮೆ ಪರಿಹಾರ ಮೊತ್ತ ಪಾವತಿಯಾಗಿಲ್ಲ. ಬೆಳೆ ವಿಮೆ ಮಾಡಿಸುವ ಸಂದರ್ಭದಲ್ಲಿ ಬೆಳೆ ಹೆಸರು ತಪ್ಪಾಗಿ ಉಲ್ಲೇಖೀಸಿರುವುದು, ಆಧಾರ್‌ ಲಿಂಕ್‌ ಆಗದಿರುವುದು ಹೀಗೆ ಕೆಲವು ತಾಂತ್ರಿಕ ಕಾರಣಗಳಿಂದ ವಿಮೆ ಮೊತ್ತ ಜಮೆಯಾಗಲು ತೊಂದರೆ ಉಂಟಾಗಿದೆ. ಹಾಗಂತ ಇವರ ಅರ್ಜಿ ತಿರಸ್ಕೃತವಾಗಿಲ್ಲ. ತಾಂತ್ರಿಕ ಸಮಸ್ಯೆ ಪರಿಹಾರಗೊಂಡ ಬಳಿಕ ವಿಮೆ ಮೊತ್ತ ಜಮೆ ಆಗಲಿದೆ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.

ತೋಟಗಾರಿಕೆ ಇಲಾಖೆ ಸಂಪರ್ಕಿಸಿ

ತಾಂತ್ರಿಕ ಕಾರಣದಿಂದ ಕೆಲ ಅರ್ಜಿದಾರರಿಗೆ ಹವಾಮಾನ ಆಧರಿತ ವಿಮಾ ಪರಿಹಾರ ಮೊತ್ತ ಪಾವತಿ ಆಗದಿರಬಹುದು. ಆದರೆ ಅಂಥವರ ಅರ್ಜಿ ತಿರಸ್ಕಾರಗೊಂಡಿಲ್ಲ. ದಾಖಲೆಗಳು ಸಮರ್ಪಕವಾಗಿ ನೀಡಿದ ಬಳಿಕ ಪರಿಹಾರ ಮೊತ್ತ ಜಮೆ ಆಗಲಿದೆ. ವಿಮಾ ಪರಿಹಾರ ದೊರೆಯದೇ ಇರುವವರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು. -ರೇಖಾ ಎ., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ, ಪುತ್ತೂರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.