252.50 ಕೋ.ರೂ. ಯೋಜನೆಗಳಿಗೆ ಚಾಲನೆ


Team Udayavani, Oct 20, 2017, 4:03 PM IST

Ramanatha-RAi-20.jpg

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 148.29 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ 104.21 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.22ರಂದು ನೆರವೇರಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 252.50 ಕೋ.ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ದೊರೆಯಲಿದೆ. ಕ್ಷೇತ್ರದ ಹಲವಾರು ಬಹು ನಿರೀಕ್ಷಿತ ಯೋಜನೆಗಳು ಅಂದು ಲೋಕಾರ್ಪಣೆ ಗೊಳ್ಳಲಿದ್ದು, ಜನತೆಯ ದೀರ್ಘ‌ಕಾಲದ ಬೇಡಿಕೆಗಳು ಈಡೇರಲಿವೆ. ಅಭಿವೃದ್ಧಿಯ ಪಥದಲ್ಲಿ ಬಂಟ್ವಾಳ ಕ್ಷೇತ್ರ ಹೊಸ ಮೈಲುಗಲ್ಲನ್ನೇ ತಲುಪಿದೆ ಎಂದವರು ಹೇಳಿದರು. 

ಬಿ.ಸಿ.ರೋಡ್‌ನ‌ಲ್ಲಿ 90 ಸೆಂಟ್ಸ್‌ ವಿಸ್ತೀರ್ಣದ ಜಮೀನಿನಲ್ಲಿ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮಿನಿ ವಿಧಾನಸೌಧ (ಕಟ್ಟಡದ ವಿಸ್ತೀರ್ಣ 3225 ಚ.ಮೀ.), ಬಂಟ್ವಾಳದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಿದ ನಿರೀಕ್ಷಣಾ ಮಂದಿರ, ಬಿ.ಸಿ. ರೋಡ್‌ನ‌ಲ್ಲಿ 1.50 ಎಕ್ರೆ ನಿವೇಶನದಲ್ಲಿ ಅಂದಾಜು 10.07 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೆ.ಎಸ್‌.ಆರ್‌.ಟಿ.ಸಿ ನೂತನ ಹೈಟೆಕ್‌ ಬಸ್‌ ನಿಲ್ದಾಣ ಗಳನ್ನು ಉದ್ಘಾಟಿಸಲಾಗುವುದು. 

ಬಂಟ್ವಾಳದ 30 ಹಾಸಿಗೆಗಳ ತಾಲೂಕು ಸರಕಾರಿ ಆಸ್ಪತ್ರೆ ಯನ್ನು ಅಂದಾಜು 6.15 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆ ಗೇರಿಸಲಾಗಿದೆ. ಬಿ.ಮೂಡ ಗ್ರಾಮದಲ್ಲಿ 5.16 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ಮೆಸ್ಕಾಂ ಕಟ್ಟಡ ಉದ್ಘಾ ಟನೆಗೊಳ್ಳಲಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ನೇತ್ರಾವತಿ ನದಿ ಯನ್ನು ಮೂಲ ವಾಗಿರಿಸಿ ಕೊಂಡು ಬಂಟ್ವಾಳ ಪಟ್ಟಣಕ್ಕೆ 52.79 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ನೀರು ಸರಬರಾಜು ಯೋಜನೆಯ ಕಾಮಗಾರಿ, ಬಂಟ್ವಾಳ ಐಬಿ ಪಕ್ಕದಲ್ಲಿ ನೇತ್ರಾವತಿ ನದಿ ತೀರದಲ್ಲಿ 35 ಲಕ್ಷ ರೂ. ವೆಚ್ಚದಲ್ಲಿ ಅರಣ್ಯ ಇಲಾಖೆ ನಿರ್ಮಿಸಿದ ಟ್ರೀ ಪಾರ್ಕ್‌, ಬಂಟ್ವಾಳಕ್ಕೆ ಮಂಜೂರುಗೊಳಿಸಲಾದ ನೂತನ ಆರ್‌ಟಿಒ ಕಚೇರಿಗೆ ಚಾಲನೆ ನೀಡಲಾಗು ವುದು ಎಂದವರು ಹೇಳಿದರು.

ಶಂಕುಸ್ಥಾಪನೆಯಾಗಲಿರುವ
ಯೋಜನೆಗಳು

ಬಂಟ್ವಾಳ ತಾಲೂಕಿನ ನರಿಕೊಂಬು, ಬಾಳ್ತಿಲ, ಗೋಳ್ತಮಜಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ 39 ಜನವಸತಿ ಪ್ರದೇಶಗಳಿಗೆ ನೀರು ಒದಗಿಸುವ 16.97 ಕೋಟಿ ರೂ. ವೆಚ್ಚದ ನರಿಕೊಂಬು ಯೋಜನೆ, 29.93 ಕೋಟಿ ರೂ. ವೆಚ್ಚದ ಸರಪಾಡಿ, ನಾವೂರು, ಬಡಗಕಜೆಕಾರು, ಕಾವಳಪಡೂರು, ಕಾವಳ ಮೂಡೂರು, ಪಿಲಾತಬೆಟ್ಟು, ಇರ್ವತ್ತೂರು, ಉಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ 97 ಜನವಸತಿ ಪ್ರದೇಶಗಳಿಗೆ ನೀರು ಒದಗಿಸುವ ಸರಪಾಡಿ ಯೋಜನೆಗೆ ಸಿಎಂ ಶಂಕುಸ್ಥಾಪನೆ ನೆರವೇರಿ ಸುವರು. 16.46 ಕೋಟಿ ರೂ. ವೆಚ್ಚದಲ್ಲಿ ಮಾಣಿ, ಪೆರಾಜೆ, ಅನಂತಾಡಿ, ನೆಟ್ಲಮುಟ್ನೂರು, ಕಡೇಶ್ವಾಲ್ಯ, ಬರಿಮಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ 51 ಜನವಸತಿ ಪ್ರದೇಶಗಳಿಗೆ ನೀರು ಒದಗಿಸುವ ಯೋಜನೆಗೂ ಶಿಲಾನ್ಯಾಸ ನೆರವೇರಿಸ ಲಾಗುವುದು. 

ಅರಳ ಗ್ರಾಮದ ಮೂಲರಪಟ್ನ ಎಂಬಲ್ಲಿ 4.85 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ, ಬಿ.ಮೂಡ ಗ್ರಾಮದಲ್ಲಿ 51 ಸೆಂಟ್ಸ್‌ ನಿವೇಶನದಲ್ಲಿ 5 ಕೋಟಿ ರೂ. ವೆಚ್ಚ ದಲ್ಲಿ ಪಂಜೆ ಮಂಗೇಶರಾಯರ ಸ್ಮಾರಕ ಭವನ, ಅಜಿಲಮೊಗರು  ಕಡೇಶ್ವಾಲ್ಯ ನಡುವೆ ನೇತ್ರಾವತಿ ನದಿಗೆ 31 ಕೋಟಿ. ರೂ ವೆಚ್ಚದಲ್ಲಿ ಸೇತುವೆ ನಿರ್ಮಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸ ಲಾಗುವುದು ಎಂದು ಅವರು ವಿವರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಕುಮಾರ್‌, ಜಿಲ್ಲಾ ಎಸ್ಪಿ ಸುಧೀರ್‌ ರೆಡ್ಡಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್‌.ಖಾದರ್‌ ಉಪಸ್ಥಿತರಿದ್ದರು.

145 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ
ಸಚಿವ ರಮಾನಾಥ ರೈ ಮಾತನಾಡಿ, ಬಂಟ್ವಾಳ ತಾಲೂಕಿನ ಕನ್ಯಾನ, ಕರೋಪಾಡಿ, ಕೊಳ್ನಾಡು ಮತ್ತು ವಿಟ್ಲಪಟ್ನೂರು ಗ್ರಾಮಗಳ 79 ಜನವಸತಿ ಪ್ರದೇಶಗಳಿಗೆ ನೀರು ಒದಗಿ ಸುವ ಯೋಜನೆ 25.82 ಕೋಟಿ ರೂ. ವೆಚ್ಚದ ಕರೋಪಾಡಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಹಾಗೂ 34.95 ಕೋಟಿ. ರೂ. ವೆಚ್ಚದಲ್ಲಿ ಸಂಗಬೆಟ್ಟು, ಕುಕ್ಕಿಪ್ಪಾಡಿ, ಚೆನ್ನೈತ್ತೋಡಿ, ರಾಯಿ, ಅರಳ, ಪಂಜಿಕಲ್ಲು, ಅಮಾrಡಿ, ಕಳ್ಳಿಗೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ 66 ಜನವಸತಿ ಪ್ರದೇಶಗಳಿಗೆ ನೀರು ಒದಗಿಸುವ ಯೋಜನೆಗೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದರು. 

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.