3 ತಿಂಗಳೊಳಗೆ ಪಕ್ಷ  ಪುನರ್‌ ಸಂಘಟನೆ


Team Udayavani, Apr 16, 2017, 12:17 PM IST

moily.jpg

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಮುಂದಿನ 3 ತಿಂಗಳ ಒಳಗೆ ರಾಷ್ಟ್ರೀಯ ಸಮಿತಿಯಿಂದ ಬೂತ್‌ ಮಟ್ಟದ ವರೆಗೆ ಕಾಂಗ್ರೆಸ್‌ ಪಕ್ಷದ ಪುನರ್‌ ಸಂಘಟನೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಲಿ ತಿಳಿಸಿದರು.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಯ ರೋಡ್‌ ಮ್ಯಾಪ್‌ ಸಿದ್ಧಗೊಳ್ಳುತ್ತಿದೆ. ಸೋಲಿನ ಮೇಲೆ ಸೋಲುಂಡವರ ಬದಲಾವಣೆ ಅನಿವಾರ್ಯ. ರಾಜ್ಯದಲ್ಲೂ ಅಗತ್ಯ ಇರುವ ಕಡೆ ಬದಲಾವಣೆಯಾಗಲಿದೆ ಎಂದರು. ಜನರ ವಿಶ್ವಾಸ ಗಳಿಸಬೇಕಾದರೆ ಯುವಕರನ್ನು ಸೇರಿಸಿಕೊಂಡು ಜನಪರ ಚಟುವಟಿಕೆ ನಡೆಸಬೇಕು ಎಂದರು. 

ಸಿದ್ದುಗೆ ಹೆಚ್ಚಿನ ಜವಾಬ್ದಾರಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಬಂದ ಬಳಿಕ ಅವರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಸಹಜವಾಗಿಯೇ ಅವರು ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರುತ್ತಾರೆ. ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷ ಈ ಅವಧಿಗಿಂತ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದರು.

ಪಕ್ಷ ಒಡೆಯಲು ದಲಿತ ವಿಷಯ ದಲಿತ ಮುಖ್ಯಮಂತ್ರಿ ಚರ್ಚೆ ನಡೆಯುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಗತಿಪರ ಮನೋಭೂಮಿಕೆ ಹಾಗೂ ಪಕ್ಷದ ಸಿದ್ಧಾಂತವನ್ನು ಶೇ. 100ರಷ್ಟು ಅಳವಡಿಸಿರುವ ವ್ಯಕ್ತಿ ಮುಖ್ಯಮಂತ್ರಿಯಾಗುವುದು ಮುಖ್ಯ. ಕಾಂಗ್ರೆಸ್‌ ಜಾತ್ಯತೀತ ಪಕ್ಷ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್‌ ಪಕ್ಷ ಒಡೆಯುವ ಉದ್ದೇಶದಿಂದ ದಲಿತ ಮುಖ್ಯಮಂತ್ರಿ ಚರ್ಚೆ ಬೆಳೆಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ಗೆ ಹಾನಿಯಾಗಿಲ್ಲ: ಎಸ್‌.ಎಂ. ಕೃಷ್ಣ ಪಕ್ಷ ತೊರೆದಿರುವುದರಿಂದ ಕಾಂಗ್ರೆಸ್‌ಗೆ ಹಾನಿಯಾಗಿಲ್ಲ. ಅವರು ಬಿಜೆಪಿ ಪರ ಪ್ರಚಾರ ನಡೆಸಿರುವುದರಿಂದ ಕಾಂಗ್ರೆಸ್‌ಗೆ ಲಾಭವೇ ಆಗಿದೆ ಎಂದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ  ತಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದಲ್ಲಿ ತಾನು ಈಗಾಗಲೇ ಅತ್ಯುತ್ತಮ ಅವಕಾಶ ಪಡೆದಿದ್ದೇನೆ ಎಂದರು.

ಪುತ್ರ ಹರ್ಷ ಮೊಲಿ ಅವರನ್ನು ಚುನಾವಣಾ ಕಣಕ್ಕೆ ಇಳಿಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ, ಈ ಬಗ್ಗೆ ನಾನು ಯಾವುದೇ ಉತ್ತೇಜನ ನೀಡುವುದಿಲ್ಲ. ಪುತ್ರನಿಗೆ ಆಸಕ್ತಿ ಮತ್ತು ಧೈರ್ಯ ಇದ್ದರೆ ರಾಜಕೀಯಕ್ಕೆ ಬರಲಿ; ನನ್ನ ಅಭ್ಯಂತರ ಇಲ್ಲ ಎಂದು ಹೇಳಿದರು. 

ಗಣ್ಯರಾದ ಕೆ. ತೋಜೋಮಯ, ಹಯಾತುಲ್ಲಾ ಕಾಮಿಲ್‌, ಅಶೋಕ್‌ ಕುಮಾರ್‌ ಡಿ.ಕೆ., ಪ್ರಭಾಕರ ಶ್ರೀಯಾನ್‌ ಮೊದಲಾದವರು ಉಪಸ್ಥಿತರಿದ್ದರು.

ಇವಿಎಂ ಇತ್ಯರ್ಥಕ್ಕೆ ಸಮಿತಿ ರಚಿಸಬೇಕು

ಕೆಲವು ರಾಜ್ಯಗಳಲ್ಲಿ ಚುನಾವಣೆ ಸಂದರ್ಭ ಎಲೆಕ್ಟ್ರಾನಿಕ್ಸ್‌ ಮತ ಯಂತ್ರದ ಲೋಪದ ಕುರಿತು ವಿಪಕ್ಷಗಳು ಮುಂದಿಟ್ಟಿರುವ ಅನುಮಾನಗಳನ್ನು ಇತ್ಯರ್ಥಪಡಿಸುವಂತೆ ಕಾಂಗ್ರೆಸ್‌ ನಿಯೋಗ ರಾಷ್ಟ್ರಪತಿಗೆ ಮನವಿಸಲ್ಲಿಸಿದೆ. ಈ ಕುರಿತು ಸಂಶಯ ನಿವಾರಣೆಗೆ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. 

– ವೀರಪ್ಪ ಮೊಲಿ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.