ಪದವಿ ತರಗತಿ ಆರಂಭಕ್ಕೆ ಇನ್ನೂ 3 ತಿಂಗಳು!

ದ್ವಿತೀಯ ಪಿಯು ಫ‌ಲಿತಾಂಶ ಪ್ರಕಟಗೊಂಡರೂ ಕಾಯುವಿಕೆ ಅನಿವಾರ್ಯ

Team Udayavani, Jun 12, 2022, 7:25 AM IST

ಪದವಿ ತರಗತಿ ಆರಂಭಕ್ಕೆ ಇನ್ನೂ 3 ತಿಂಗಳು!

ಮಂಗಳೂರು: ಮಾಸಾಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡರೂ ಪದವಿ ತರಗತಿಗೆ ಸೇರಬೇಕಾದರೆ ವಿದ್ಯಾರ್ಥಿಗಳು ಕನಿಷ್ಠ 3 ತಿಂಗಳು ಕಾಯಬೇಕು. ಯಾಕೆಂದರೆ ಮಂಗಳೂರು ವಿಶ್ವ ವಿದ್ಯಾ ನಿಲಯ ವ್ಯಾಪ್ತಿಯಲ್ಲಿ 2022-23ರ ಶೈಕ್ಷಣಿಕ ವರ್ಷ ಆರಂಭವಾಗುವುದು ಅಕ್ಟೋಬರ್‌ ಒಂದರಿಂದ!

ವಿ.ವಿ.ಯ 2021-22ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ 2, 4 ಮತ್ತು 6ನೇ ಸೆಮಿಸ್ಟರ್‌ನ ತರಗತಿ ಗಳು ಆ. 30ಕ್ಕೆ ಕೊನೆಗೊಳ್ಳಲಿವೆ. ಸೆ. 2ರಿಂದ ಪರೀಕ್ಷೆ. ಹೀಗಾಗಿ ಅಷ್ಟು ಸಮಯ ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ಸಿಗದು. ಒಂದು ವೇಳೆ ದಾಖಲಾತಿಯಾದರೂ 3 ತಿಂಗಳು ಕಲಿಕೆಯಿಂದ ದೂರ ವಿರಬೇಕಾಗುತ್ತದೆ.

ಆನ್‌ಲೈನ್‌ ಆರಂಭವಾಗಲಿ
ಪ್ರಸಕ್ತ ವರ್ಷ ಸಂಕ್ರ ಮಣದ ಕಾಲ. ಹೀಗಾಗಿ ದ್ವಿತೀಯ ಪಿಯು ಫಲಿತಾಂಶ ಬಂದ ತತ್‌ಕ್ಷಣವೇ ಕಾಲೇಜಿಗೆ ವಿದ್ಯಾರ್ಥಿಗಳ ದಾಖಲಾತಿ ಮಾಡಿ ಆನ್‌ಲೈನ್‌ ತರಗತಿ ಪ್ರಾರಂಭಿಸಲು ಅವಕಾಶ ಸಿಕ್ಕಿದರೆ ಉತ್ತಮ ಅಥವಾ ಕ್ರೀಡಾ ಚಟುವಟಿಕೆಗೆ ಆದ್ಯತೆ ನೀಡ ಬಹುದು. ಕೊರೊನಾ 4ನೇ ಅಲೆ ಬಾರದಿದ್ದರೆ ಮುಂದಿನ ಶೈಕ್ಷಣಿಕ ವರ್ಷ ಹಿಂದಿನಂತೆ ಹಳಿಗೆ ಬರಲಿದೆ ಎಂದು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ ಹೆಬ್ಟಾರ್‌ ಸಿ. ಹೇಳಿದ್ದಾರೆ.

ಯಾಕೆ ಸಮಸ್ಯೆ?
ಸಾಮಾನ್ಯವಾಗಿ ಜೂನ್‌ನಲ್ಲಿ ಪದವಿ ತರಗತಿಗಳು ಆರಂಭ ವಾಗುತ್ತವೆ. ಆದರೆ ಕೊರೊನಾ ಕಾರಣ ಎರಡು ವರ್ಷಗಳಿಂದ ಶೈಕ್ಷಣಿಕ ವೇಳಾಪಟ್ಟಿಯೇ ಅದಲು ಬದಲಾಗಿದೆ. ಜೂನ್‌ನಲ್ಲಿ ಮುಗಿಯ ಬೇಕಿದ್ದ ಪದವಿ ತರಗತಿ ಗಳು ಈಗಲೂ ನಡೆಯುತ್ತಿವೆ. ಹೀಗಾಗಿ ಮುಂದಿನ 3 ತಿಂಗಳು ಕಾಲೇಜಿನಲ್ಲಿ ಹೊಸ ತರಗತಿಗೆ ಕೊಠಡಿ ಅಲಭ್ಯ ಮತ್ತು ಉಪನ್ಯಾಸಕರ ಕೊರತೆಯೂ ಆಗಲಿದೆ. ಇದರಿಂದಾಗಿ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ಪಾಠಕ್ಕಾಗಿ ಕಾಯಲೇಬೇಕಾದ ಅನಿವಾರ್ಯ ಇದೆ. ಈ ಬಾರಿ ಅಕ್ಟೋಬರ್‌ನಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾದರೆ ಮುಂದಿನ ವರ್ಷಕ್ಕೆ ಎಲ್ಲವೂ ಹಿಂದಿನಂತೆಯೇ ಸಹಜ ಸ್ಥಿತಿಗೆ ಬರಲಿವೆ ಎಂಬುದು ಉಪನ್ಯಾಸಕರೊಬ್ಬರ ಅಭಿಪ್ರಾಯ.

ದಾಖಲಾತಿಗೆ ಅನುಮತಿ: ವಿ.ವಿ. ಚಿಂತನೆ
ಕೆಲವು ಸ್ವಾಯತ್ತ ಕಾಲೇಜುಗಳು ಈಗಾಗಲೇ ಪದವಿ ದಾಖಲಾತಿ ಆರಂಭಿಸಿವೆ. ಸರಕಾರಿ, ಪದವಿ ಕಾಲೇಜುಗಳಲ್ಲಿ ದ್ವಿತೀಯ ಪಿಯು ಫಲಿತಾಂಶಕ್ಕೆ ಕಾಯಲಾಗುತ್ತಿದೆ. ಆ ವೇಳೆಗೆ ವಿ.ವಿ.ಯಿಂದ ಅನುಮತಿ ದೊರೆಯದಿದ್ದರೆ ವಿದ್ಯಾರ್ಥಿಗಳು, ಕಾಲೇಜುಗಳಿಗೆ ಸಮಸ್ಯೆ ಯಾಗಲಿದೆ. ಇದನ್ನು ಮನಗಂಡ ವಿ.ವಿ.ಯು ಪಿಯು ಫಲಿತಾಂಶ ಬಂದ ತತ್‌ಕ್ಷಣವೇ ವಿದ್ಯಾರ್ಥಿಗಳ ದಾಖಲಾತಿಗೆ ಅನುಮತಿ ನೀಡುವ ಮಹತ್ವದ ತೀರ್ಮಾನ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಪ್ರಸಕ್ತ ಶೈಕ್ಷಣಿಕ ವರ್ಷ ಪೂರ್ಣ
ಗೊಳ್ಳುವ ಮುನ್ನ ದ್ವಿ. ಪಿಯು ಫಲಿತಾಂಶ ಬಂದರೆ ಕಾಲೇಜುಗಳಲ್ಲಿ ತರಗತಿ ಕೋಣೆ, ಉಪನ್ಯಾಸಕರ ಲಭ್ಯತೆ ಸಹಿತ ಕೆಲವು ಸವಾಲುಗಳು ಎದುರಾಗಲಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
– ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಮಂಗಳೂರು ವಿ.ವಿ. ಕುಲಪತಿ

-  ದಿನೇಶ್‌ ಇರಾ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.