ವಾಡಿಕೆ ಮೀರುತ್ತಿದೆ ಹಿಂಗಾರು ಮಳೆ

3 ತಿಂಗಳು ಸುರಿಯಬೇಕಾದ ಮಳೆ ಮೂರೇ ವಾರಕ್ಕೆ ಸುರಿಯಿತು !

Team Udayavani, Oct 27, 2019, 5:10 AM IST

z-38

ಸಾಂದರ್ಭಿಕ ಚಿತ್ರ

ಮಂಗಳೂರು: ಕರಾವಳಿಯಲ್ಲಿ ಮುಂದಿನ ಮೂರು ತಿಂಗಳಲ್ಲಿ ಸುರಿಯಬೇಕಾದ ಹಿಂಗಾರು ಮಳೆ ಕೇವಲ ಮೂರು ವಾರದಲ್ಲಿ ಸುರಿದು, ವಾಡಿಕೆಯ ಗುರಿ ತಲುಪಿದೆ. ಹಿಂಗಾರು ಮಾರುತ ಅಪ್ಪಳಿಸುವ ಮೊದಲು ಕರಾವಳಿ ಭಾಗದಲ್ಲಿ ಬಿಸಿಲು, ಮೋಡ ಮತ್ತು ಸೆಕೆಯಿಂದ ಕೂಡಿದ ವಾತಾವರಣವಿತ್ತು. ಮಳೆಯೂ ಕಡಿಮೆ ಇತ್ತು. ಇದರಿಂದ ಈ ಬಾರಿಯ ಹಿಂಗಾರು ಉತ್ತಮವಾಗಿರಲಾರದು ಎಂದು ಹವಾಮಾನ ಇಲಾಖೆ ಅಂದಾಜಿಸಿತ್ತು. ಆದರೆ ಇಲಾಖೆಯ ಲೆಕ್ಕಾಚಾರ ತಲೆಕೆಳಗಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಕರಾವಳಿಯಲ್ಲಿ ಹಿಂಗಾರು ಮಳೆ ಅಕ್ಟೋಬರ್‌ನಿಂದ ಡಿಸೆಂಬರ್‌ ಅಂತ್ಯದ ವರೆಗೆ ಇರುತ್ತದೆ. ಈ ಅವಧಿಯಲ್ಲಿ ವಾಡಿಕೆಯಂತೆ ಸರಾಸರಿ 261 ಮಿ.ಮೀ. ಮಳೆ ಸುರಿಯಬೇಕು. ಆದರೆ ಕೇವಲ ಮೂರು ವಾರದಲ್ಲಿ 414.30 ಮಿ.ಮೀ. ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಒಂದೂವರೆ ಪಟ್ಟು ಹೆಚ್ಚಿದಂತಾಗಿದೆ.

ಕರಾವಳಿಯಲ್ಲಿ ಅ. 1ರಿಂದ 25ರ ವರೆಗೆ ವಾಡಿಕೆ ಯಂತೆ 158.30 ಮಿ.ಮೀ. ಮಳೆಯಾಗಬೇಕಿದ್ದು, ಈಗಾಗಲೇ 414.30 ಮಿ.ಮೀ. ಮಳೆ ಸುರಿದು ನಿರೀಕ್ಷೆಗಿಂತ ಶೇ.162ರಷ್ಟು ಹೆಚ್ಚಳವಾಗಿದೆ. ದ.ಕ.ದಲ್ಲಿ 217.70 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 397.45 ಮಿ.ಮೀ. ಮಳೆಯಾಗಿ ಶೇ.83 ರಷ್ಟು ಹೆಚ್ಚಳವಾಗಿದೆ. ಉಡುಪಿಯಲ್ಲಿ 177.60 ಮಿ.ಮೀ. ಮಳೆಯಾಗಬೇಕಿದ್ದರೂ 518.43 ಮಿ.ಮೀ. ಮಳೆಯಾಗಿ ಶೇ.192ರಷ್ಟು ಹೆಚ್ಚಳವಾಗಿದೆ. ಉತ್ತರ ಕನ್ನಡದಲ್ಲಿ 123.30 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದರೆ ಈಗಾಗಲೇ 386.03 ಮಿ.ಮೀ.ನಷ್ಟು ಮಳೆ ಬಂದು ಶೇ.213ರಷ್ಟು ಹೆಚ್ಚಳವಾಗಿದೆ.

ಗುರಿ ತಲುಪಿದ ಹಿಂಗಾರು
ಕರಾವಳಿಯಲ್ಲಿ ಕಳೆದ 3 ವರ್ಷ ಹಿಂಗಾರು ಅಷ್ಟೇನೂ ಉತ್ತಮವಾಗಿರಲಿಲ್ಲ. ಕಳೆದ 2 ವರ್ಷ ವಾಡಿಕೆಗಿಂತ ಶೇ. 28ರಷ್ಟು ಮಳೆ ಕೊರತೆಯಾಗಿತ್ತು. ಆದರೆ ಈ ಬಾರಿ ಹಿಂಗಾರು ಮಳೆ ಗುರಿ ತಲುಪಿದೆ.

ಅಡಿಕೆ, ಭತ್ತ ಬೆಳೆಗಾರರು ಕಂಗಾಲು
ಕರಾವಳಿ ಭಾಗದಲ್ಲಿ ಅಡಿಕೆ ಮತ್ತು ಭತ್ತ ಪ್ರಮುಖ ಬೆಳೆ. ಭಾರೀ ಮಳೆಯಿಂದಾಗಿ ಬೆಳೆಗಾರರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಭತ್ತ ಪೈರು ಕಟಾವಿಗೆ ಬಂದಿದ್ದು, ಕೊಯ್ಯಲು ಕಷ್ಟವಾಗುತ್ತಿದೆ. ಈ ಬಾರಿ ಅಡಿಕೆ ತುಸು ಬೇಗ ಹಣ್ಣಾದ ಕಾರಣ ಮರದಿಂದ ಬೀಳಲು ಆರಂಭಿಸಿದೆ, ಒಣಗಿಸುವುದು ಕಷ್ಟವಾಗುತ್ತಿದೆ ಎಂದು ಕೃಷಿ ಆರ್ಥಿಕ ತಜ್ಞ ವಿಘ್ನೇಶ್ವರ ವರ್ಮುಡಿ ಅವರು “ಉದಯವಾಣಿ”ಗೆ ತಿಳಿಸಿದ್ದಾರೆ.

ನೀರಿನ ಮಟ್ಟ ಏರಿಕೆ
ಕರಾವಳಿಯಲ್ಲಿ ಈ ಬಾರಿ ಮುಂಗಾರು ಜತೆ ಹಿಂಗಾರು ಕೂಡ ಉತ್ತಮವಾಗಿರುವ ಪರಿಣಾಮ ಬೇಸಗೆಯಲ್ಲಿಯೂ ಅಂತರ್ಜಲ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ನದಿಗಳಲ್ಲಿ ನೀರಿನ ಮಟ್ಟ ಕೂಡ ಏರಿಕೆಯಾಗಿದೆ. ಹಿಂಗಾರು ಮಳೆ ಹೀಗೆಯೇ ಮುಂದುವರಿದರೆ ಬಹಳಷ್ಟು ಕಡೆ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಕಡಿಮೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ಕಳೆದ ಕೆಲವು ವರ್ಷಗಳಲ್ಲೇ ಈ ಬಾರಿ ಅಧಿಕ ಹಿಂಗಾರು ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕಳೆದ 43 ವರ್ಷಗಳಲ್ಲೇ ಈ ಬಾರಿಯ ಹಿಂಗಾರು ಉತ್ತಮವಾದದ್ದು.
– ಶ್ರೀನಿವಾಸ ರೆಡ್ಡಿ , ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅಧ್ಯಕ್ಷ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.