ಅನರ್ಹ ಬಿಪಿಎಲ್‌ ಪಡಿತರದಾರರಿಂದ ವಸೂಲಾದ ದಂಡ 30.13 ಲಕ್ಷ ರೂ.

ಮುಂದುವರಿದ ಅಕ್ರಮ ಕಾರ್ಡ್‌ದಾರರ ಬೇಟೆ

Team Udayavani, Jan 23, 2020, 4:49 AM IST

led-21

ಮಹಾನಗರ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ದ.ಕ. ಜಿಲ್ಲೆಯಲ್ಲಿನ ಅನರ್ಹ ಬಿಪಿಎಲ್‌ ಕಾರ್ಡ್‌ ದಾರರನ್ನು ಪತ್ತೆ ಹಚ್ಚಿ ನಾಲ್ಕು ತಿಂಗಳುಗಳಲ್ಲಿ ಸಂಗ್ರಹಿಸಿದ ಒಟ್ಟು 30,13,718 ರೂ. ದಂಡದ ಮೊತ್ತವನ್ನು ಸರಕಾರಕ್ಕೆ ಪಾವತಿಸಿದೆ. ಸದ್ಯ ದಂಡ ಸಂಗ್ರಹ ನಿಲ್ಲಿಸಲಾಗಿದ್ದರೂ, ಅಕ್ರಮ ಬಿಪಿಎಲ್‌ ಕಾರ್ಡ್‌ದಾರರ ಬೇಟೆ ಮುಂದುವರಿದಿದೆ.

ಜಿಲ್ಲೆಯಲ್ಲಿ ಕಳೆದ ಆಗಸ್ಟ್‌ ತಿಂಗಳಿನಿಂದ ಅಕ್ರಮ ಬಿಪಿಎಲ್‌ ಪಡಿತರದಾರರ ಪತ್ತೆ ಕಾರ್ಯ ಆರಂಭವಾಗಿದೆ. ಅರ್ಹತೆ ಇಲ್ಲದಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಮುಲಾಜಿಲ್ಲದೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಡಿಸೆಂಬರ್‌ ತಿಂಗಳಾಂತ್ಯದವರೆಗೆ ನಡೆಸಲಾಗಿತ್ತು. ಇದರಿಂದ ಹಲವರು ತಾವಾಗಿಯೇ ಕಾರ್ಡ್‌ ಹಸ್ತಾಂತರಿಸಿದರೆ, ಬಹುತೇಕ ಮಂದಿಯನ್ನು ಇಲಾಖೆ ಅಧಿಕಾರಿಗಳೇ ಹುಡುಕಿ ದಂಡ ವಿಧಿಸಿದ್ದರು. ಅಕ್ರಮ ಬಿಪಿಎಲ್‌ ಕಾರ್ಡ್‌ದಾರರನ್ನು ಪತ್ತೆ ಹಚ್ಚಲು ಆರ್‌ಟಿಒ ಸಹಾಯ ಪಡೆಯಲಾಗಿತ್ತು.

ಬೆಳ್ತಂಗಡಿಯಲ್ಲಿ ಹೆಚ್ಚು ದಂಡ ಸಂಗ್ರಹ
ಡಿಸೆಂಬರ್‌ ತಿಂಗಳಾಂತ್ಯದವರೆಗೆ ಒಟ್ಟು 30,13,718 ರೂ. ದಂಡ ಸಂಗ್ರಹಿಸಿ ಸದ್ಯ ಈ ಮೊತ್ತವನ್ನು ಸರಕಾರಕ್ಕೆ ಪಾವತಿಸಲಾಗಿದೆ. ಆ ಮೂಲಕ ಬಡವರಿಗಾಗಿ ಇದ್ದ ಯೋಜನೆಯನ್ನು ಬಡವರಿಗೆ ನೀಡಲು ಹೆಚ್ಚಿನ ಅನುಕೂಲವಾದಂತಾಗಿದೆ. ಬೆಳ್ತಂಗಡಿಯಲ್ಲಿ 8,07,738 ರೂ. ದಂಡ ಸಂಗ್ರಹವಾಗುವ ಮೂಲಕ ಜಿಲ್ಲೆಯಲ್ಲೇ ಅತಿ ಹೆಚ್ಚು ದಂಡ ಇಲ್ಲಿ ಸಂಗ್ರಹವಾದಂತಾಗಿದೆ. ಉಳಿದಂತೆ ಮಂಗಳೂರು ಅನೌಪಚಾರಿಕ ಪಡಿತರ ಪ್ರದೇಶದಲ್ಲಿ 3,63,339 ರೂ., ಮಂಗ ಳೂರು ತಾಲೂಕಿನಲ್ಲಿ 5,14,323 ರೂ., ಬಂಟ್ವಾಳ    5,24,224 ರೂ., ಪುತ್ತೂರಿನಲ್ಲಿ 4,95,255 ರೂ., ಸುಳ್ಯದಲ್ಲಿ 3,08,839 ರೂ. ದಂಡವನ್ನು ಸಂಗ್ರಹಿಸಲಾಗಿದೆ.

ಸದ್ಯ ದಂಡ ಸಂಗ್ರಹ ಇಲ್ಲ
ದಂಡ ಸಂಗ್ರಹ ಮಾಡದಂತೆ ನಾಗರಿಕರು ಸರಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸದ್ಯ ದಂಡ ಸಂಗ್ರಹ ಪ್ರಕ್ರಿಯೆ ಸ್ಥಗಿತಗೊಂಡಿದೆ. ಆದರೆ ಅನರ್ಹ ಬಿಪಿಎಲ್‌ ಪತ್ತೆ ಕಾರ್ಯ ಮುಂದುವರಿದಿದ್ದು, ಜನವರಿ 21ರ ವರೆಗೆ 5,928 ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಎಪಿಎಲ್‌ಗೆ ಬದಲಾಯಿಸಲಾಗಿದೆ. ಈ ಪೈಕಿ ಮಂಗಳೂರು ನಗರದಲ್ಲಿ 293, ಗ್ರಾಮಾಂತರದಲ್ಲಿ 798, ಬಂಟ್ವಾಳದಲ್ಲಿ 1,216, ಪುತ್ತೂರಿನಲ್ಲಿ 1,169, ಬೆಳ್ತಂಗಡಿಯಲ್ಲಿ 1,673, ಸುಳ್ಯದಲ್ಲಿ 661 ಕಾರ್ಡ್‌ಗಳನ್ನು ಪತ್ತೆ ಹಚ್ಚಲಾಗಿದೆ. ಕೆಲವರು ಅವರಾಗಿಯೇ ಇಲಾಖೆಗೆ ಒಪ್ಪಿಸಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪತ್ತೆ ಹಚ್ಚುವ ಕಾರ್ಯ
ಪ್ರಸ್ತುತ ಬಿಪಿಎಲ್‌ ಕಾರ್ಡ್‌ ಹೊಂದಿರುವ ಅನರ್ಹರು ಅವರಾಗಿಯೇ ಕಾರ್ಡ್‌ನ್ನು ಇಲಾಖೆಗೆ ಒಪ್ಪಿಸುತ್ತಿದ್ದಾರೆ. ಹೀಗಾಗಿ ದಂಡ ಸಂಗ್ರಹ ನಡೆಯುತ್ತಿಲ್ಲ. ಅನರ್ಹರನ್ನು ಪತ್ತೆ ಹಚ್ಚುವ ಕಾರ್ಯ ನಿರಂತರವಾಗಿ ನಡೆಯಲಿದೆ.
 - ಡಾ| ಮಂಜುನಾಥನ್‌, ಜಂಟಿ ನಿರ್ದೇಶಕರು , ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.