ಲಾಕ್ಡೌನ್ ಸಡಿಲಿಕೆ ಬಳಿಕ 31 ಕೋವಿಡ್-19 ಪ್ರಕರಣ
ಕಟ್ಟುನಿಟ್ಟಿನ ಸಾಮಾಜಿಕ ಅಂತರ ಪಾಲನೆ, ಜಾಗ್ರತೆ ಅಗತ್ಯ
Team Udayavani, May 21, 2020, 5:45 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮಂಗಳೂರು ನಗರ ಪ್ರದೇಶದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ.
ಕೋವಿಡ್-19 ಲಾಕ್ ಡೌನ್ ಸಡಿಲಿಕೆ ಅನಂತರ ಮಂಗಳೂರಿನಲ್ಲಿ ಕೋವಿಡ್-19 ಸೋಂಕಿತರ ಪ್ರಕರಣ ಸಂಖ್ಯೆ ಏರುತ್ತಿದೆ. ಬುಧವಾರ (ಮೇ 20) ನಗರದ ನೀರುಮಾರ್ಗ ಸಮೀಪದ ಮಹಿಳೆಗೂ ಕೋವಿಡ್-19 ಪಾಸಿಟವ್ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಮಂಗಳೂರು ನಗರದಲ್ಲಿಯೇ (ದುಬಾೖ ಪ್ರಯಾಣಿಕರು ಸೇರಿ) ಇದೀಗ ಒಟ್ಟು 26 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಮೇ 4ರಿಂದ ಲಾಕ್ಡೌನ್ನಲ್ಲಿ ಸಡಿಲಿಕೆ ಬಳಿಕ ಜಿಲ್ಲೆಯಲ್ಲಿ ಒಟ್ಟು 31 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಮೇ 12ರಂದು 176 ಕನ್ನಡಿಗರನ್ನು ದುಬಾೖಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವಿಶೇಷ ವಿಮಾನದಲ್ಲಿ ಒಟ್ಟು 96 ಮಂದಿ ದ.ಕ. ಜಿಲ್ಲೆಯ ಪ್ರಯಾಣಿಕರಿದ್ದರು. ಇವರೆಲ್ಲರೂ ಮಂಗಳೂರಿನಲ್ಲಿ ಕ್ವಾರಂಟೈನ್ನಲ್ಲಿದ್ದರು. ಈ ಪೈಕಿ 15 ಮಂದಿಗೆ ಕೋವಿಡ್-19 ದೃಢಪಟ್ಟಿತ್ತು. ಜಿಲ್ಲೆಯಲ್ಲಿ ಒಂದೇ ದಿನ ದಾಖಲಾದ ಅತೀ ಹೆಚ್ಚಿನ ಪ್ರಕರಣ ಇದಾಗಿತ್ತು.
ಲಾಕ್ಡೌನ್ ಸಡಿಲಿಕೆಯಾದಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಿಧಾನವಾಗಿ ಆರಂಭವಾಗುತ್ತಿದೆ. ಅಂಗಡಿ ಮುಂಗಟ್ಟು ತೆರೆದಿದ್ದು,ಕೆಎಸ್ಸಾರ್ಟಿಸಿ ಬಸ್ ಆರಂಭಗೊಂಡಿದೆ. ವಾಹನ ಸಂಚಾರ ಕೂಡ ಆರಂಭವಾಗಿದೆ. ಹೀಗಿದ್ದಾಗ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಆದರೆ ಇದನ್ನು ಅಷ್ಟಾಗಿ ಪಾಲಿಸುತ್ತಿಲ್ಲ,
ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆ
ಜಿಲ್ಲೆಯಲ್ಲಿ ಈವರೆಗೆ 55 ಪ್ರಕರಣಗಳಲ್ಲಿ ಭಟ್ಕಳ-1, ಕಾಸರಗೋಡು-4, ಕಾರ್ಕಳ-3, ತೊಕ್ಕೊಟ್ಟು-1, ತುಂಬೆ-1, ಸಜೀಪ-1, ಪುತ್ತೂರು-1, ಸುಳ್ಯ-1, ಉಪ್ಪಿನಂಗಡಿ-2, ಕರಾಯ-1 ಬಂಟ್ವಾಳ ಪೇಟೆ-11, ದುಬಾೖಯಿಂದ ವಿಶೇಷ ವಿಮಾನದ ಮೂಲಕ ಜಿಲ್ಲೆ ಗೆ ಪ್ರಯಾಣ ಬೆಳೆಸಿದವರು -15, ಬೋಳೂರು 5, ಶಕ್ತಿನಗರ-2, ಯೆಯ್ಯಾಡಿ-2, ಜೆಪ್ಪು ಪಟ್ಣ-1, ಸುರತ್ಕಲ್-1, ನೀರುಮಾರ್ಗ-1, ಉಳ್ಳಾಲ-1 ಪ್ರಕರಣ ದಾಖಲಾಗಿತ್ತು. ಈ ಪೈಕಿ ಸದ್ಯ 20 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 30 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್-19ದಿಂದ ಜಿಲ್ಲೆಯಲ್ಲಿ ಐದು ಸಾವು
ಕೋವಿಡ್-19 ಜಿಲ್ಲೆಯಲ್ಲಿ ಒಟ್ಟು ಐದು ಮಂದಿಯನ್ನು ಬಲಿತೆಗೆದುಕೊಂಡಿದೆ. ಬಂಟ್ವಾಳ ಮೂಲದ ಮೂರು ಮಹಿಳೆ ಸಹಿತ ಮಂಗಳೂರು ನಗರದ ಬೋಳೂರು ಮತ್ತು ಶಕ್ತಿನಗರದ ಮಹಿಳೆ ಈಗಾಗಲೇ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ