ಅಂಬೇಡ್ಕರ್‌ ಭವನಕ್ಕೆ  3.10 ಕೋ.ರೂ.


Team Udayavani, Jul 30, 2018, 10:22 AM IST

30-july-2.jpg

ಸುಳ್ಯ : ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಅಪೂರ್ಣ ಸ್ಥಿತಿಯಲ್ಲಿ ಇರುವ ಅಂಬೇಡ್ಕರ್‌ ಭವನಕ್ಕೆ 2ನೇ ಹಂತದ 50 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ. 3.10 ಕೋಟಿ ರೂ. ಪ್ರಸ್ತಾವನೆಯಲ್ಲಿ ಈ ಅನುದಾನ ಬಿಡುಗಡೆಗೊಂಡಿರುವ ಪತ್ರ ಕೈ ಸೇರಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಮಗಾರಿ ಆರಂಭದ ಬಗ್ಗೆ ರಾಜ್ಯ ಅಥವಾ ಜಿಲ್ಲಾಡ ಳಿತ ಮುಂದಿನ ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿದೆ.

ಯಡಿಯೂರಪ್ಪ ಸರಕಾರದ ಕೊನೆ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆ 1 ಕೋಟಿ ರೂ. ಅನುದಾನದಲ್ಲಿ ತಾಲೂಕು ಅಂಬೇಡ್ಕರ್‌ ಭವನ ನಿರ್ಮಿಸುವ ಪ್ರಸ್ತಾವ ಸಲ್ಲಿಸಿತ್ತು. ಮೊದಲ ಹಂತದಲ್ಲಿ 50 ಲಕ್ಷ ರೂ. ಬಿಡುಗಡೆಗೊಂಡಿತ್ತು. ಕೃಷಿ ಇಲಾಖೆ ಸನಿಹದಲ್ಲಿ ಕಾಮಗಾರಿ ಆರಂಭಿಸಲಾಯಿತು. ತಳಪಾಯ, ಪಿಲ್ಲರ್‌ ನಿರ್ಮಾಣ ಕೆಲಸ ನಡೆದು, ಅನುದಾನ ಬರಲಿಲ್ಲ ಎನ್ನುವ ಕಾರಣಕ್ಕೆ ಸ್ಥಗಿತಗೊಂಡಿತ್ತು. ಬರೋಬ್ಬರಿ ನಾಲ್ಕು ವರ್ಷ ಕೆಲಸ ಸ್ಥಗಿತವಾಗಿ ಪಿಲ್ಲರ್‌ನ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿವೆ. ಅಡಿಪಾಯದಲ್ಲಿ ಪೊದೆ ತುಂಬಿ ಭೂತ ಬಂಗಲೆಯಂತೆ ಗೋಚರಿಸಿದೆ.

ಅನುದಾನ ಯಾವುದು?
ಈ ಹಿಂದೆ 1 ಕೋಟಿ ರೂ. ಮಂಜೂರಾತಿಯಲ್ಲಿ ಮಾಡಿದ ಅಡಿಪಾಯ ಕಾಮಗಾರಿಗೆ 50 ಲಕ್ಷ ರೂ. ಖರ್ಚಾಗಿದ್ದು, ಆ ಹಣವೇ ಬಂದಿಲ್ಲ ಎಂದು ಶಾಸಕ ರಾದಿಯಾಗಿ ಅನೇಕ ಆರೋಪ ಕೇಳಿ ಬಂದಿತ್ತು. ಆದರೆ ಸಮಾಜ ಕಲ್ಯಾಣ ಇಲಾಖೆ ಹೇಳುವ ಪ್ರಕಾರ, 1 ಕೋಟಿ ರೂ. ಪ್ರಸ್ತಾವನೆ ಬದಲಾಯಿಸಿ, 3.10 ಕೋಟಿ ರೂ.ಗೆ ಏರಿಸಲಾಗಿತ್ತು. ಅದರಲ್ಲಿ ಮೊದಲ ಹಂತದಲ್ಲಿ 75 ಲಕ್ಷ ರೂ. ಬಿಡುಗಡೆಯಾಗಿದೆ. ನಿರ್ಮಿತಿ ಕೇಂದ್ರ ಕಾಮಗಾರಿ ಉಸ್ತುವಾರಿ ವಹಿಸಿತ್ತು. ಆದರೆ ಹಣ ಬಿಡುಗಡೆಯಾಗಿದ್ದರೆ ಅದು ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಸಂಸ್ಥೆಗೆ ಸಿಗಬೇಕಿತ್ತು. ಆದರೆ ಸಿಕ್ಕಿಲ್ಲ ಎನ್ನುವ ಆರೋಪ ಇದ್ದು, ಗೊಂದಲ ಮೂಡಿದೆ. ಇಲ್ಲಿ 1 ಕೋಟಿ ರೂ. ಮತ್ತು 3.10 ಕೋಟಿ ರೂ. – ಎರಡೂ ಪ್ರಸ್ತಾವನೆಗಳಿಗೆ ಮಂಜೂರಾತಿ ಸಿಗಲು ಸಾಧ್ಯವಿಲ್ಲ. 50 ಲಕ್ಷ ರೂ. ಎರಡನೆ ಹಂತದ್ದು, ಮೊದಲ ಹಂತದ 75 ಲಕ್ಷ ರೂ. ಯಾರಿಗೆ ಪಾವತಿ ಆಗಿದೆ ಎನ್ನುವ ಜಿಜ್ಞಾಸೆ ಮೂಡಿದೆ.

ಚರ್ಚಾ ವಸ್ತು 
ವಿಧಾನಸಭಾ ಚುನಾವಣೆಯಲ್ಲಿ ಅಂಬೇಡ್ಕರ್‌ ಭವನ ನನೆಗುದಿಗೆ ಬಿದ್ದಿರುವ ವಿಚಾರ, ಆಡಳಿತ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ಮಧ್ಯೆ ಆರೋಪ- ಪ್ರತ್ಯಾರೋಪಕ್ಕೆ ವೇದಿಕೆ ಕಲ್ಪಿಸಿತ್ತು. ಬಿಜೆಪಿ ಸರಕಾರ ಮಂಜೂರು ಮಾಡಿದ ಅನುದಾನವನ್ನು ಕಾಂಗ್ರೆಸ್‌ ಸರಕಾರ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿದರೆ, 25 ವರ್ಷ ಅಧಿಕಾರದಲ್ಲಿದ್ದು, ಅನುದಾನ ತರಿಸಲು ಆಗದಿರುವುದು ಶಾಸಕರ ವೈಫಲ್ಯ ಎಂದು ಕಾಂಗ್ರೆಸ್‌ ಪ್ರತ್ಯಾರೋಪ ಮಾಡಿತ್ತು.

 ಪತ್ರ ಬಂದಿದೆ
50 ಲಕ್ಷ ರೂ. ಅನುದಾನ ಬಿಡುಗಡೆಯಾಗಿರುವ ಕುರಿತು ಪತ್ರ ಬಂದಿದೆ. ಈ ಹಿಂದೆ 75 ಲಕ್ಷ ರೂ. ಬಿಡುಗಡೆ ಆಗಿತ್ತು. ಇದು 2ನೇ ಹಂತದ ಅನುದಾನ. 50 ಲಕ್ಷ ರೂ. ಅನುದಾನ ಕಾಮಗಾರಿ ಅನುಷ್ಠಾನದ ಬಗ್ಗೆ ರಾಜ್ಯ ಅಥವಾ ಜಿಲಾಮಟ್ಟದಲ್ಲಿ ತೀರ್ಮಾನವಾಗುತ್ತದೆ.
– ಚಂದ್ರಶೇಖರ ಪೇರಾಲು
ಸಮಾಜ ಕಲ್ಯಾಣ ಇಲಾಖಾಧಿಕಾರಿ (ಪ್ರಭಾರ) ಸುಳ್ಯ 

ಕಿರಣ್‌ ಪ್ರಸಾದ್‌ ಕುಂಡಡ್ಕ 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.