ನೀರಿನ ಬಿಲ್‌ ಬಾಕಿ: ಮುಖ್ಯ ಕಡತಕ್ಕೆ ತಾಳೆಯಾಗದ ಅಂಕಿ-ಅಂಶ

34ನೇ ನೆಕ್ಕಿಲಾಡಿ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ವಿಷಯ ಬಹಿರಂಗಪಡಿಸಿದ ಪಿಡಿಒ

Team Udayavani, Sep 9, 2019, 5:57 AM IST

809UPG1

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾ.ಪಂ.ಗೆ ಲಕ್ಷಾಂತರ ರೂ. ಕುಡಿಯುವ ನೀರಿನ ಬಿಲ್‌ ಬರಲು ಬಾಕಿಯಿದೆ. ಆದರೆ ಬಿಲ್‌ ವಸೂಲಿ ಗಾರರು ನೀಡುತ್ತಿರುವ ನೀರಿನ ಬಿಲ್‌ ಬಾಕಿ ಇಟ್ಟಿರುವವರ ಪಟ್ಟಿಗೂ ಇಲ್ಲಿನ ಮುಖ್ಯ ಕಡತ ದಲ್ಲಿರುವ ಅಂಕಿಅಂಶಕ್ಕೂ ತಾಳೆಯಾಗುತ್ತಿಲ್ಲ ಎನ್ನುವ ವಿಷಯವನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಬಹಿರಂಗಪಡಿಸಿದ ಘಟನೆ 34ನೇ ನೆಕ್ಕಿಲಾಡಿಯ ಸಾಮಾನ್ಯ ಸಭೆಯಲ್ಲಿ ನಡೆದಿದೆ.34ನೇ ನೆಕ್ಕಿಲಾಡಿ ಗ್ರಾ.ಪಂ.,ನೀರಿನ ಬಿಲ್‌

ಗ್ರಾ.ಪಂ. ಅಧ್ಯಕ್ಷೆ ರತಿ ಎಸ್‌. ನಾಯ್ಕ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ತಸ್ತಾವಿಸಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್‌, 2018-19ನೇ ಮಾರ್ಚ್‌ ಅಂತ್ಯದ ವೇಳೆಗೆ ಸುಮಾರು 3 ಲಕ್ಷ ರೂ.ಗೂ ಅಧಿಕ ನೀರಿನ ಬಿಲ್‌ ಗ್ರಾ.ಪಂ.ಗೆ ಬರಲು ಬಾಕಿ ಇತ್ತು. ಹೊಸ ವರದಿ ವರ್ಷದಲ್ಲಿಯೂ ಹಳೆಯ ಬಾಕಿಯಲ್ಲದೆ ಇನ್ನಷ್ಟು ಲಕ್ಷ ರೂ.ಗಳು ಅದಕ್ಕೆ ಕೂಡಿಕೊಂಡಿವೆ ಎಂದರು.

ಸಂಪರ್ಕ ಕಡಿತಗೊಳಿಸಿ
ಈ ಬಗ್ಗೆ ಚರ್ಚೆ ನಡೆಸಿದ ಸದಸ್ಯರು, ಕುಡಿಯುವ ನೀರಿನ ಬಿಲ್‌ ಪಾವತಿಸದಿದ್ದರೆ ಗ್ರಾ.ಪಂ. ಆದಾಯಕ್ಕೆ ಪೆಟ್ಟು ಬೀಳುತ್ತದೆ. ಕುಡಿಯುವ ನೀರಿನ ಬಿಲ್‌ ಪಾವತಿಸದವರ ಬಗ್ಗೆ ಯಾವುದೇ ಮುಲಾಜು ಬೇಡ. ಅಂತಹವರ ನಳ್ಳಿ ಸಂಪರ್ಕವನ್ನೇ ಕಡಿತಗೊಳಿಸಬೇಕು ಎಂದರು.

ಪಿಡಿಒ ಜಯಪ್ರಕಾಶ್‌ ಮಾತನಾಡಿ, ಲಕ್ಷಾಂತರ ರೂಪಾಯಿ ಕುಡಿಯುವ ನೀರಿನ ಬಿಲ್‌ ಬಾಕಿಯಿದ್ದರೂ ಗ್ರಾ.ಪಂ.ನ ಬಿಲ್‌ ವಸೂಲಿಗಾರರು ನೀಡುವ ಗ್ರಾ.ಪಂ.ಗೆ ಬರಬೇಕಾದ ನೀರಿನ ಬಿಲ್‌ನ ಲೆಕ್ಕ ಸಾವಿರದಲ್ಲಿದೆ. ಪಂಚಾಯತ್‌ನಲ್ಲಿರುವ ನೀರಿನ ಬಿಲ್‌ ವಸೂಲಾತಿಯ ಕಡತಕ್ಕೂ ಅವರು ನೀಡುವ ಪಟ್ಟಿಗೂ ತಾಳೆಯಾಗುತ್ತಲೇ ಇಲ್ಲ. ಇದೇ ಸರಿಯಿಲ್ಲದಾಗ ಕುಡಿಯುವ ನೀರಿನ ಗ್ರಾಹಕರ ಮೇಲೆ ಹೇಗೆ ಕ್ರಮ ತೆಗೆದುಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಸೆ. 16ಕ್ಕೆ ವಿಶೇಷ ಸಭೆ
ಈ ಬಗ್ಗೆ ಕುಡಿಯುವ ನೀರಿನ ಬಿಲ್‌ ವಸೂಲಿಗಾರರನ್ನು ಸಭೆಯಲ್ಲಿ ಸದಸ್ಯರು ವಿಚಾರಿಸಿದರು. ಒಂದು ವಾರದೊಳಗೆ ಕುಡಿಯುವ ನೀರಿನ ಬಿಲ್‌ ಬಾಕಿ ಇರಿಸಿದವರ ಸಮರ್ಪಕ ಪಟ್ಟಿಯನ್ನು ನಮಗೆ ನೀಡಬೇಕು ಎಂದು ಗಡುವು ನೀಡಿ, ಸೆ. 16ರಂದು ಸದಸ್ಯರ ವಿಶೇಷ ಸಭೆ ಕರೆದು ಬಿಲ್‌ ವಸೂಲಿಗಾರರು ನೀಡಿದ ಪಟ್ಟಿ ಹಾಗೂ ಗ್ರಾ.ಪಂ.ನ ದಾಖಲೆ ಪರಿಶೀಲಿಸೋಣ. ಬಳಿಕ ಕುಡಿಯುವ ನೀರಿನ ಬಿಲ್‌ ಬಾಕಿಯಿಟ್ಟವರ ಮೇಲೆ ಯಾವ ಕ್ರಮ ಕೈಗೊಳ್ಳುವುದು? ಅದರ ವಸೂಲಾತಿ ಹೇಗೆ ಮಾಡುವುದು? ಎನ್ನುವುದನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳೋಣ ಎಂದು ಒಮ್ಮತದ ಅಭಿಪ್ರಾಯಕ್ಕೆ ಸದಸ್ಯರು ಬಂದರು.

ಪೈಪ್‌ ದುರಸ್ತಿ:
ಸದಸ್ಯರಿಗೆ ಹೊಣೆ
ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿ ಯುವ ನೀರಿನ ಸಂಪರ್ಕ ಪೈಪುಗಳು ಹಾನಿಗೀಡಾದಲ್ಲಿ ಸಣ್ಣ ಪುಟ್ಟ ದುರಸ್ತಿಯಿದ್ದರೂ ನೀರಗಂಟಿಗಳು ಮಾಡುತ್ತಿಲ್ಲ. ಒಂದೋ ಪೈಪ್‌ಗ್ಳ ದುರಸ್ತಿ ಕೆಲಸ ನೀರಗಂಟಿಗಳೇ ಮಾಡ ಬೇಕು. ಇಲ್ಲವೇ ಗ್ರಾ.ಪಂ. ವ್ಯಾಪ್ತಿಗೆ ಕುಡಿಯುವ ನೀರಿನ ಪೈಪ್‌ ದುರಸ್ತಿಗೆಂದೇ ವ್ಯಕ್ತಿಯನ್ನು ನೇಮಿಸಬೇಕು ಎಂದು ಸದಸ್ಯರು ಆಗ್ರಹಿಸಿ ದರು. ಈ ಬಗ್ಗೆ ಚರ್ಚೆಯಾಗಿ ಗ್ರಾ.ಪಂ.ನ ವ್ಯಾಪ್ತಿಯಲ್ಲಿ ಎಲ್ಲೇ ಪೈಪ್‌ಗ್ಳು ಹಾನಿಗೊಂಡರೂ ಅದನ್ನು ದುರಸ್ತಿ ಮಾಡಿಸುವ ಹೊಣೆಗಾರಿಕೆಯನ್ನು ಗ್ರಾ.ಪಂ. ಸದಸ್ಯ ಮೈಕಲ್‌ ವೇಗಸ್‌ ಅವರಿಗೆ ನೀಡಲಾಯಿತು.

ಗ್ರಾ.ಪಂ. ಉಪಾಧ್ಯಕ್ಷ ಅಸ್ಕರ್‌ ಅಲಿ, ಸದಸ್ಯರಾದ ಶೇಖಬ್ಬ ಎನ್‌., ಪ್ರಶಾಂತ, ಬಾಬು, ಮೈಕಲ್‌ ವೇಗಸ್‌, ಸತ್ಯವತಿ, ಅನಿ ಮಿನೇಜಸ್‌, ಕೃಷ್ಣವೇಣಿ, ಯಮುನಾ ಉಪಸ್ಥಿತರಿದ್ದರು.ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್‌ ಸ್ವಾಗತಿಸಿ ವಂದಿಸಿದರು. ಸಿಬಂದಿ ಚಿತ್ರಾ ಸಹಕರಿಸಿದರು.

ತ್ಯಾಜ್ಯ ನಿರ್ವಹಣೆ: ಅಧ್ಯಯನ ಪ್ರವಾಸ
ನೆಕ್ಕಿಲಾಡಿ ಗ್ರಾ.ಪಂ.ಗೆ ಘನತ್ಯಾಜ್ಯ ಘಟಕಕ್ಕಾಗಿ 20 ಲಕ್ಷ ರೂ. ಅನುಮೋದನೆ ಸಿಕ್ಕಿದೆ. ಸುವ್ಯವಸ್ಥಿತವಾಗಿ ಇಲ್ಲಿ ಘಟಕವನ್ನು ಸ್ಥಾಪಿಸುವುದಕ್ಕಾಗಿ ಸಮರ್ಪಕವಾಗಿ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿರುವ ಇತರ ಗ್ರಾ.ಪಂ.ಗಳಿಗೆ ಭೇಟಿ ನೀಡಬೇಕಿದೆ. ಈ ಬಗ್ಗೆ ಆಸಕ್ತಿಯುಳ್ಳವರನ್ನು ಸೇರಿಸಿಕೊಂಡು ಗ್ರಾ.ಪಂ. ಸದಸ್ಯರು ಅಧ್ಯಯನ ಪ್ರವಾಸ ತೆರಳುವುದಾಗಿ ನಿರ್ಣಯಿಸಲಾಯಿತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.