370ನೇ ವಿಧಿ ರದ್ದತಿ: ಬಂಟ್ವಾಳದ ವ್ಯಕ್ತಿಗೆ ಪ್ರಧಾನಿ ಮೋದಿ ಪ್ರಶಂಸಾ ಪತ್ರ
Team Udayavani, Sep 25, 2019, 5:16 AM IST
ಬಂಟ್ವಾಳ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸುವಂತೆ ಬಂಟ್ವಾಳದ ವ್ಯಕ್ತಿಯೊಬ್ಬರು ಅನೇಕ ವರ್ಷಗಳಿಂದ ಹಲವು ಬಾರಿ ಪ್ರಧಾನಿ ಮೋದಿ ಅವರನ್ನು ಪತ್ರದ ಮೂಲಕ ಆಗ್ರಹಿಸಿದ್ದು, ಈಗ ವಿಧಿ ರದ್ದಾದ ಬಳಿಕ ಪ್ರಧಾನಿ ಕಚೇರಿಯಿಂದ ಅವರಿಗೆ ಪ್ರಶಂಸಾ ಪತ್ರವೊಂದು ಬಂದಿದೆ.
ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ಲಕ್ಷ್ಮೀನಾರಾಯಣ್ ಅವರು ಈ ವಿಚಾರವಾಗಿ ಹಲವು ಬಾರಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಆ. 21ರ ದಿನಾಂಕವಿರುವ ಪ್ರಶಂಸಾ ಪತ್ರ ಲಕ್ಷ್ಮೀನಾರಾಯಣ್ ಅವರ ಕೈಸೇರಿದೆ.
ಪತ್ರದ ಮೇಲ್ಗಡೆ ಅಶೋಕ ಚಕ್ರ ಲಾಂಛನ ಇದ್ದು, ವಿಶೇಷ ಸ್ಥಾನಮಾನ ರದ್ದತಿಯ ಕುರಿತು ಆಂಗ್ಲ ಭಾಷೆಯಲ್ಲಿ ವಿವರಿಸಲಾಗಿದೆ. ಮಂಗಳವಾರ ಬಿ.ಸಿ.ರೋಡ್ನಲ್ಲಿ ನಡೆದ ರಾಷ್ಟ್ರೀಯ ಏಕತಾ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಲಕ್ಷ್ಮೀನಾರಾಯಣ್ ಅವರನ್ನು ಗೌರವಿಸಿದರು.
ಸಮಾರಂಭದಲ್ಲಿ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಬಿಜೆಪಿ ಪ್ರಮುಖರಾದ ಬಿ. ದೇವದಾಸ ಶೆಟ್ಟಿ, ಸತೀಶ್ ಕುಂಪಲ, ಪೂಜಾ ಪೈ, ನಿವೃತ್ತ ಸೇನಾನಿ ರಾಮಯ್ಯ ಶೆಟ್ಟಿ ಸಂಪಿಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ