ದ. ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೋವಿಡ್ ಸಾವಿನ ಸರಣಿ: ಬಂಟ್ವಾಳದ ವೃದ್ಧ ಸಾವು
Team Udayavani, Jul 11, 2020, 4:49 PM IST
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಸಂಕಟ ಮುಂದುವರಿದಿದೆ. ಇಂದು ಬಂಟ್ವಾಳದಲ್ಲಿ ಸೋಂಕಿತ ವೃದ್ಧರೋರ್ವರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಕಳೆದ ಕೆಲವು ದಿನಗಳಿಂದ ಸೋಂಕು ದೃಢಪಟ್ಟು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ಯಿದ್ದ ಪುದು ಗ್ರಾಮದ ಮಾರಿಪಳ್ಳದ 85ರ ವೃದ್ಧ ಶನಿವಾರ ಮೃತಪಟ್ಟಿದ್ದಾರೆ.
ಹಲವು ವರ್ಷಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಕೋಇಡ್-19 ಸೋಂಕು ದೃಢಪಟ್ಟಿತ್ತು.
ಕೋವಿಡ್-19 ಸೋಂಕು ಬಂಟ್ವಾಳ ತಾಲೂಕಿನಲ್ಲಿ ಇದುವರೆಗೆ ಆರು ಜನರನ್ನು ಬಲಿ ಪಡೆದಿದೆ. ಜಿಲ್ಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.