4 ತಾಲೂಕುಗಳಲ್ಲಿ ಅಡಿಕೆ ಕೃಷಿಕರಿಗೆ ಕೊಳೆರೋಗದ ಆತಂಕ

ತೇವಾಂಶ ಜಾಸ್ತಿಯಿರುವ ತೋಟಗಳಲ್ಲಿ ತೀವ್ರ ಬಾಧೆ ; ಮಳೆಯ ವೈಪರೀತ್ಯವೂ ಕಾರಣ

Team Udayavani, Jul 15, 2019, 5:28 AM IST

1407RJH3

ಕೊಳೆರೋಗ ಬಾಧೆಗೆ ಬಿದ್ದ ಅಡಿಕೆ ನಳ್ಳಿ. (ಸಾಂದರ್ಭಿಕ ಚಿತ್ರ)

ಪುತ್ತೂರು: ಮಳೆಯ ವೈಪರೀತ್ಯದಿಂದಲೋ ಎಂಬಂತೆ ಈ ಬಾರಿಯೂ ಅಡಿಕೆ ತೋಟಗಳಲ್ಲಿ ಕೊಳೆರೋಗ ಆತಂಕ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಹಲವು ಬೆಳೆಗಾರರು ಅಡಿಕೆ ತೋಟಕ್ಕೆ ಔಷಧ ಸಿಂಪಡಣೆ ಮಾಡಿದ್ದರೂ ಕೊಳೆ ರೋಗದ ಲಕ್ಷಣ ಗೋಚರಿಸಿದೆ.

ಈ ಬಾರಿ ಅಡಿಕೆ ನಳ್ಳಿ ಬೆಳೆಯುವ ಸಂದರ್ಭದಲ್ಲಿ ಮಳೆ ಕಡಿಮೆ ಇತ್ತು. ಈ ಕಾರಣದಿಂದ ಬಹುತೇಕ ರೈತರಿಗೆ ಬೋಡೋì ದ್ರಾವಣ ಸಿಂಪಡಿಸಲು ಸಮರ್ಪಕ ಕಾಲಾವಕಾಶವೂ ಲಭಿಸಿದೆ. ಆದರೂ ಸುಳ್ಯ, ಬಂಟ್ವಾಳ, ಪುತ್ತೂರು ಸೇರಿದಂತೆ ನದಿ ಸಮೀಪವಿರುವ ಅಡಿಕೆ ತೋಟಗಳಲ್ಲೇ ಕೊಳೆರೋಗ ಲಕ್ಷಣ ಗೋಚರವಾಗಿದೆ.

ಹನಿ ನೀರಾವರಿ ಪೂರೈಸಿದ ಅಡಿಕೆ ತೋಟ ಹಾಗೂ ಬೇಸಗೆಯಲ್ಲಿ ನೀರಿಲ್ಲದೆ ಬರಡಾಗಿದ್ದ ಅಡಿಕೆ ತೋಟಗಳಿಗೆ ಈ ಬಾಧೆ ತುಸು ಕಡಿಮೆಯಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ತೇವಾಂಶ ಉಳಿಸಿಕೊಂಡ ತೋಡು, ಹೊಳೆ ಬದಿಗಳಲ್ಲಿ ಇರುವ ಅಡಿಕೆ ಮರಗಳಿಗೆ ಕೊಳೆರೋಗ ಬಾಧೆ ಕಾಣಿಸಿಕೊಂಡಿದೆ.

ಮಳೆ ಹಾಗೂ ಬಿಸಿಲಿನ ಹೊಯ್ದಾಟವೂ ಇದಕ್ಕೆ ಕಾರಣ ಎನ್ನುವುದು ಬೆಳೆಗಾರರ ಅಭಿಪ್ರಾಯ.

ಕಳೆದ ವರ್ಷ ವಿಪರೀತವಿತ್ತು
ಕಳೆದ ವರ್ಷ ಜಿಲ್ಲೆಯಲ್ಲಿ ಅಡಿಕೆ ಕೊಳೆರೋಗದ ಬಾಧೆ ವಿಪರೀತವಾಗಿ ಕಾಣಿಸಿಕೊಂಡಿತ್ತು. ಕಂದಾಯ ಇಲಾಖೆ ನಡೆಸಿದ ಬೆಳೆ ಸರ್ವೆ ಆಧಾರದಂತೆ ಕಳೆದ ವರ್ಷ ಸುಳ್ಯದಲ್ಲಿ ಅತೀ ಹೆಚ್ಚು 8,762 ಎಕ್ರೆ, ಪುತ್ತೂರಿನ 6,021 ಎಕ್ರೆ ಪ್ರದೇಶ ಕೊಳೆರೋಗ ಬಾಧೆಗೊಳಗಾಗಿ ಶೇ. 60ರಷ್ಟು ಬೆಳೆ ನಾಶವಾಗಿತ್ತು. ಬಂಟ್ವಾಳದಲ್ಲಿ 3,674 ಹಾಗೂ ಬೆಳ್ತಂಗಡಿ 7,642 ಎಕ್ರೆ ಪ್ರದೇಶ ಕೊಳೆರೋಗ ಬಾಧೆಗೊಳಲಾಗಿ ಶೇ. 49ರಷ್ಟು ಬೆಳೆ ನಾಶವಾಗಿತ್ತು. ತೀವ್ರ ಮಳೆಯ ನಡುವೆಯೂ ಬೋಡೋì ದ್ರಾವಣವನ್ನು ಸಿಂಪಡಿಸಿದರೂ ಕೊಳೆ ರೋಗ ನಿಯಂತ್ರಣಕ್ಕೆ ತರಲು ಸಾಧ್ಯವಾಗಿರಲಿಲ್ಲ.

ಉತ್ತಮ ಇಳುವರಿಗೆ ಕೊಳೆರೋಗವೇ ಅಡ್ಡಿ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 51,101 ಹೆಕ್ಟೇರ್‌ ಪ್ರದೇಶದಲ್ಲಿ ಅಡಕೆ ಬೆಳೆಯಿದ್ದು, 66,324 ಮೆಟ್ರಿಕ್‌ ಟನ್‌ ವಾಡಿಕೆಯ ಅಡಿಕೆ ಇಳುವರಿಯಾಗುತ್ತದೆ. ಆದರೆ ಇತ್ತೀಚೆಗೆ ಶೇ. 25ರಿಂದ 30ರಷ್ಟು ಇಳುವರಿ ಕೊಳೆರೋಗಕ್ಕೆ ತುತ್ತಾಗುತ್ತಿದೆ. ಕಳೆದ ಬಾರಿಯಂತೂ ಶೇ. 45ಕ್ಕಿಂತ ಅಧಿಕ ಅಡಿಕೆ ಮರಗಳು ಕೊಳೆರೋಗಕ್ಕೆ ತುತ್ತಾಗಿವೆ. ಪರಿಣಾಮವಾಗಿ 59,033 ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗಿದೆ.

ಬೋಡೋì ಸಿಂಪಡಿಸಿ
ಬೇಸಗೆಯಲ್ಲಿ ಹೆಚ್ಚಿನ ಪ್ರಮಾಣದ ನೀರುಣಿಸಿದ ತೋಟಗಳಲ್ಲಿ ಕೊಳೆರೋಗ ಬಾಧೆ ಕಂಡುಬಂದಿದೆ. ಮಳೆಗಾಲದಲ್ಲಿ ಸೂರ್ಯನ ಶಾಖ ಕಡಿಮೆ ಪ್ರಮಾಣದಲ್ಲಿದ್ದು, ತೇವಾಂಶ ಹೆಚ್ಚಾಗಿ ಕೊಳೆರೋಗ ಬಾಧೆ ಅಧಿಕವಾಗುತ್ತದೆ. ಮಳೆಗಾಲದಲ್ಲಿ ಎರಡು ಮೂರು ಬಾರಿ ಅಡಿಕೆ ತೋಟಗಳಿಗೆ ಬೋಡೋì ದ್ರಾವಣ ಸಿಂಪಡಿಸುವುದು ಅಗತ್ಯ..
– ಎಚ್‌.ಆರ್‌. ನಾಯಕ್‌ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು

ಸತತ ಪ್ರಯತ್ನ
ಕಳೆದ ಬಾರಿ ಅಡಿಕೆ ತೋಟಕ್ಕೆ ಬಾಧಿಸಿದ ಕೊಳೆರೋಗದ ಹೊಡೆತವನ್ನೇ ತಾಳಿಕೊಳ್ಳಲು ಸಾಧ್ಯವಾಗಿಲ್ಲ. ಈ ಬಾರಿಯೂ ಸಣ್ಣ ಪ್ರಮಾಣದಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಔಷಧ ಸಿಂಪಡಣೆಯ ಮೂಲಕ ರೋಗಬಾಧೆ ನಿಯಂತ್ರಣಕ್ಕೆ ಸತತ ಪ್ರಯತ್ನ ಪಡುತ್ತಿದ್ದೇವೆ.
– ಗಣೇಶ್‌
ಅಡಿಕೆ ಕೃಷಿಕರು, ಈಶ್ವರಮಂಗಲ

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.