404 ಡೆಂಗ್ಯೂ ಪ್ರಕರಣ ಪತ್ತೆ: ದ.ಕ. ಜಿಲ್ಲಾಧಿಕಾರಿ

ದ.ಕ.: 1 ಡೆಂಗ್ಯೂ ಸಾವು ದೃಢ; 3 ಮಾದರಿ ಮಣಿಪಾಲ ಆಸ್ಪತ್ರೆಗೆ

Team Udayavani, Jul 20, 2019, 5:50 AM IST

MANG-C

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಹಾವಳಿ ತೀವ್ರಗೊಂಡಿದ್ದು, ಇದುವರೆಗೆ 404 ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ತಿಳಿಸಿದ್ದಾರೆ.

ಇದುವರೆಗೆ ಜ್ವರದಿಂದ ಮೂವರು ಸಾವನ್ನಪ್ಪಿದ್ದು, ಒಬ್ಬರು ಮಾತ್ರ ಡೆಂಗ್ಯೂನಿಂದ ಎಂಬುದು ದೃಢಪಟ್ಟಿದೆ. ಇನ್ನಿಬ್ಬರ ಮತ್ತು ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಒಬ್ಬರ ಪ್ರಕರಣಗಳನ್ನು ಸಮಸ್ಯಾತ್ಮಕ ಎಂದು ಪರಿಗಣಿಸಿ, ರಕ್ತ ಮಾದರಿಗಳನ್ನು ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಡಬದಲ್ಲಿ 3 ವಾರಗಳ ಹಿಂದೆ ವೀಣಾ ನಾಯಕ್‌ ಅವರ ಸಾವು ಡೆಂಗ್ಯೂ ಜ್ವರದಿಂದಲೇ ಎಂದು ದೃಢಪಟ್ಟಿದೆ. ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿ ಕೆಲವು ದಿನಗಳ ಹಿಂದೆ ಕೃಷ್‌ (8) ಮತ್ತು ಜಪ್ಪು ಮಾರುಕಟ್ಟೆ ಬಳಿಯ ಗುಜ್ಜರಕೆರೆಯ ವಿದ್ಯಾರ್ಥಿನಿ ಶ್ರದ್ಧಾ ಕೆ. ಶೆಟ್ಟಿ ಅವರ ಸಾವಿನ ಬಗ್ಗೆ ಅನುಮಾನವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ. ಈ ಇಬ್ಬರ ಮತ್ತು ಶಂಕಿತ ಡೆಂಗ್ಯೂನಿಂದ ಬಳಲುತ್ತಿರುವ ವಾಹಿನಿಯೊಂದರ ಕೆಮರಾಮನ್‌ ನಾಗೇಶ್‌ ಪ್ರಕರಣಗಳನ್ನು ಸಮಸ್ಯಾತ್ಮಕ ಎಂದು ಪರಿಗಣಿಸಿ ಮಾದರಿಯನ್ನು ಮಣಿಪಾಲಕ್ಕೆ ಕಳುಹಿಸಲಾಗಿದೆ ಎಂದು ವಿವರಿಸಿದರು.

ಮಂಗಳೂರು ತಾಲೂಕಿನಲ್ಲಿ 253, ಬಂಟ್ವಾಳ 39, ಪುತ್ತೂರು 67, ಬೆಳ್ತಂಗಡಿ 27 ಮತ್ತು ಸುಳ್ಯದಲ್ಲಿ 23 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಶೇ. 90ರಷ್ಟು ಮಂದಿ ಚಿಕಿತ್ಸೆ ಪಡೆದು ಗುಣ ಹೊಂದಿದ್ದಾರೆ ಎಂದರು.

ಮಳೆ- ಬಿಸಿಲಿನ ವಾತಾವರಣದಿಂದ ಸೊಳ್ಳೆಗಳ ಉತ್ಪತ್ತಿ ತೀವ್ರಗೊಂಡು ಡೆಂಗ್ಯೂ ಉಲ್ಬಣಗೊಂಡಿದೆ. ಫಾಗಿಂಗ್‌ನಂತಹ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಮಾಂಡ್‌ ಸೆಂಟರ್‌ ಆರಂಭ
ಜಿಲ್ಲಾಡಳಿತ ಆರಂಭಿಸಿದ ಕಮಾಂಡ್‌ ಸೆಂಟರ್‌ನಡಿ ಹಿರಿಯ ಅಧಿಕಾರಿಗಳನ್ನು ಒಳಗೊಂಡ 4 ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಸರಕಾರಿ ಅಧಿಕಾರಿಗಳು, ವೈದ್ಯರಿಂದ ತಪಾಸಣೆ, ಪರಿಶೀಲನೆ, ಕ್ರಮಗಳ ಜತೆಗೆ ಖಾಸಗಿ ವೈದ್ಯರು, ಎನ್‌ಜಿಒಗಳಿಂದಲೂ ಪರಿಶೀಲನೆ ನಡೆಸಲಾಗುವುದು. ಈ ತಂಡಗಳ ಮುಖ್ಯಸ್ಥರು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿ ವರದಿ ಒದಗಿಸಲಿದ್ದಾರೆ ಎಂದರು.

ಮನೆಯೊಳಗೂ ಫಾಗಿಂಗ್‌ ಅಗತ್ಯ
ಕೆಲವು ಪ್ರದೇಶಗಳಲ್ಲಿ ಫಾಗಿಂಗ್‌ ನಡೆಸುತ್ತಿಲ್ಲ ಎಂಬ ದೂರು ಬಂದಿದೆ. ಜಪ್ಪು ಸಹಿತ ಸೊಳ್ಳೆಗಳು ಅಧಿಕವಾಗಿರುವಲ್ಲಿ ಮನೆಯೊಳಗೂ ಫಾಗಿಂಗ್‌ಗೆ ನಿರ್ದೇಶಿಸಲಾಗಿದೆ. ಜನತೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಪ್ಪು ಪ್ರದೇಶಕ್ಕೆ ಭೇಟಿ
ಗುಜ್ಜರಕೆರೆ ಬಳಿ ಜ್ವರಕ್ಕೆ ಬಲಿಯಾದ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸೊಳ್ಳೆಗಳ ಉತ್ಪತ್ತಿ ಮಾಡುವ ತಾಣಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ಸೊಳ್ಳೆ ಲಾರ್ವಾ ಕಾಣಿಸಿಕೊಂಡಲ್ಲಿ ಸಂಬಂಧಪಟ್ಟವರಿಗೆ ದಂಡ ವಿಧಿಸಲು ಸೂಚಿಸಲಾಗಿದೆ ಎಂದರು.

3 ತಜ್ಞ ವೈದ್ಯರ ಆಗಮನ
ಬೆಂಗಳೂರಿನಿಂದ ಮೂವರು ತಜ್ಞ ವೈದ್ಯರಾದ ಡಾ| ಮುಹಮ್ಮದ್‌ ಶರೀಫ್, ಡಾ| ರವಿ ಮತ್ತು ಡಾ| ಆರ್‌.ಜಿ. ಪ್ರಕಾಶ್‌ ಆಗಮಿಸಿದ್ದು ಡೆಂಗ್ಯೂ ಪ್ರಕರಣಗಳ ಮೇಲ್ವಿಚಾರಣೆ, ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಶಂಕಿತ ಡೆಂಗ್ಯೂ: ವಿದ್ಯಾರ್ಥಿನಿ ಸಾವು
ಜಪ್ಪು ಮಾರುಕಟ್ಟೆ ಸಮೀಪದ ಗುಜ್ಜರಕೆರೆ ಬಳಿಯ ಕಿಶೋರ್‌ ಶೆಟ್ಟಿ ಮತ್ತು ಶಾರದಾ ಶೆಟ್ಟಿ ದಂಪತಿಯ ಪುತ್ರಿ ಶ್ರದ್ಧಾ ಕೆ. ಶೆಟ್ಟಿ ಶಂಕಿತ ಡೆಂಗ್ಯೂ ಕಾಯಿಲೆಗೆ ಗುರುವಾರ ಬಲಿಯಾಗಿದ್ದಾರೆ. ಈಕೆ ನಗರದ ಜೆರೊಸಾ ಪ್ರಾಥಮಿಕ ಶಾಲೆಯ 7ನೆ ತರಗತಿಯ ವಿದ್ಯಾರ್ಥಿನಿ. ಈಕೆಯ ಅಕ್ಕ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದು, ಇಬ್ಬರಿಗೂ ಎರಡು ವಾರದ ಹಿಂದೆ ಜ್ವರ ಬಂದಿತ್ತು. ಕಳೆದ ಶುಕ್ರವಾರ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಕ ಕಳೆದ ಮಂಗಳವಾರ ಗುಣಮುಖರಾಗಿ ಮನೆಗೆ ಮರಳಿದ್ದರೆ, ತಂಗಿ ಶ್ರದ್ಧಾ ಮಂಗಳವಾರ ರಾತ್ರಿ ಕೋಮಾ ತಲುಪಿದ್ದರು. ಆಕೆಯನ್ನು ನಗರದ ಇನ್ನೊಂದು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಗುರುವಾರ ಸಂಜೆ 6.30ಕ್ಕೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು.

ಶ್ರದ್ಧಾ ಕಲಿಯುತ್ತಿದ್ದ ಶಾಲೆಗೆ ಶುಕ್ರವಾರ ರಜೆ ಘೋಷಿಸಿ ಸಂತಾಪ ಸೂಚಿಸಲಾಗಿದ್ದು, ಪರೀಕ್ಷೆಗಳನ್ನು ಶನಿವಾರಕ್ಕೆ ಮುಂದೂಡಲಾಗಿದೆ. ವಿದ್ಯಾರ್ಥಿನಿಯ ಮನೆಗೆ ಡಿಸಿ ಶಶಿಕಾಂತ ಸೆಂಥಿಲ್‌, ಮನಪಾ ಆಯುಕ್ತ ಮುಹಮ್ಮದ್‌ ನಝೀರ್‌ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.