ಮೂರು ವಾರಗಳಲ್ಲಿ 4,343 ಪ್ರಕರಣ; 26 ಲಕ್ಷ ರೂ. ಸಂಗ್ರಹ !

ಟ್ರಾಫಿಕ್‌ ದಂಡ ಪ್ರಯೋಗ

Team Udayavani, Sep 28, 2019, 5:00 AM IST

w-4

ಮಹಾನಗರ: ಮೋಟಾರ್‌ ವಾಹನ ಕಾಯ್ದೆ ತಿದ್ದುಪಡಿ ಜಾರಿಗೆ ಬಂದ ಬಳಿಕ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮೂರು ವಾರಗಳಲ್ಲಿ ಒಟ್ಟು 4,343 ಪ್ರಕರಣ ದಾಖಲಿಸಿ 26.24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಮೋಟಾರ್‌ ವಾಹನ ಕಾಯ್ದೆ ತಿದ್ದುಪಡಿ ಮಾಡಿ, ಕೇಂದ್ರ ಸರಕಾರ ದುಬಾರಿ ದಂಡ ವಿಧಿಸಿತ್ತು. ಆದರೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದುಬಾರಿ ದಂಡಕ್ಕೆ ಬ್ರೇಕ್‌ ಹಾಕಿ, ದಂಡದ ಮೊತ್ತವನ್ನ ಇಳಿಸಿತ್ತು. ಇದರಂತೆ ನಗರದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನನು ಕ್ರಮ ಜರಗಿಸಲಾಗಿದೆ. ಬೆಂಗಳೂರಿಗೆ ಹೋಲಿಸಿದರೆ ನಗರದಲ್ಲಿ ದಾಖಲಾದ ಕೇಸುಗಳ ಸಂಖ್ಯೆ ಬಹಳಷ್ಟು ಕಡಿಮೆ.

ನೋ ಪಾರ್ಕಿಂಗ್‌, ಹೆಲ್ಮೆಟ್‌ ಧರಿಸದ ಕೇಸುಗಳು ಹೆಚ್ಚು
ನಗರದಲ್ಲಿ ವಾಹನ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬುದಾಗಿ ಸಾರ್ವಜನಿಕರು ದೂರುತ್ತಿರುವ ಬೆನ್ನಲ್ಲೇ ದುಬಾರಿ ದಂಡದ ಬಿಸಿ ತಟ್ಟಲಾರಂಭಿಸಿದೆ. ಅದಕ್ಕೆ ಪೂರಕವಾಗಿಯೇ ಇತ್ತೀಚೆಗೆ ದಾಖಲಾದ ದುಬಾರಿ ದಂಡಗಳಲ್ಲಿ ನೋ ಪಾರ್ಕಿಂಗ್‌ ಸ್ಥಳಗಳಲ್ಲಿ ಗಾಡಿ ನಿಲುಗಡೆ ಮಾಡಿರುವ ಪ್ರಕರಣಗಳು ಹೆಚ್ಚಾಗಿವೆ. ಸದ್ಯ ದಾಖಲಾದ ದೂರುಗಳಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲುಗಡೆ ಮಾಡಿರುವುದು, ಹೆಲ್ಮೆಟ್‌ ಧರಿಸದೆ ಪ್ರಯಾಣಿಸಿರುವ ಪ್ರಕರಣಗಳೇ ಹೆಚ್ಚು. ಸೆ. 7ರಿಂದ ದುಬಾರಿ ದಂಡ ಹಾಕಲು ಆರಂಭಿಸಲಾಗಿದ್ದು, ಸೆ. 26ರ ವರೆಗೆ ಸುಮಾರು 26,24,000 ರೂ. ದಂಡ ವಿವಿಧ ಪ್ರಕರಣಗಳಲ್ಲಿ ಸಂಗ್ರಹವಾಗಿದೆ.

ಕೇಸ್‌ಗಳ ಸಂಖ್ಯೆ ಇಳಿಮುಖ
ನಗರದಲ್ಲಿ ಮೋಟಾರ್‌ ವಾಹನ ಕಾಯ್ದೆ ತಿದ್ದುಪಡಿಯಡಿ ಜಾರಿಗೆ ಬಂದ ಬಳಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಆದರೆ ದಂಡದ ಮೊತ್ತ ಹೆಚ್ಚಿರುವ ಕಾರಣ ಒಟ್ಟಾರೆ ಮೊತ್ತ ದೊಡ್ಡದಾಗಿ ಕಾಣುತ್ತಿದೆ. ಸೆ. 7ಕ್ಕಿಂತ ಮೊದಲು ದಿನಕ್ಕೆ 500ರಿಂದ 988ರ ವರೆಗೆ ಹಲವು ವಿಭಾಗಗಳಲ್ಲಿ ದೂರುಗಳು ದಾಖಲಾಗುತ್ತಿದ್ದವು.

ಆದರೆ ಈಗ ದಿನಕ್ಕೆ 500ಕ್ಕಿಂತ ಕಡಿಮೆ ದೂರುಗಳೇ ದಾಖಲಾಗುತ್ತಿವೆ. ಹೆಚ್ಚಿನ ವಾಹನ ಸವಾರರು ಎಲ್ಲ ದಾಖಲೆ ಗಳೊಂದಿಗೆ ಸಂಚಾರ ನಿಯಮಗಳನ್ನು ಪಾಲಿಸುತ್ತಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಸೆ. 7ರ ಹಿಂದಿನ ಕೇಸುಗಳ ದಂಡವೂ ಕೆಲವರು ಈಗ ಪಾವತಿಸುತ್ತಿದ್ದಾರೆ. ಈ ಹಿಂದೆ ದಾಖಲಾದ ದೂರುಗಳಿಗೆ ಹಿಂದಿನ ದಂಡವೇ ಮುಂದುವರಿಯಲಿದೆ. ಆದರೆ ವಾಹನ ತಪಾಸಣೆಗೆ ನಿಲುಗಡೆ ಮಾಡಿದಾಗ ಹಿಂದೆ ನಿಯಮ ಉಲ್ಲಂಘಿಸಿ ದಂಡ ಪಾವತಿಸದ ವಾಹನ ಸವಾರರ ಮಾಹಿತಿ ಲಭಿಸುತ್ತಿದ್ದು, ಅವರಿಂದ ಅದನ್ನು ಪಾವತಿಸುವ ಕೆಲಸವಾಗುತ್ತಿದೆ.

ಸಂಚಾರ ನಿಯಮ ಪಾಲಿಸಿ
ಸಂಚಾರ ನಿಯಮಗಳನ್ನು ಸರಿ ಯಾಗಿ ಪಾಲಿಸಿದರೆ ದಂಡ ಕಟ್ಟುವ ಪ್ರಮೇಯವೇ ಬರುವುದಿಲ್ಲ. ಹಾಗಾಗಿ ವಾಹನ ಸವಾರರು ಕಟ್ಟು ನಿಟ್ಟಾಗಿ ನಿಯಮಗಳನ್ನು ಪಾಲಿಸಿ. ದುಬಾರಿ ದಂಡ ಬಿದ್ದ ಬಳಿಕ ದಾಖಲಾಗುತ್ತಿರುವ ಕೇಸುಗಳ ಸಂಖ್ಯೆ ಬಹಳಷ್ಟು ಕಡಿಮೆಯಾಗಿದೆ.
ಮಂಜುನಾಥ ಶೆಟ್ಟಿ, ಟ್ರಾಫಿಕ್‌ ಎಸಿಪಿ

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.