ಮತಯಂತ್ರಗಳಿಗೆ ಇನ್ನೂ 45 ದಿನ ಭದ್ರತೆ !


Team Udayavani, May 25, 2019, 6:00 AM IST

2405MLR101-STRONGROOM

ಮಂಗಳೂರು: ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮೇ 23ರಂದು ಪೂರ್ಣಗೊಂಡು ಫಲಿತಾಂಶ ಹೊರ ಪ್ರಕಟವಾಗಿದ್ದರೂ ಮತಯಂತ್ರಗಳಿಗೆ ಮುಂದಿನ 45 ದಿನಗಳ ಕಾಲ ವಿಶೇಷ ಭದ್ರತೆ ಮುಂದುವರಿಯಲಿದೆ.

ಫಲಿತಾಂಶದ ಬಗ್ಗೆ ರಾಜಕೀಯ ಪಕ್ಷಗಳು 45 ದಿನಗಳೊಳಗೆ ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆ ಬಳಿಕ ಆಕ್ಷೇಪಣೆಗೆ ಅವಕಾಶವಿರುವುದಿಲ್ಲ. ಒಂದುವೇಳೆ 45 ದಿನದೊಳಗೆ ನ್ಯಾಯಾಲಯಕ್ಕೆ ಯಾರಾದರೂ ಆಕ್ಷೇಪಣೆ ಸಲ್ಲಿಸಿ, ನ್ಯಾಯಾಲಯವು ವಿಚಾರಣೆಯನ್ನು ಕೈಗೆತ್ತಿಕೊಂಡರೆ ಆ ಕ್ಷಣದಿಂದ ಆ ಲೋಕಸಭಾ ಕ್ಷೇತ್ರದ ಮತಯಂತ್ರಗಳನ್ನು ಜಿಲ್ಲಾಡಳಿತವು ಅತ್ಯಂತ ಭದ್ರತೆಯಿಂದ ನೋಡಿಕೊಳ್ಳಬೇಕು. ವಿಚಾರಣೆ ಪೂರ್ಣಗೊಳ್ಳುವವರೆಗೆ ಆ ಯಂತ್ರಗಳ ಮತಗಳನ್ನು ಅಳಿಸುವುದು ಅಥವಾ ಇತರ ಚುನಾವಣೆಗೆ ಬಳಸುವಂತಿಲ್ಲ. ಒಂದುವೇಳೆ ನ್ಯಾಯಾಲಯವು ಮರು ಎಣಿಕೆ ಮಾಡಲು ಸೂಚಿಸಿದರೆ ಅದಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ.

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ಗುರುವಾರ ಸಂಜೆ ವೇಳೆಗೆ ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಪೂರ್ಣಗೊಂಡಿತ್ತು. ಫಲಿತಾಂಶ ಘೋಷಣೆಯಾದ ಬಳಿಕ ಮತ ಯಂತ್ರಗಳನ್ನು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ (ಹಳೆಯ ಕಟ್ಟಡ) ಸ್ಟ್ರಾಂಗ್‌ರೂಂನಲ್ಲಿಇರಿಸಲಾಗಿತ್ತು. ಜಿಪಿಎಸ್‌ ಹೊಂದಿರುವ ವಾಹನ ಹಾಗೂ ಪೊಲೀಸ್‌ ಭದ್ರತೆಯ ಜತೆಗೆ ಲಾರಿಗಳ ಮೂಲಕಮತಯಂತ್ರಗಳನ್ನು ತರಲಾಗಿತ್ತು. ಕಂಟ್ರೋಲಿಂಗ್‌ ಯುನಿಟ್‌, ಬ್ಯಾಲೆಟ್‌ಯುನಿಟ್‌ ಹಾಗೂ ವಿವಿ ಪ್ಯಾಟ್‌ ಸೇರಿ
ದಂತೆ ಸುಮಾರು 7,000 ಮತಯಂತ್ರಗಳು ಇಲ್ಲಿವೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸ್ಟ್ರಾಂಗ್‌ ರೂಂ ವ್ಯಾಪ್ತಿಯಲ್ಲಿ ಮುಂದಿನ ದಿನದಲ್ಲಿ ಬಿಗಿಭದ್ರತೆ ಇರುತ್ತದೆ. ಕೊಠಡಿ ಸುತ್ತ ಸಿಸಿ ಕೆಮರಾ ಅಳವಡಿಸಲಾಗಿದೆ. ವಿಧಾನಸಭಾವಾರು ಮತಯಂತ್ರ ಗಳನ್ನು ಜೋಡಿಸಿಡಲಾಗಿದ್ದು, 24 ಗಂಟೆಯೂ ಬಿಗಿ ಪೊಲೀಸ್‌ ಭದ್ರತೆ ಇರಲಿದೆ. ಯಾವುದೇ ಕಾರಣಕ್ಕೂ ಸ್ಟ್ರಾಂಗ್‌ ರೂಂ ತೆರೆಯುವಂತಿಲ್ಲ. ತೆರೆಯಲೇ ಬೇಕಾದರೆ ಎಲ್ಲ ರಾಜಕೀಯ ಪಕ್ಷಗಳವರ ಗಮನಕ್ಕೆ ತರಲಾಗುತ್ತದೆ.
ವಿಧಾನಸಭೆ ಹಾಗೂ ಲೋಕಸಭೆಗೆ ಬಳಸುವ ಮತಯಂತ್ರಗಳನ್ನು ಸ್ಥಳೀಯ ಚುನಾವಣೆಗೆ ಬಳಸುವುದಿಲ್ಲ. ಮತ ಎಣಿಕೆ ಆದ ಬಳಿಕ ನ್ಯಾಯಾ ಲಯದಲ್ಲಿ ಆಕ್ಷೇಪಣೆ ಇಲ್ಲದ ಮತಯಂತ್ರಗಳನ್ನು ಮತ್ತೂಂದು ಚುನಾವಣೆಗೆ ಬಳಸಲಾಗುತ್ತದೆ.

ಮಂಗಳೂರು ದ. ಇವಿಎಂಗೆ ಈಗಲೂ ಭದ್ರತೆ!
ಕಳೆದ ವರ್ಷ ನಡೆದ ಮಂಗಳೂರು ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಅಭ್ಯರ್ಥಿಗಳಾದ ಮೊದಿನ್‌ ಬಾವಾ ಹಾಗೂ ಜೆ.ಆರ್‌.ಲೋಬೋ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಹೀಗಾಗಿ ಮತ ಎಣಿಕೆಯಾದ ಅನಂತರವೂ ಮತಯಂತ್ರಗಳನ್ನು ಬಿಗಿ ಭದ್ರತೆಯಲ್ಲಿ ಇಡಲಾಗಿತ್ತು. ಈ ಪೈಕಿ ಮೊದಿನ್‌ ಬಾವಾ ಅವರ ಪ್ರಕರಣ ಇತ್ಯರ್ಥವಾಗಿದ್ದರೆ, ಜೆ.ಆರ್‌. ಲೋಬೋ ಅವರ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಈ ಕಾರಣಕ್ಕಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಮತಯಂತ್ರಗಳನ್ನು ಈಗಲೂ ಮಂಗಳೂರಿನಲ್ಲಿ ಬಿಗಿಭದ್ರತೆಯಲ್ಲಿ ಕಾಯಲಾಗುತ್ತಿದೆ.

“ಆಕ್ಷೇಪಣೆ ಇಲ್ಲವಾದರೆ ಮತ ಯಂತ್ರ ಬಳಕೆ’
ಮತ ಎಣಿಕೆ ನಡೆದ ಬಳಿಕ 45 ದಿನಗಳವರೆಗೆ ಎಲ್ಲ ಮತಯಂತ್ರಗಳಿಗೆ ಬಿಗಿಭದ್ರತೆ ನೀಡಲಾಗುತ್ತದೆ. ಅಲ್ಲಿಯವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಒಂದು ವೇಳೆ ಯಾರಿಂದಲೂ ಆಕ್ಷೇಪಣೆ ಬಾರದಿದ್ದರೆ ಅಂತಹ ಮತಯಂತ್ರಗಳನ್ನು ಇತರ ಚುನಾವಣೆಗೆ ಬಳಸಲಾಗುತ್ತದೆ. ಆಕ್ಷೇಪಣೆಯಿದ್ದರೆ ನ್ಯಾಯಾಲಯದ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
– ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.