ನೀರಿನ ವ್ಯವಸ್ಥೆ ಸ್ವತ್ಛತೆಗೆ 5 ಲಕ್ಷ ರೂ. ಬಿಡುಗಡೆ
Team Udayavani, Dec 10, 2017, 1:15 PM IST
ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ 98 ಮಂದಿ ವಿಚಾರಣಾಧೀನ ಕೈದಿಗಳು ಚರ್ಮರೋಗದಿಂದ ಬಳಲುತ್ತಿರುವ ಬಗ್ಗೆ ಶನಿವಾರ ನಡೆದ ಆರೋಗ್ಯ ತಪಾಸಣಾ ಶಿಬಿರದ ಸಂದರ್ಭ ಗಮನಕ್ಕೆ ಬಂದಿದ್ದು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇದನ್ನು ಗಂಭೀರವಾಗಿ ಪರಿಗಣಿಸಿ ಕಾರಾಗೃಹದ ಕುಡಿಯುವ ನೀರಿನ ಟ್ಯಾಂಕ್ ಸರಿಪಡಿಸಿ ಶುದ್ಧ
ನೀರು ಪೂರೈಸಲು 5 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ ಪತ್ರಕರ್ತರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಕೆಎಂಸಿ ಆಸ್ಪತ್ರೆ ಹಾಗೂ ಎ.ಜೆ. ದಂತ ವೈದ್ಯಕೀಯ ಆಸ್ಪತ್ರೆಯ ಸಹಭಾಗಿತ್ವದಲ್ಲಿ ವಿಚಾರಣಾಧೀನ ಕೈದಿಗಳ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಂಡಿತ್ತು.
ಆರೋಗ್ಯ ಶಿಬಿರದ ವೇಳೆ ಕಾರಾಗೃಹಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಗರಿಷ್ಠ ಸಂಖ್ಯೆಯ
ಕೈದಿಗಳು ಚರ್ಮರೋಗದಿಂದ ಬಳಲುತ್ತಿರುವುದನ್ನು ಗಮನಿಸಿ ಅಚ್ಚರಿಗೊಂಡು ಜೈಲು ಅಧಿಕಾರಿಗಳ ಜತೆ
ಬಳಸುವ ನೀರಿನ ಬಗ್ಗೆ ವಿಚಾರಿಸಿದರು.
ಮಹಾನಗರಪಾಲಿಕೆಯ ನೀರನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದ್ದರು. ನೀರಿನ ಪೈಪ್ ಹಾಗೂ ಟ್ಯಾಂಕ್ಗಳಲ್ಲಿ ಕೊಳಚೆ ತುಂಬಿರುವ ಸಾಧ್ಯತೆಯನ್ನು ಮನಗಂಡು ಅದನ್ನು ಶುಚಿಗೊಳಿಸಲು ಸ್ಥಳದಲ್ಲೇ 5 ಲಕ್ಷ ರೂ. ಬಿಡುಗಡೆಗೊಳಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಶುದ್ಧ ನೀರನ್ನು ಪೂರೈಸಲು ಸೂಚಿಸಿದರು.
ಶಿಬಿರವನ್ನು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಡಿಸಿಪಿ ಹನುಮಂತರಾಯ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ