ಮಜಲು ಕಿಂಡಿ ಅಣೆಕಟ್ಟು ದುರಸ್ತಿಗೆ 50 ಲ.ರೂ. ಅನುದಾನ
Team Udayavani, Feb 27, 2021, 3:00 AM IST
ಬೆಳ್ತಂಗಡಿ: ಮುಂಡಾಜೆ ಗ್ರಾಮವಾಗಿ ಹರಿಯುವ ಮೃತ್ಯುಂಜಯ ನದಿಗೆ ಕಾಪು ಹಾಗೂ ಮಜಲು ವ್ಯಾಪ್ತಿಯ ಕೃಷಿ ನೀರಿನ ಅನುಕೂಲಕ್ಕಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನ ನಿರ್ವಹಣೆಗಾಗಿ ಮಳೆ ಹಾನಿ ಯೋಜನೆಯಡಿ ಅನುದಾನ ಬಿಡುಗಡೆಗೊಂಡಿದ್ದು, ಸಣ್ಣ ನೀರಾವರಿ ಇಲಾಖೆ ವತಿಯಿಂದ ದುರಸ್ತಿ ಕಾಮಗಾರಿ ಶೀಘ್ರ ಆರಂಭವಾಗಲಿದೆ.
ಮಜಲು ವ್ಯಾಪ್ತಿಯ ನೀರಿನ ವ್ಯವಸ್ಥೆಯ ಕಾಲುವೆ, ತಡೆಗೋಡೆ ಸಂಪೂರ್ಣ ಹಾನಿಗೊಳಗಾಗಿದ್ದು, ಇದರಿಂದ ಕಳೆದ ಹಲವಾರು ವರ್ಷಗಳಿಂದ ಸ್ಥಳೀಯವಾಗಿ ಕಿಂಡಿ ಅಣೆಕಟ್ಟಿನ ನೀರಿನ ವ್ಯವಸ್ಥೆಗೆ ಸಮಸ್ಯೆ ಎದುರಾಗಿತ್ತು. ಈ ಕುರಿತು ಡಿ.2ರಂದು ಉದಯವಾಣಿ ಸುದಿನ ಆವೃತ್ತಿಯಲ್ಲಿ ವರದಿ ಪ್ರಕಟಿಸಲಾಗಿತ್ತು.
ಅನುದಾನ ಬಿಡುಗಡೆ :
ವರದಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಜಲು ಭಾಗದ ಕಿಂಡಿ ಅಣೆಕಟ್ಟಿನ ದುರಸ್ತಿ ಕಾಮಗಾರಿಗೆ ಮಳೆಹಾನಿ ಯೋಜನೆಯಡಿ 50 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಸಣ್ಣ ನೀರಾವರಿ ಇಲಾಖೆ ವತಿಯಿಂದ ದುರಸ್ತಿ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಈ ಕುರಿತಾಗಿ ಶುಕ್ರವಾರ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ರಾಕೇಶ್ ಹಾಗೂ ಕಾಮಗಾರಿ ಗುತ್ತಿಗೆದಾರರು ಕಿಂಡಿ ಅಣೆಕಟ್ಟಿನ ಭಾಗದ ಸ್ಥಳ ವೀಕ್ಷಣೆ ನಡೆಸಿದರು. ಕಜೆ ವೆಂಕಟೇಶ್ವರ ಭಟ್ ಜತೆಗಿದ್ದರು.
ಪ್ರವಾಹಕ್ಕೆ ತುಂಬಿದ ಹೂಳು :
ಕಳೆದ ವರ್ಷದ ಪ್ರವಾಹಕ್ಕೆ ಹಾಗೂ ಮೃತ್ಯುಂಜಯ ನದಿಯ ನದಿ ನೀರಿನ ಸೆಳೆತಕ್ಕೆ ತತ್ತರಿಸಿ ಸುಮಾರು 500 ಮೀಟರ್ ವ್ಯಾಪ್ತಿಯ ಮಜಲು ಭಾಗದ ಕಾಲುವೆ ಕೊಚ್ಚಿ ಹೋಗಿ ಸಂಪೂರ್ಣ ಶಿಥಿಲಗೊಂಡಿತ್ತು. ಈ ಭಾಗದ 26 ಮನೆ ಮಂದಿ ಇದೇ ನೀರನ್ನು ಆಶ್ರಯಿಸುತ್ತಿದ್ದಾರೆ. ದುರಸ್ತಿ ಬಗ್ಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದೀಗ ಕಾಮಗಾರಿಗೆ ಅನುದಾನ ಬಿಡುಗಡೆಯಾಗುವ ಮೂಲಕ ಈ ಭಾಗದ ಮಂದಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್