ಮಳೆಕೊಯ್ಲು ವ್ಯವಸ್ಥೆ ಅಳವಡಿಸಿದರೆ 5,000 ರೂ. ಪ್ರೋತ್ಸಾಹಧನ


Team Udayavani, Jul 30, 2019, 5:55 AM IST

a-4

ಮಹಾನಗರ: “ಮನೆ ಮನೆಗೆ ಮಳೆಕೊಯ್ಲು’ ಕುರಿತ ಜಲ ಸಂರಕ್ಷಣೆಯ “ಉದಯವಾಣಿ’ ಅಭಿಯಾನವು ಜಿಲ್ಲೆಯಾದ್ಯಂತ ಸಾವಿರಾರು ಜನರಿಗೆ ಪ್ರೇರಣೆ ನೀಡುತ್ತಿದ್ದು ಜಲಾಂದೋಲನ ರೂಪಿಸುತ್ತಿದೆ. ಇದನ್ನು ಮತ್ತಷ್ಟು ಹುರಿದುಂಬಿಸುವಂತೆ ಮೂಡುಬಿದಿರೆಯ ಸಹಕಾರಿ ಕೋ-ಆಪರೇಟಿವ್‌ ಸರ್ವಿಸ್‌ ಬ್ಯಾಂಕ್‌ ತನ್ನ ಸದಸ್ಯರಿಗೆ ಮಳೆಕೊಯ್ಲು ಅನುಷ್ಠಾನಕ್ಕಾಗಿ ಮಾದರಿ ಕಾರ್ಯಕ್ಕೆ ಮುಂದಾಗಿದೆ.

ಬ್ಯಾಂಕ್‌ನ ಸದಸ್ಯರು ತಮ್ಮ ಮನೆಯಲ್ಲಿ ಮಳೆಕೊಯ್ಲು ಅನುಷ್ಠಾನಿಸಿದರೆ ಅವರಿಗೆ ಬ್ಯಾಂಕ್‌ ವತಿಯಿಂದ 5 ಸಾವಿರ ರೂ. ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಇದೊಂದು ಅತ್ಯಂತ ಮಹತ್ವದ ಹೆಜ್ಜೆ. ಈ ಮೂಲಕ ಗ್ರಾಮ ಮಟ್ಟದಲ್ಲಿ ಜಲ ಸಂರಕ್ಷಣೆಗೆ ಸಹಕಾರ ಬ್ಯಾಂಕೊಂದು ಜನರನ್ನು ಬೆಂಬಲಿಸುತ್ತಿರುವುದು ನಿಜಕ್ಕೂ ಮಾದರಿ ನಡೆ. ಜಿಲ್ಲೆಯ ಮತ್ತಷ್ಟು ಸಹಕಾರ ಬ್ಯಾಂಕ್‌ಗಳು, ಬ್ಯಾಂಕ್‌ಗಳು ಆರ್ಥಿಕವಾಗಿ ಹಿಂದುಳಿದಿರುವವರಿಗೆ ಮಳೆಕೊಯ್ಲು ಸೇರಿದಂತೆ ಜಲ ಸಂರಕ್ಷಣೆಗೆ ಪೂರಕವಾದ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಬೇಕೆಂಬುದು “ಉದಯವಾಣಿ’ಯ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದ ಆಶಯವೂ ಸಹ.

1916ರಲ್ಲಿ ಮೂಡುಬಿದಿರೆಯಲ್ಲಿ ಹುಟ್ಟಿದ ಈ ಬ್ಯಾಂಕ್‌ ರವಿವಾರ 103ನೇ ವರ್ಷದ ಸಂಭ್ರಮದೊಂದಿಗೆ ಮಹಾಸಭೆ ನಡೆಸಿದೆ. ಪ್ರಾಂತ್ಯ ಹಾಗೂ ಮಾರ್ಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 9000 ಮಂದಿ ಸದಸ್ಯರಿದ್ದಾರೆ. ಸುಮಾರು 5 ಕಿ.ಮೀ.ವ್ಯಾಪ್ತಿಯಲ್ಲಿ ಇದರ ಕಾರ್ಯ ನಿರ್ವಹಣೆ. ಹನುಮಾನ್‌ ದೇವಸ್ಥಾನದ ಬಳಿ ಇರುವ ಬ್ಯಾಂಕ್‌ನ ಅಧ್ಯಕ್ಷರು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಸೇವೆ ಸಲ್ಲಿಸುತ್ತಿದ್ದಾರೆ.

ಸದಸ್ಯರಿಗೆ ಪ್ರೋತ್ಸಾಹ ಧನ
ತನ್ನ ಸದಸ್ಯರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿರುವ ಬ್ಯಾಂಕ್‌, ಈಗ ಮಳೆ ನೀರು ಸಂರಕ್ಷಣೆಯ ಜಾಗೃತಿಗೆ ಮುಂದಾಗಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹ ಧನವನ್ನೂ ಘೋಷಿಸಿದೆ. ಪ್ರಾಂತ್ಯ ಹಾಗೂ ಮಾರ್ಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಸ್ವಂತ ಮನೆ ಹಾಗೂ ಬಾವಿ ಹೊಂದಿದ್ದವರು ಮಳೆ ಕೊಯ್ಲು ಅಳವಡಿಸಿ ಪ್ರೋತ್ಸಾಹ ಧನ ಪಡೆಯಬಹುದು. ಇದಕ್ಕೆ ಮಳೆಕೊಯ್ಲು ಮಾಡಿರುವ ಫೋಟೋ ಹಾಗೂ ಬಿಲ್‌ ಅನ್ನು ಬ್ಯಾಂಕ್‌ಗೆ ನೀಡಬೇಕಿದೆ.

ಬ್ಯಾಂಕ್‌ನ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಚಂದ್ರಶೇಖರ ಎಂ. ಅವರ ನೇತೃತ್ವದಲ್ಲಿ ನಡೆದ ಮಹಾಸಭೆಯಲ್ಲಿ ಪ್ರೋತ್ಸಾಹ ಧನ ನೀಡುವ ನಿರ್ಧಾರಕ್ಕೆ ಬರಲಾಗಿದೆ. ಆ. 3 ರಂದು ಏರ್ಪಡಿಸಿರುವ ಕೃಷಿ-ಖುಷಿ ಮಾಹಿತಿ ಕಾರ್ಯಕ್ರಮದಡಿ ಮಳೆ ಕೊಯ್ಲು ಯೋಜನೆ ಉದ್ಘಾಟಿಸಲಾಗುತ್ತಿದೆ. ಇದರೊಂದಿಗೆ ಯೋಜನೆ ಕುರಿತು ಮಾಹಿತಿ ನೀಡಲಾಗುತ್ತಿದೆ.

ಜು. 31: ಎಸ್‌ಡಿಎಂನಲ್ಲಿ ಉಪನ್ಯಾಸ
ಮಂಗಳೂರು ಮ್ಯಾನೇಜ್‌ಮೆಂಟ್‌ ಅಸೋಸಿಯೇಶನ್‌ ವತಿಯಿಂದ ಎಸ್‌ಡಿಎಂ ಸ್ನಾತಕೋತ್ತರ ಉದ್ಯಮಾಡಳಿತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಮಳೆಕೊಯ್ಲು ಉಪನ್ಯಾಸ ಜು. 31ರಂದು ಸಂಜೆ 6 ಗಂಟೆಗೆ ಕೊಡಿಯಾಲ್‌ಬೈಲ್‌ ಎಸ್‌ಡಿಎಂ ಎಂಬಿಎ ಕಾನ್ಫರೆನ್ಸ್‌ ಹಾಲ್‌ನಲ್ಲಿ ನಡೆಯಲಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲಾºವಿ ಉಪನ್ಯಾಸ ನೀಡಲಿದ್ದಾರೆ ಎಂದು ಅಸೋಸಿಯೇಶನ್‌ ಉಪಾಧ್ಯಕ್ಷ ಕೆ. ಜೈರಾಜ್‌ ಬಿ. ರೈ ತಿಳಿಸಿದ್ದಾರೆ.

ನಾಳೆ ಮಳೆಕೊಯ್ಲು ಅರಿವು ಕಾರ್ಯಕ್ರಮ
ಜಿಲ್ಲೆಯಲ್ಲಿ ಉದಯವಾಣಿ ಪತ್ರಿಕೆ ಅಭಿಯಾನದಿಂದ ಪ್ರೇರಣೆಗೊಂಡು ಒಂದೆಡೆ ಮಳೆಕೊಯ್ಲು ಅಳವಡಿಸಿಕೊಳ್ಳುತ್ತಿರುವ ಜನರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದರೆ, ಮತ್ತೂಂದೆಡೆ ಮಳೆ ನೀರಿನ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ವಿವಿಧ ಸಂಘಸಂಸ್ಥೆಗಳು ಮುಂದಾಗುತ್ತಿವೆ. ಸೈಂಟ್‌ ಆಗ್ನೆಸ್‌ ಕಾಲೇಜು “ಉದಯವಾಣಿ’ ಸಹಯೋಗದಲ್ಲಿ ಜು.31ರಂದು ಬೆಳಗ್ಗೆ 11.15ಕ್ಕೆ ಮಳೆಕೊಯ್ಲು ಅರಿವು ಕಾರ್ಯಕ್ರಮ ಆಯೋಜಿಸಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲಾºವಿ ಅವರು ವಿಶೇಷ ಉಪನ್ಯಾಸ ನೀಡುವರು. ಆಗ್ನೆಸ್‌ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸಿಸ್ಟರ್‌ ನೋರಿನೊ ಡಿಸೋಜಾ, ಉಪ ಪ್ರಾಂಶುಪಾಲರಾದ ಸಿಸ್ಟರ್‌ ಜಾನೆಟ್‌ ಸಿಕ್ವೇರಾ, ಡಾ| ಟ್ರೆಸ್ಸಿ ಮಿನೇಜಸ್‌ ಮುಂತಾದವರು ಮುಖ್ಯ ಅಥಿಗಳಾಗಿ ಭಾಗವಹಿಸುವರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸುಮಾರು 700ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬಂದಿ ಪಾಲ್ಗೊಳ್ಳುವರು.

 ”ಮಳೆಕೊಯ್ಲು ಜಾಗೃತಿಗಾಗಿ ಅನುಷ್ಠಾನ’
ನಮ್ಮ ಸದಸ್ಯರ ಸ್ವಂತ ಮನೆ ಹಾಗೂ ಬಾವಿ ಹೊಂದಿದವರು ಮಳೆಕೊಯ್ಲು ಅನುಷ್ಠಾನಿಸಿದ್ದರೆ ಅವರಿಗೆ 5 ಸಾವಿರ ರೂ. ಪ್ರೋತ್ಸಾಹಧನ ನೀಡಲು ಬ್ಯಾಂಕ್‌ ನಿರ್ಧರಿಸಿದೆ. ಸುಮಾರು 150 ರಷ್ಟು ಸದಸ್ಯರು ಈ ಬಗ್ಗೆ ವಿಚಾರಿಸಿದ್ದಾರೆ. ಮಳೆ ನೀರು ಸಂರಕ್ಷಣೆಯ ಜಾಗೃತಿ ಎಲ್ಲೆಡೆಯೂ ಅನುಷ್ಠಾನವಾಗಲಿ ಎಂಬ ಆಶಯದಿಂದ ಈ ಪರಿಕಲ್ಪನೆ ಜಾರಿಗೊಳಿಸಲಾಗಿದೆ.
– ಚಂದ್ರಶೇಖರ ಎಂ., ಸಿಇ ಒ, ಮೂಡುಬಿದಿರೆ ಕೋ-ಆಪರೇಟಿವ್‌ ಸರ್ವಿಸ್‌ ಬ್ಯಾಂಕ್‌.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.