ಕರಾವಳಿಯ 60 ಗ್ರಾಮಗಳಿಗೆ ಇನ್ನು ಪವರ್‌ ಕಟ್‌ ಇಲ್ಲ !


Team Udayavani, Jul 18, 2017, 3:45 AM IST

1407mlr24.gif

ದ.ಕ. ಜಿಲ್ಲೆಯ 35, ಉಡುಪಿ ಜಿಲ್ಲೆಯ 25 ಮಾದರಿ ವಿದ್ಯುತ್‌ ಗ್ರಾಮ ಅನುಷ್ಠಾನ

ಮಂಗಳೂರು: ಪ್ರತೀ ವಿಧಾನಸಭಾ ಕ್ಷೇತ್ರದ ತಲಾ 5 ಗ್ರಾಮಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇದರನ್ವಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಟ್ಟು 60 ಗ್ರಾಮಗಳಲ್ಲಿ ಪವರ್‌ ಕಟ್‌ ಸಮಸ್ಯೆಗೆ ಮುಕ್ತಿ ದೊರೆಯುವ ಆಶಾವಾದ ಮೂಡಿದೆ.

ದ.ಕ. ಜಿಲ್ಲೆಯ 35 ಗ್ರಾಮಗಳು ಹಾಗೂ ಉಡುಪಿ ಜಿಲ್ಲೆಯ 25 ಗ್ರಾಮಗಳು ಮುಂದಿನ ದಿನ ದಲ್ಲಿ ವಿದ್ಯುತ್‌ ಅಡಚಣೆ ರಹಿತ ಗ್ರಾಮಗಳಾಗಿ ಮೂಡಿ ಬರಲಿದೆ. ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಮಾದರಿ ವಿದ್ಯುತ್‌ ಗ್ರಾಮ ಸಂಕಲ್ಪದ ಬಗ್ಗೆ ಈಗಾಗಲೇ ಪ್ರಕಟನೆ ಕೂಡ ಹೊರಡಿಸಿದ್ದಾರೆ.ಈ ಯೋಜನೆಯನ್ವಯ ಪ್ರತೀ ಗ್ರಾಮಕ್ಕೆ ಗರಿಷ್ಠ 40 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಇರುವ ಎಲ್ಲಾ ಕ್ರಮ ಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಮಾದರಿ ವಿದ್ಯುತ್‌ ಗ್ರಾಮಕ್ಕೆ ಯೋಜನೆ ಹಾಕಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಮಾದರಿ ಗ್ರಾಮ ಯೋಜನೆ ಅನುಷ್ಠಾನಕ್ಕೆ ಗುರಿ ಇರಿಸಲಾಗಿದೆ.

ಮಾದರಿ ವಿದ್ಯುತ್‌ ಗ್ರಾಮದ ವಿಶೇಷತೆ
ಪ್ರತೀ ಮಾದರಿ ವಿದ್ಯುತ್‌ ಗ್ರಾಮದಲ್ಲಿ ವಿತರಣಾ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಿ ಸುಸ್ಥಿತಿ ಯಲ್ಲಿರು  ವಂತೆ ಕಾಪಾಡ ಲಾಗುತ್ತದೆ. ಇಲ್ಲಿ ಬೀದಿ ದೀಪ ಗಳಿಗೆ ಎಲ್‌ಇಡಿ/ಸೋಲಾರ್‌ ದೀಪ ಗಳನ್ನು ಹಾಗೂ ಟೈಮರ್‌ ಸ್ವಿಚ್‌ಗಳನ್ನು ಅಳ ವಡಿಸಲು ಸ್ಥಳೀಯ ಸಂಸ್ಥೆಯೊಂದಿಗೆ ಸಮನ್ವಯತೆ ಕಾಪಾಡಿ ಕೊಳ್ಳ  ಲಾಗುತ್ತದೆ. ಮಾದರಿ ಗ್ರಾಮದ ವಿದ್ಯುತ್‌ ಹೊರೆಗೆ ಅನುಗುಣವಾಗಿ ವಿದ್ಯುತ್‌ ಪರಿವರ್ತಕ ಕೇಂದ್ರ  ಗಳನ್ನು ಸ್ಥಾಪಿಸಲಾಗುತ್ತದೆ. ಎಲ್ಲಾ ಸ್ಥಾವರ  ಗಳಿಗೂ ಮಾಪಕ ಅಳವಡಿಸಿ, ವಿದ್ಯುತ್‌ ಬಳಕೆ  ಯನ್ನು ನಿಖರವಾಗಿ ದಾಖಲಿಸುವಂತೆ ಖಾತ್ರಿಪಡಿಸಲಾಗುತ್ತದೆ. ಪ್ರತೀ ಮಾದರಿ ಗ್ರಾಮ ಗಳಲ್ಲಿ ವಿದ್ಯುತ್‌ ಪೋಲಾಗ ದಂತೆ ತಡೆ ಗಟ್ಟ ಲಾಗುತ್ತದೆ. ಎಲ್ಲಾ ಕಡೆ ಗಳಲ್ಲಿ 3 ಫೇಸ್‌ ವಿತರಣಾ ಮಾರ್ಗ ರಚಿಸ ಲಾಗು ತ್ತದೆ. 24 ಗಂಟೆಗಳ ವಿದ್ಯುತ್ಛ ಕ್ತಿ ಲಭ್ಯತೆಗಾಗಿ ವಿಕೇಂದ್ರೀಕೃತ ವಿತರಣಾ ಉತ್ಪಾದನೆ (ಡಿಡಿಜಿ) ಮೂಲಕ ವಿದ್ಯುತ್‌ ಉತ್ಪಾದನೆಗೆ ಅಗತ್ಯ ಕ್ರಮ ವಹಿಸಲಾಗುತ್ತದೆ. ‘

ಸ್ಥಾವರಗಳ ವಿದ್ಯುತ್ಛ ಕ್ತಿ ಬಳಕೆಗೆ ಬಿಲ್‌ ನೀಡಿ ಶೇ.100ರಷ್ಟು ಕಂದಾಯ ವಸೂಲಾತಿಗೆ ಮೊಬೈಲ್‌ ವ್ಯಾನ್‌ ಅಥವಾ ಇತರ ವ್ಯವಸ್ಥೆಯಡಿ ಕ್ರಮ ಕೈಗೊಳ್ಳ ಲಾಗುತ್ತದೆ. ಈ ಗ್ರಾಮಗಳಲ್ಲಿ ಯಾವುದೇ ರೀತಿಯ ಅಪಾಯಕಾರಿ- ಸ್ಥಿತಿಯಲ್ಲಿರುವ ವಿದ್ಯುತ್‌ ಮಾರ್ಗ, ವಿದ್ಯುತ್‌ ಕಂಬ, ವಿದ್ಯುತ್‌ ಪರಿ  ವರ್ತಕ ಇತ್ಯಾದಿಗಳನ್ನು ಸರಿಪಡಿಸಿ ಅಪಘಾತ ರಹಿತ ಸುರಕ್ಷತಾ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. 

ದಕ್ಷಿಣ ಕನ್ನಡ/ಉಡುಪಿ: ಮಾದರಿ ಗ್ರಾಮಗಳ ಹೆಸರು
ಮಾದರಿ ಗ್ರಾಮವಾಗಿ ಆಯ್ಕೆಯಾದ ದ.ಕ. ಜಿಲ್ಲೆಯ ಗ್ರಾಮಗಳ ಹೆಸರು: ಮೂಡಬಿದಿರೆ ವಿ.ಸಭಾ ಕ್ಷೇತ್ರದ ತೆಂಕ ಮಿಜಾರು, ಕಲ್ಲಮುಂಡ್ಕೂರು, ಕಿನ್ನಿಗೋಳಿ, ಹಳೆಯಂಗಡಿ, ಬಜ್ಪೆ. ಮಂಗಳೂರು ಉತ್ತರ ಕ್ಷೇತ್ರದ ಬಡಗ ಉಳಿಪಾಡಿ, ಕಂದಾವರ, ಕೆಲಿಂಜಾರ್‌, ಮೂಳೂರು, ಮುತ್ತೂರು. ಮಂಗಳೂರು ವಿ.ಸಭಾ ಕ್ಷೇತ್ರದ ಸಜೀಪ ನಡು, ನರಿಂಗಾನ, ಹರೇಕಳ, ಪಾವೂರು, ಕಿನ್ಯಾ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಲಾ°ಡು, ನರಿಮೊಗ್ರು, ಶಾಂತಿಗೋಡು, ಕೊಡಿಪ್ಪಾಡಿ, 34- ನೆಕ್ಕಿಲಾಡಿ. ಸುಳ್ಯ ವಿ.ಸಭಾ ಕ್ಷೇತ್ರದ ಚಾರ್ವಾಕ, ಇಚಿಲಂಪಾಡಿ, ಬಂಟ್ರ, ಮಂಡೆಕೋಲು, ಮರ್ಕಂಜ. ಬಂಟ್ವಾಳ ವಿ.ಸಭಾ ಕ್ಷೇತ್ರದ ಸಜಿಪ ಮುನ್ನೂರು, ಕಪೆì, ಕಾವಳ ಪಡೂರು, ಕೊಳ್ನಾಡು, ವಿಟ್ಲ ಪಟ್ನೂರು. ಬೆಳ್ತಂಗಡಿ ವಿ.ಸಭಾ ಕ್ಷೇತ್ರದ ಉಜಿರೆ, ತಣ್ಣೀರು ಪಂಥ, ಕೊಕ್ಕಡ, ಹೊಸಂಗಡಿ, ನಾರಾವಿ.

ಉಡುಪಿ ಜಿಲ್ಲೆಯ ಬೈಂದೂರು ವಿ.ಸಭಾ ಕ್ಷೇತ್ರದ ಕಾಲೊ¤àಡು, ಜಡ್ಕಲ್‌-ಮುದೂರು, ನಾಡಾ, ಸಿದ್ದಾಪುರ, ಅಂಪಾರು. ಕುಂದಾಪುರ ವಿ.ಸಭಾ ಕ್ಷೇತ್ರದ ಅಮಾಸೆಬೈಲು, ಮಡಾ ಮಕ್ಕಿ, ಶೇಡಿಮನೆ, 33ನೇ ಶಿರೂರು, ಕಾಡೂರು. ಉಡುಪಿ ವಿ.ಸಭಾ ಕ್ಷೇತ್ರದ ಕೆಂಜೂರು, ಕಳತ್ತೂರು, ಹಾರಾಡಿ, ಹಲುವಳ್ಳಿ, ಮೂಡುತೋನ್ಸೆ. ಕಾಪು ವಿ.ಸಭಾ ಕ್ಷೇತ್ರದ ಬೆಳ್ಳರ್ಪಾಡಿ, ಮರ್ಣೆ, ಮಟ್ಟು, ಹೇರೂರು, ಪಿಲಾರು. ಕಾರ್ಕಳ ವಿ.ಸಭಾ ಕ್ಷೇತ್ರದ ವರಂಗ, ಹೆಬ್ರಿ, ಸಾಣೂರು, ಬಜಗೋಳಿ, ನಿಟ್ಟೆ.

–  ದಿನೇಶ್‌ ಇರಾ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.