Srinivas ವಿಶ್ವವಿದ್ಯಾನಿಲಯದ 6ನೇ ಘಟಿಕೋತ್ಸವ; “ಆತ್ಮವಿಶ್ವಾಸದಿಂದ ಸವಾಲುಗಳನ್ನು ಎದುರಿಸಿ’


Team Udayavani, Feb 11, 2024, 12:04 AM IST

Srinivas ವಿಶ್ವವಿದ್ಯಾನಿಲಯದ 6ನೇ ಘಟಿಕೋತ್ಸವ; “ಆತ್ಮವಿಶ್ವಾಸದಿಂದ ಸವಾಲುಗಳನ್ನು ಎದುರಿಸಿ’

ಸುರತ್ಕಲ್‌: ಶ್ರೀನಿವಾಸ ವಿಶ್ವವಿದ್ಯಾನಿಲಯದ ಆರನೇ ವಾರ್ಷಿಕ ಘಟಿಕೋತ್ಸವ ಶ್ರೀನಿವಾಸ ವಿಶ್ವವಿದ್ಯಾಲಯ ಮುಕ್ಕ ಕ್ಯಾಂಪಸ್‌ನಲ್ಲಿ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಎಂಸಿಎಫ್‌ ವೈದ್ಯಕೀಯ ಸೇವೆಯ ಜಂಟಿ ಪ್ರಧಾನ ವ್ಯವಸ್ಥಾಪಕ ಡಾ| ಕೆ. ಯೋಗೀಶ ಮಾತನಾಡಿ, ವಿದ್ಯಾಭ್ಯಾಸದ ಬಳಿಕ ಸವಾಲಿನ ಜಗತ್ತಿಗೆ ತೆರಳುವ ಸಂದರ್ಭ ಆತ್ಮವಿಶ್ವಾಸದೊಂದಿಗೆ ಮುನ್ನಡೆಯಿರಿ. ಉತ್ತಮ ಜೀವನ ರೂಪಿಸಿಕೊಡಲು ನೆರವಾದ ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಯನ್ನು ಸದಾ ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು. ಹೊಸ ಹೊಸ ಅವಕಾಶಗಳು ಇಂದು ಹೆಚ್ಚಿದ್ದು, ಸ್ಟಾರ್ಟ್‌ ಅಪ್‌ನಂತಹ ಸ್ವಂತ ಯೋಜನೆ ಆರಂಭಿಸಲು ಅವಕಾಶವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿ.ವಿ. ಕುಲಾಧಿಪತಿ ಹಾಗೂ ಎ. ಶಾಮರಾವ್‌ ಪ್ರತಿಷ್ಠಾನದ ಅಧ್ಯಕ್ಷ ಡಾ| ಸಿಎ ಎ. ರಾಘವೇಂದ್ರ ರಾವ್‌ ಮಾತನಾಡಿ, ನಮ್ಮ ಪ್ರಪಂಚದ ಬೆಳವಣಿಗೆಗೆ ಪ್ರತಿಯೊಂದು ವೃತ್ತಿಯು ನಿರ್ಣಾಯಕವಾಗಿದೆ ಎಂದರು. ಸಮಾಜ ಮತ್ತು ಜನರ ಸೇವೆ ಮಾಡಲು ಪ್ರಯತ್ನಿಸುವುದು ಒಬ್ಬರು ಕೈಗೊಳ್ಳಬಹುದಾದ ದೊಡ್ಡ ಪ್ರಯತ್ನವಾಗಿದೆ. ಯಾವುದೇ ಕೆಲಸವು ಇರಲಿ, ಅದನ್ನು ಗೌರವಿಸಬೇಕು ಮತ್ತು ತಮ್ಮ ಕೆಲಸಕ್ಕೆ ಸಮರ್ಪಿಸಬೇಕು ಎಂದರು.

ಗೌರವ ಅತಿಥಿಯಾಗಿದ್ದ ಸಹ ಕುಲಾಧಿಪತಿ, ಎ. ಶಾಮರಾವ್‌ ಫೌಂಡೇಶನ್‌ ಉಪಾಧ್ಯಕ್ಷ ಡಾ| ಎ. ಶ್ರೀನಿವಾಸ್‌ ರಾವ್‌ ಶುಭ ಹಾರೈಸಿದರು. ಉಪಕುಲಪತಿ ಡಾ| ಸತ್ಯನಾರಾಯಣ ರೆಡ್ಡಿ ವರದಿ ಮಂಡಿಸಿದರು.

ಶ್ರೀನಿವಾಸ ವಿ.ವಿ. ಆಡಳಿತ ಮಂಡಳಿ ಸದಸ್ಯರಾದ ಪ್ರೊ| ಎ. ಮಿತ್ರ ಎಸ್‌. ರಾವ್‌, ಆಡಳಿತ ಮಂಡಳಿ ಟ್ರಸ್ಟಿ ಸದಸ್ಯರಾದ ಎ. ವಿಜಯಲಕ್ಷ್ಮೀ ಆರ್‌.ರಾವ್‌, ಪದ್ಮಿನಿ ಕುಮಾರ್‌, ಡಾ| ಉದಯ್‌ ಕುಮಾರ್‌ ಮಯ್ಯ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ| ಅನಿಲ್‌ ಕುಮಾರ್‌, ಮೌಲ್ಯಮಾಪನ ಕುಲಸಚಿವ ಡಾ| ಶ್ರೀನಿವಾಸ್‌ ಮಯ್ಯ ಡಿ., ಅಭಿವೃದ್ಧಿ ರಿಜಿಸ್ಟ್ರಾರ್‌ ಡಾ| ಅಜಯ್‌ ಕುಮಾರ್‌, ಅಕಾಡೆಮಿಕ್‌ ರಿಜಿಸ್ಟ್ರಾರ್‌ ಡಾ| ಆದಿತ್ಯ ಕುಮಾರ್‌ ಮಯ್ಯ, ವಿವಿಧ ಸಂಸ್ಥೆಗಳ ಡೀನ್‌ಗಳು ಉಪಸ್ಥಿತರಿದ್ದರು.

ಘಟಿಕೋತ್ಸವದ ಸಮಯದಲ್ಲಿ, 1,257 ಪದವೀಧರರು (ಪಿಜಿ – 358, ಯುಜಿ – 881) ತಮ್ಮ ಪ್ರಮಾಣಪತ್ರಗಳನ್ನು ಪಡೆದರು. ವಿ.ವಿ.ಯು 144 ರ್‍ಯಾಂಕ್‌ ಪ್ರಕಟಿಸಿದ್ದು, ಒಟ್ಟು 38 ಪದವೀಧರರು ಕುಲಪತಿಗಳ ಚಿನ್ನದ ಪದಕ ಪಡೆದರು.

ಹೆಚ್ಚುವರಿಯಾಗಿ, 1 ಡಿಎಸ್‌ಸಿ ಮತ್ತು 17 ಪಿಎಚ್‌ಡಿಯನ್ನು ನೀಡಲಾಯಿತು. ಕುಲಸಚಿವ ಡಾ| ಅನಿಲ್‌ ಕುಮಾರ್‌ ಸ್ವಾಗತಿಸಿ, ಅಭಿವೃದ್ಧಿ ಕುಲಸಚಿವ ಡಾ| ಅಜಯ್‌ ಕುಮಾರ್‌ ವಂದಿಸಿದರು. ಡಾ| ಅಂಬಿಕಾ ಮಲ್ಯ, ಡಾ| ವಿಜಯಲಕ್ಷ್ಮೀ ನಾಯಕ್‌, ಪ್ರೊ| ರೋಹನ್‌ ಫೆರ್ನಾಂಡಿಸ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.