ಶಿಥಿಲಾವಸ್ಥೆಯಲ್ಲಿದ್ದ ಕುದ್ಮುಲ್ ರಂಗರಾವ್‌ ಹೆಣ್ಣು ಮಕ್ಕಳ ವಸತಿ ನಿಲಯಕ್ಕೆ ಕಾಯಕಲ್ಪ

7 ಕೋ.ರೂ. ವೆಚ್ಚದಲ್ಲಿ ಪುನಃ ನಿರ್ಮಾಣ

Team Udayavani, Jun 6, 2019, 6:00 AM IST

0506MLR46

ಮಹಾನಗರ: ಒಂದೂವರೆ ವರ್ಷದಿಂದ ಮುಚ್ಚಿದ್ದ ಕೊಡಿಯಾಲ ಬೈಲ್‌ನ ಕುದ್ಮುಲ್  ರಂಗರಾವ್‌ ಹೆಣ್ಣು ಮಕ್ಕಳ ವಸತಿ ನಿಲಯಕ್ಕೆ  ಹೊಸ ಕಟ್ಟಡ ಹೊಂದುವ ಭಾಗ್ಯ ಲಭಿಸಿದ್ದು, ಸುಮಾರು ಏಳು ಕೋಟಿ ರೂ. ವೆಚ್ಚದಲ್ಲಿ ಪುನಃ ನಿರ್ಮಾಣಗೊಳ್ಳಲಿದೆ.

ಶಿಥಿಲಾವಸ್ಥೆಯಲ್ಲಿರುವ ಕಾರಣ ಈ ವಸತಿ ನಿಲಯವು ವಾಸಕ್ಕೆ ಯೋಗ್ಯವಲ್ಲ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಒಂದೂವರೆ ವರ್ಷಗಳಿಂದ ಮುಚ್ಚಿ, ವಿದ್ಯಾರ್ಥಿನಿಯರನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಖಾಸಗಿ ಕಟ್ಟ ಡಕ್ಕೆ ತಿಂಗಳಿಗೆ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿತ್ತು. ವಸತಿ ನಿಲಯದ ದುರಸ್ತಿಗೆ ಸರಕಾರಕ್ಕೆ ಮನವಿ ಮಾಡಿದ್ದರೂ ಸೂಕ್ತ ಸ್ಪಂದನೆ ದೊರೆತಿರಲಿಲ್ಲ.

ಇದೀಗ ಪುನಃ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಯು 7 ಕೋಟಿ ರೂ. ಮಂಜೂರು ಮಾಡಿದ್ದು, ಕಾಮಗಾರಿಗಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಹಿಂದಿನ ಕಟ್ಟಡದಲ್ಲಿ 150 ವಿದ್ಯಾರ್ಥಿಗಳಿಗೆ ಅವಕಾಶವಿತ್ತು. ಆದರೆ ಹೊಸ ಕಟ್ಟಡದಲ್ಲಿ 200ರಿಂದ 250 ವಿದ್ಯಾರ್ಥಿಗಳಿಗೆ ಅವಕಾಶವಿರಲಿವೆ.
ಹೆಚ್ಚುವರಿ ವಸತಿ ನಿಲಯಗಳಿಗಾಗಿ ಬೇಡಿಕೆ ಇದ್ದು, ಆ ಬಗ್ಗೆಯೂ ಸರಕಾರದ ಗಮನಕ್ಕೆ ತರಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮೂವತ್ತು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ವಸತಿ, ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ದಿ| ಕುದ್ಮುಲ್  ರಂಗರಾವ್‌ ಹೆಣ್ಣು ಮಕ್ಕಳ ವಸತಿ ನಿಲಯವನ್ನು ಸ್ಥಾಪಿಸಲಾಗಿತ್ತು.

ಹೆಚ್ಚುವರಿ ವಿದ್ಯಾರ್ಥಿ ನಿಲಯಕ್ಕೆ ಆಗ್ರಹ
ಸದ್ಯ ಜಿಲ್ಲೆಯಲ್ಲಿ 29 ವಸತಿ ನಿಲಯಗಳಿದ್ದು, ಇದರಲ್ಲಿ 10 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ, 19 ಮೆಟ್ರಿಕ್‌ ಪೂರ್ವ ವಸತಿ ನಿಲಯಗಳಿವೆ. ಇದರಲ್ಲಿ 820 ವಿದ್ಯಾರ್ಥಿಗಳಿಗೆ ವಾಸ್ತವ್ಯ ಹೂಡಲು ಅವಕಾಶವಿದೆ. ಆದರೆ ಪ್ರತಿ ವರ್ಷ ಸುಮಾರು 1800 ಅರ್ಜಿಗಳು ಬರುತ್ತವೆ. ಬಳಿಕ ವಿದ್ಯಾರ್ಥಿಗಳ ಆಯ್ಕೆ ಮಾಡಿ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ನಗರದಲ್ಲಿ 2 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಹುಡುಗರಿಗೆ, 2 ಮೆಟ್ರಿಕ್‌ ಪೂರ್ವ ವಸತಿ ನಿಲಯ ಹುಡುಗಿಯರಿಗೆ, ಒಂದು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಹುಡುಗರಿಗೆ, ಒಂದು ಮೆಟ್ರಿಕ್‌ ಪೂರ್ವ ವಸತಿ ವ್ಯವಸ್ಥೆ ಹುಡುಗರಿಗೆ ಇದೆ. ನಗರ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿಲ್ಲ. ಹೆಚ್ಚುವರಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ವಿವಿಧ ಸಂಘಟನೆಗಳು ಸರಕಾರಕ್ಕೆ ಮನವಿ ಮಾಡಿವೆ.

 ಪರ್ಯಾಯ ವ್ಯವಸ್ಥೆ ಕಲ್ಪಿಸಿ
ನಗರದ ಹೊರಭಾಗಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯ ಸೌಲಭ್ಯಗಳು ದೊರೆತಾಗ ಉತ್ತಮ ವಿದ್ಯಾಭ್ಯಾಸ ಪಡೆಯುವ ಅವಕಾಶವಿತ್ತು. ಇದೀಗ ಖಾಸಗಿ ಪಿಜಿಗಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಆದಷ್ಟು ಬೇಗ ಪರ್ಯಾಯ ವ್ಯವಸ್ಥೆ ಮಾಡಬೇಕು.
 - ರಘುರಾಜ್‌ ಕದ್ರಿ,
ಅಖೀಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷ

 ಹೆಚ್ಚುವರಿ ವಸತಿ ನಿಲಯಕ್ಕೆ ಪ್ರಸ್ತಾವನೆ ಸಲ್ಲಿಕೆ
ನಗರ ವ್ಯಾಪ್ತಿಯಲ್ಲಿ ಇಲಾಖೆಯ ವಸತಿ ನಿಲಯಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಹೆಚ್ಚುವರಿ ನಾಲ್ಕು ವಸತಿ ನಿಲಯಗಳನ್ನು ನಗರ ವ್ಯಾಪ್ತಿಯಲ್ಲಿ ತೆರೆಯುವಂತೆ ಇಲಾಖೆ ವತಿಯಿಂದ ಸರಕಾರಕ್ಕೆ ಮನವಿ ನೀಡಲಾಗಿದೆ.
– ಯೋಗೀಶ್‌,
ಸಮಾಜ ಕಲ್ಯಾಣಾಧಿಕಾರಿ, ದ.ಕ.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.