ಕರಾವಳಿಗೆ 7 ಸಾವಿರ ಡೋಸ್ ಲಸಿಕೆ
Team Udayavani, May 5, 2021, 7:06 AM IST
ಮಂಗಳೂರು: ದ.ಕ. ಜಿಲ್ಲೆಗೆ ಮಂಗಳವಾರ ಬೆಂಗಳೂರಿನಿಂದ 7 ಸಾವಿರ ಡೋಸ್ ಕೊವಿಶೀಲ್ಡ್ ಲಸಿಕೆ ಬಂದಿದ್ದು, ಬುಧವಾರದಿಂದ ಜಿಲ್ಲೆಯ ತಾಲೂಕು, ಜಿಲ್ಲಾ ಆಸ್ಪತ್ರೆಯ ಜತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರ ಮಟ್ಟದಲ್ಲೂ ಲಸಿಕೆ ನೀಡಲಾಗುತ್ತದೆ.
ಎರಡನೇ ಡೋಸ್ ಪಡೆಯು ವವರಿಗೆ ಮಾತ್ರ ಅವಕಾಶ. ಎರಡು ದಿನಗಳಲ್ಲಿ ಕೊವ್ಯಾಕ್ಸಿನ್ ಕೂಡ ಜಿಲ್ಲೆಗೆ ಬರಲಿದೆ. ಆದ್ದರಿಂದ ಕೊವ್ಯಾಕ್ಸಿನ್ ಲಸಿಕೆ 2ನೇ ಡೋಸ್ ಪಡೆಯುವವರು ಗಾಬರಿಪಡಬೇಕಿಲ್ಲ. ಮೊದಲ ಡೋಸ್ ಪಡೆದು 10ರಿಂದ 12 ವಾರ ಗಳಾ ದರೂ ಯಾವುದೇ ರೀತಿಯ ಆತಂಕ ಪಡಬೇಕಾಗಿಲ್ಲ. ಲಸಿಕೆ ಬಂದ ಕೂಡಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
2ನೇ ಡೋಸ್ನವರಿಗೆ ಆದ್ಯತೆಯಲ್ಲಿ ಲಸಿಕೆ :
ಉಡುಪಿ: ಕೊವಿಶೀಲ್ಡ್ ಲಸಿಕೆಯ ದಾಸ್ತಾನು ಸಾಕಷ್ಟು ಇಲ್ಲದಿರುವುದರಿಂದ ಪ್ರಥಮ ಡೋಸ್ ಪಡೆದು 8 ವಾರ ಮೀರಿದ 947 ಅರ್ಹ ಫಲಾನುಭವಿಗಗಳು ಜಿಲ್ಲೆಯಲ್ಲಿದ್ದಾರೆ. ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬಂದಿ ಅಂಥವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮ ಕೈಗೊಳ್ಳುತ್ತಾರೆ. ಪ್ರಥಮ ಡೋಸ್ ಕೊವಿಶೀಲ್ಡ್ ಪಡೆದು 8 ವಾರ ಮೀರಿ ದವರು ಆಶಾ ಕಾರ್ಯಕರ್ತೆಯರಿಗೆ ಕರೆ ಮಾಡಿ 2ನೇ ಡೋಸ್ ಲಸಿಕೆ ಪಡೆಯಬಹುದಾಗಿದೆ.
ಸದ್ಯ ಪ್ರಥಮ ಡೋಸ್ ಇಲ್ಲ :
ಲಸಿಕೆ ಸರಬರಾಜಾದ ತತ್ಕ್ಷಣ 2ನೇ ಡೋಸ್ಗಾಗಿ ಕಾಯುತ್ತಿರುವವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ಜನರಿಗೆ ಮಾಹಿತಿ ನೀಡುವ ಮೂಲಕ ಪ್ರಥಮ ಡೋಸ್ ಪಡೆಯಲು ವ್ಯವಸ್ಥೆ ಮಾಡು ವರು ಎಂದು ಜಗದೀಶ್ ತಿಳಿಸಿದ್ದಾರೆ.
ಕೊವ್ಯಾಕ್ಸಿನ್ ಪೂರೈಕೆ ಬಳಿಕ ಜಿಲ್ಲೆಯಲ್ಲಿ ಕೊವ್ಯಾಕ್ಸಿನ್ ಅಲಭ್ಯ ವಾಗಿದ್ದು ರಾಜ್ಯದಿಂದ ಸರಬರಾಜಾದ ತತ್ಕ್ಷಣ ಪ್ರಥಮ ಡೋಸ್ ಪಡೆದುಅವಧಿ ಪೂರೈಸಿದವರಿಗೆ ಆದ್ಯತೆ ಮೇರೆಗೆಲಸಿಕೆ ನೀಡುವ ಬಗ್ಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬಂದಿ ಕರೆ ಮಾಡಿ ಕ್ರಮ ಕೈಗೊಳ್ಳುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ