ನಂದಿನಿಯ 70 ಸಾವಿರ ಲೀ. ಹಾಲು ಬಾಕಿ!

ಹಾಲು-ಪೇಪರ್‌ ವಾಹನಕ್ಕೂ ವಿನಾಯಿತಿ ನೀಡದ ಕರ್ಫ್ಯೂ

Team Udayavani, Dec 22, 2019, 4:09 AM IST

cd-45

ಮಂಗಳೂರು: ಕರ್ಫ್ಯೂ ವಿಧಿಸಿದ ಪರಿಣಾಮ ನಂದಿನಿ ಹಾಲು ಪೂರೈಸುವ ಕೆಎಂಎಫ್‌ನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮೇಲೂ ಬಿದ್ದಿದೆ. ಎರಡು ದಿನಗಳಿಂದ ಸಮರ್ಪಕವಾಗಿ ಹಾಲು ಪೂರೈಕೆ ಮಾಡಲು ಸಾಧ್ಯವಾಗಿಲ್ಲ. ಅಗತ್ಯ ವಸ್ತುವಾದ ಹಾಲು ಸರಬರಾಜಿಗೆ ವಿನಾಯಿತಿ ಇದ್ದರೂ ಪೊಲೀಸರು ನಂದಿನಿ ಅಧಿಕೃತ ಮಳಿಗೆ ತೆರೆದಿರಿಸಲು ಅವಕಾಶ ನೀಡಿರಲಿಲ್ಲ. ನಗರದೊಳಗೆ ಹಾಲಿನ ವಾಹನ ಪ್ರವೇಶಕ್ಕೂ ಅವಕಾಶ ನೀಡಿಲ್ಲ. ಇದು ನಂದಿನಿ ಡೈರಿಗೂ ಅನನುಕೂಲ ಸೃಷ್ಟಿಸಿದರೆ ಗ್ರಾಹಕರಿಗೂ ಹಾಲು ದೊರೆಯದೆ ತೊಂದರೆಯಾಯಿತು.

ಮಂಗಳೂರು ಮತ್ತು ಉಳ್ಳಾಲ ಪರಿಸರದ ಬಹುತೇಕ ಎಲ್ಲ ಮಾರ್ಗಗಳಲ್ಲಿಯೂ ಹಾಲಿನ ವಾಹನಗಳನ್ನು ಪೊಲೀಸರು ತಡೆದಿ ದ್ದಾರೆ. ಹಲವೆಡೆ ಗರಿಷ್ಠ ಪ್ರಯತ್ನ ಮಾಡಿ ಒದಗಿಸಲಾಗಿದೆ. ಆದರೂ ದಿನವೊಂದಕ್ಕೆ 60 ರಿಂದ 70 ಸಾವಿರ ಲೀ. ಹಾಲು, 10ರಿಂದ 12 ಸಾವಿರ ಲೀ. ಮೊಸರು ಮಾರಾಟ ಕಡಿಮೆಯಾಗಿದೆ. ಹಿಂದೆ ಕರ್ಫ್ಯೂ ಹೇರಿದ್ದಾಗ ಹಾಲಿನ ವಾಹನಗಳಿಗೆ ವಿನಾಯಿತಿ ನೀಡಲಾಗಿತ್ತು. ಈ ಬಾರಿ ಪೊಲೀಸರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶನಿವಾರ ಜಿಲ್ಲಾಧಿಕಾರಿಯವರಿಗೂ ಮನವಿ ಮಾಡಿ ಹಾಲಿನ ವಾಹನಗಳಿಗೆ ವಿನಾಯಿತಿ ಪಾಸ್‌ ನೀಡಲು ಮನವಿ ಮಾಡಿದ್ದೇವೆ ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

“ವಿತರಣೆಗೆ ಅಡ್ಡಿ’
ಹೈನುಗಾರರಿಂದ ದಿನನಿತ್ಯ 4.55 ಲಕ್ಷ ಲೀ. ಹಾಲು ಸಂಗ್ರಹಿಸುತ್ತೇವೆ. ಅದನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ವಿತರಿಸಲು ಅಡ್ಡಿಯಾಗಿದೆ. ಉಳಿದಿರುವ ಹಾಲನ್ನು ಧಾರವಾಡ ಮತ್ತು ಹಾಸನದಲ್ಲಿರುವ ಹಾಲಿನ ಪುಡಿ ಘಟಕಗಳಿಗೆ ಅನಿವಾರ್ಯವಾಗಿ ರವಾನಿಸಬೇಕಾಗುತ್ತದೆ. ಇದು ಒಟ್ಟಾರೆ ಹಾಲು ಒಕ್ಕೂಟಕ್ಕೆ ಹೊರೆ, ಸಾರ್ವಜನಿಕರಿಗೂ ತೊಂದರೆ. ಜಿಲ್ಲಾಡಳಿತ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ರವಿರಾಜ ಹೆಗ್ಡೆ ಅವರು ಹೇಳಿದ್ದಾರೆ.

ಪೇಪರ್‌ ವಿತರಣೆಗೂ ಅಡ್ಡಿ
ಬಿಗಿ ಪೊಲೀಸ್‌ ಬಂದೋಬಸ್ತ್, ಕರ್ಫ್ಯೂ ವಿಧಿಸಿದ್ದರೂ ಆವಶ್ಯಕವಾದ ಹಾಲು, ದಿನಪತ್ರಿಕೆ ಮತ್ತು ಔಷಧ ಪೂರೈಕೆ-ಮಾರಾಟಕ್ಕೆ ವಿನಾಯಿತಿ ನೀಡಲಾಗುತ್ತದೆ. ಆದರೆ ಎರಡು ದಿನಗಳಲ್ಲಿ ಕರ್ಫ್ಯೂ ಸಂದರ್ಭ ದಿನಪತ್ರಿಕೆ ವಿತರಣೆ, ಮಾರಾಟವೂ ಬಹಳಷ್ಟು ಕಡೆ ಸಾಧ್ಯವಾಗಿಲ್ಲ. ಕುದ್ರೋಳಿ, ಕಂಕನಾಡಿ, ಮಂಗಳಾದೇವಿ, ಅಳಪೆ, ಸ್ಟೇಟ್‌ಬ್ಯಾಂಕ್‌ ಮುಂತಾದ ಕಡೆ ಪೇಪರ್‌ ವಿತರಣೆಗೆ ಪೊಲೀಸರು ಅವಕಾಶ ನೀಡಿರಲಿಲ್ಲ. ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿಯೂ ಪೇಪರ್‌ ಮಾರಾಟ ಮಾಡುವುದಕ್ಕೆ ಅವಕಾಶ ನೀಡದೆ ಪೊಲೀಸರು ಬಲವಂತವಾಗಿ ಅಂಗಡಿ ಬಾಗಿಲು ಹಾಕಿಸಿದ್ದಾರೆ ಎಂದು ಕೆಲವು ಪತ್ರಿಕಾ ಏಜೆಂಟ್‌ಗಳು ದೂರಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.