ಬಯೋ ಮೈನಿಂಗ್‌, ತಡೆಗೋಡೆ ನಿರ್ಮಾಣಕ್ಕೆ 8 ಕೋಟಿ ರೂ. ಬಿಡುಗಡೆ

ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ಗೆ ಸಚಿವರ ಭೇಟಿ

Team Udayavani, Feb 29, 2020, 10:54 PM IST

dumping-yard

ಸುರತ್ಕಲ್‌: ರಾಜ್ಯದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಶನಿವಾರ ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ಗೆ ಭೇಟಿ ನೀಡಿದರು. ಕಳೆದ ಮಳೆಗಾಲದಲ್ಲಿ ಭೂ ಕುಸಿತವಾದ ಮಂದಾರ ಪ್ರದೇಶ, ಸ್ಥಳೀಯರ ಅಹವಾಲುಗಳನ್ನು ಆಲಿಸಿ ದರು. ಒಂದು ವರ್ಷದಿಂದ ಸಚಿವರು ಅಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದ್ದಾರೆ. ಪರಿಹಾರ ಕಾರ್ಯ ವಿಳಂಬವಾಗುತ್ತಿದೆ. ಈ ಮಳೆಗಾಲದ ಮುನ್ನ ಗ್ರಾಮದ ಜನರಿಗೆ ನಡೆದಾಡಲು ರಸ್ತೆ ಹಾಗೂ ಇನ್ನಷ್ಟು ಭೂ ಕುಸಿತ ಆಗದಂತೆ ಕೂಡಲೇ ತಡೆಗೋಡೆ ರಚನೆಗೆ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭ ಮಾಹಿತಿ ನೀಡಿದ ಅಧಿಕಾರಿಗಳು ಡಂಪಿಂಗ್‌ ಯಾರ್ಡ್‌ ಪ್ರದೇಶದಲ್ಲಿ ತಡೆಗೋಡೆ, ತ್ಯಾಜ್ಯಗಳ ವಿಲೇವಾರಿ ಕುರಿತಂತೆ ಎನ್‌ಐಟಿಕೆ ತಜ್ಞರಲ್ಲಿ ಚರ್ಚಿಸಲಾಗಿದೆ. ಮಳೆಗಾಲದಲ್ಲಿ ತ್ಯಾಜ್ಯ ಪ್ರದೇಶದಲ್ಲಿ ಹರಿಯುವ ನೀರಿನ ಹರಿವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು. ಸ್ಥಳೀಯರು ಈ ಭಾಗದಲ್ಲಿ ಸಮಸ್ಯೆಯಲ್ಲಿದ್ದರೂ ಸಮರೋಪಾದಿಯಲ್ಲಿ ಸ್ಪಂದಿಸದ ಅ ಧಿಕಾರಿಗಳ ನಿಧಾನಗತಿಯ ಪರಿಹಾರ ಕಾರ್ಯಗಳಿಗೆ ಅಸಮಧಾನ ವ್ಯಕ್ತ ಪಡಿಸಿದರು.

ಶೀಘ್ರ ಕಾಮಗಾರಿ ಆರಂಭಿಸಿ
ಎಂಟು ತಿಂಗಳುಗಳಿಂದ ನಮಗೆ ಪರಿಹಾರ, ಮುಂದಿನ ಕ್ರಮದ ಬಗ್ಗೆ ಮಹಿತಿ ಸಿಗುತ್ತಿಲ್ಲ. 27 ಕುಟುಂಬಗಳು ಅತಂತ್ರವಾಗಿವೆ. 18 ಕುಟುಂಬಗಳು ಸರಕಾರ ಒದಗಿಸಿದ ಫ್ಲ್ಯಾಟ್‌ನಲ್ಲಿ ವಾಸವಿದ್ದಾರೆ ಎಂದು ಸಂತ್ರಸ್ಥ ಕುಟುಂಬದ ಮಂದಾರಬೈಲು ರಾಜೇಶ್‌ ಭಟ್‌, ಗಣೇಶ್‌ ಹೇಳಿದಾಗ, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಯಾರಿಗೂ ಅನ್ಯಾಯ ವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಶಾಸಕರು, ಪಾಲಿಕೆಯ ಮೇಯರ್‌ ಸಹಿತ ಜನಪ್ರತಿನಿ ಧಿಗಳನ್ನು ವಿಶ್ವಾಸಕ್ಕೆ ಪಡೆದು ಶೀಘ್ರ ತಡೆಗೋಡೆ ಸಹಿತ ಪರಿಹಾರ ಕಾರ್ಯ ಆರಂಭಿಸಬೇಕು. ಕಾಮಗಾರಿಯ ಚಿತ್ರವನ್ನು ವಾಟ್ಸ್‌ಆಪ್‌ ಮೂಲಕ ತನಗೆ ಕಳಿಸಬೇಕು. ಮುಂದಿನ ತಿಂಗಳ ಪ್ರವಾಸದ ಮುನ್ನ ಕಾಮಗಾರಿ ಆರಂಭವಾಗಿರಬೇಕು. ಇದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಇಲಾಖೆ ನೀಡುತ್ತದೆ. ಇನ್ನೂ ವಿಳಂಬವಾದಲ್ಲಿ ತಪ್ಪಿತಸ್ಥ ಅಧಿ ಕಾರಿಗಳ ಮೇಲೆ ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಸಿದರು.

ಶಾಸಕ ವೇದವ್ಯಾಸ ಕಾಮತ್‌, ಮೇಯರ್‌ ದಿವಾಕರ್‌, ಆಯುಕ್ತ ಶಾನಾಡಿ ಅಜಿತ್‌ಕುಮಾರ್‌ ಹೆಗ್ಡೆ, ಜಂಟಿ ಆಯುಕ್ತ ಸಂತೋಷ್‌ ಕುಮಾರ್‌, ಭಾಸ್ಕರ ಮೊಲಿ, ಸ್ಥಳೀಯ ಕಾರ್ಪೊರೇಟರ್‌ ಸಂಗೀತಾ, ಹಿರಿಯ ಪಾಲಿಕೆ ಎಂಜಿನಿಯರ್‌ಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಹೆಚ್ಚುವರಿ ಅನುದಾನಕ್ಕೆ ಮನವಿ
ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಈ ಸಂದರ್ಭ ಸ್ಥಳೀಯರಿಗೆ ಪರಿಹಾರಕ್ಕೆ ಈಗಾಗಲೇ ಸರಕಾರ 8 ಕೋ.ರೂ. ಬಿಡುಗಡೆ ಮಾಡಿದ್ದರೂ ಸಾಕಾಗದು. ಸ್ಥಳೀಯರನ್ನು ಇದೀಗ ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರಿಸಲಾಗಿದೆ. ಪರ್ಯಾಯ ವ್ಯವಸ್ಥೆ, ಅವರ ಕೃಷಿ ಭೂಮಿ ಮತ್ತಿತರ ಕಳೆದುಕೊಂಡ ಭೂಮಿ, ಮನೆ ಮತ್ತಿತರ ವಸ್ತುಗಳ ಮೌಲ್ಯ ನಿಗದಿ, ಪರಿಹಾರ ಮತ್ತಿತರ ಕ್ರಮಗಳಿಗೆ ಹೆಚ್ಚುವರಿ ಅನುದಾನ ಬಿಡಗಡೆಗೊಳಿಸುವಂತೆ ಮನವಿ ಮಾಡಿದರು.

ಸಿಎಂ ಜತೆ ಚರ್ಚಿಸಿ ಕ್ರಮ
ಪಚ್ಚನಾಡಿ ತ್ಯಾಜ್ಯ ಕುಸಿತ ತೆರವು ಹಾಗೂ ಪರಿಹಾರ ಕಾರ್ಯಗಳಿಗೆ ಈಗಾಗಲೇ ಸರಕಾರ 8 ಕೋಟಿ ರೂ. ಬಿಡುಗಡೆಗೊಳಿಸಿದೆ. ಸಮಗ್ರ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಇನ್ನೂ 20 ಕೋಟಿ ರೂ.ಗಳ ಅಗತ್ಯವಿದೆ ಎಂದು ಆಯುಕ್ತರು ಹಾಗೂ ಶಾಸಕರು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಎ. ಬಸವರಾಜ್‌ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.