ಅಬ್ಬಕ್ಕ ಭವನಕ್ಕೆ 8 ಕೋಟಿ ರೂ.ಮಂಜೂರು: ಕೋಟ
Team Udayavani, Mar 2, 2020, 7:35 AM IST
ಉಳ್ಳಾಲ: ದ. ಕ. ಜಿಲ್ಲಾಡಳಿತ, ಜಿ. ಪಂ. ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಅಸೈಗೋಳಿಯ ಕೇಂದ್ರ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಾಹಿತ್ಯ ಕ್ಷೇತ್ರದಿಂದ ಖ್ಯಾತ ಸಾಹಿತಿ, ಕಾದಂಬರಿಗಾರ್ತಿ ಉಷಾ ಪಿ. ರೈ ಮತ್ತು ಸಾಹಿತ್ಯೇತ್ತರ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಅವರಿಗೆ ಅಬ್ಬಕ್ಕ ಪ್ರಶಸ್ತಿ ನೀಡಿ ಸಮ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿ ರಾಣಿ ಅಬ್ಬಕ್ಕ ತನ್ನ ಬದುಕನ್ನೇ ದೇಶಕ್ಕೆ ಪಣವಾಗಿಟ್ಟಿದ್ದು ರಾಷ್ಟ್ರಪ್ರೇಮದ ಪ್ರಶ್ನೆ ಬಂದಾಗ ಮೊದಲ ಪ್ರಾಶಸ್ತÂ ರಾಣಿ ಅಬ್ಬಕ್ಕಳಿಗೆ ಸಿಗಬೇಕು ಎಂದ ಅವರು ಕಾರ್ಯಕ್ರಮದಲ್ಲಿ ಇಬ್ಬರು ಸಾಧಕ ಮಹಿಳೆಯರಿಗೆ ಜಿಲ್ಲಾಡಳಿತ ಅಬ್ಬಕ್ಕ ಪ್ರಶಸ್ತಿ ನೀಡಿದೆ. ಉಳ್ಳಾಲದಲ್ಲಿ ಅಬ್ಬಕ್ಕ ಭವನಕ್ಕೆ ಎಂಟು ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು ಶೀಘ್ರದಲ್ಲಿಯೇ ಭವನ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಆ ಭವನದಲ್ಲಿ ಅಬ್ಬಕ್ಕಳ ಬದುಕನ್ನು ಇಡೀ ಪ್ರಪಂಚವೇ ಕಣ್ತೆರೆದು ನೋಡುವಂತೆ ಮಾಡುವಂತಹ ಎಲ್ಲ ಪ್ರಯತ್ನ ಸರಕಾರ ಮಾಡಲಿದೆ ಎಂದರು.
ಶಾಸಕ ಯು.ಟಿ. ಖಾದರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ಜಿಲ್ಲಾ ಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾ ಧಿಕಾರಿ ಎಂ.ಜೆ. ರೂಪಾ, ಸಹಾಯಕ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.
ರಾಜೇಂದ್ರ ಕಲಾºವಿ ಹಾಗೂ ಬಬಿತಾ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಕೇಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?