ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ದ.ಕ.: ಕೋವಿಡ್‌ ನಿಯಂತ್ರಣಕ್ಕೆ ವಿವಿಧ ಯೋಜನೆ

Team Udayavani, Oct 16, 2021, 6:29 AM IST

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ಸಾಂದರ್ಭಿಕ ಚಿತ್ರ.

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಕೆಲವು ದಿನಗಳಿಂದ ತುಸು ಹಿನ್ನಡೆ ಉಂಟಾದರೂ ಜಿಲ್ಲೆಯ ಶೇ.82ರಷ್ಟು ಮಂದಿ ಈಗಾಗಲೇ ಮೊದಲನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. ಆದರೆ ಇನ್ನುಳಿದ ಶೇ. 18ರಷ್ಟು ಗುರಿ ತಲುಪುವುದು ನಾನಾ ಕಾರಣಗಳಿಗೆ ಆರೋಗ್ಯ ಇಲಾಖೆಗೂ ಸವಾಲಾಗಿ ಪರಿಣಮಿಸಿದೆ.

ಜಿಲ್ಲೆಯಲ್ಲಿ ಸದ್ಯ ಲಸಿಕೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದ್ದರೂ ಇನ್ನೂ 3.24 ಲಕ್ಷ ಮಂದಿ ಮೊದಲನೇ ಡೋಸ್‌ ಲಸಿಕೆ ಪಡೆಯಲು ಬಾಕಿ ಇದ್ದಾರೆ. ಅವರ ಮನವೊಲಿಕೆ ಕೆಲಸ ಆರೋಗ್ಯ ಇಲಾಖೆಯಿಂದ ನಡೆಯುತ್ತಿದ್ದರೂ ಕೆಲವೆಡೆ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಲಸಿಕೆ ಗುರಿ ತಲುಪುವುದು ಆರೋಗ್ಯ ಇಲಾಖೆಗೆ ಸವಾಲಾಗಿದ್ದು, ಇದೀಗ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕೋವಿಡ್‌, ಲಸಿಕೆಯ ಕುರಿತು ಅಪನಂಬಿಕೆ, ತಪ್ಪು ತಿಳಿವಳಿಕೆ, ಲಸಿಕೆ ಪಡೆಯಲು ಅಸಡ್ಡೆ ಸಹಿತ ವಿವಿಧ ಕಾರಣದಿಂದಾಗಿ ಕೆಲವು ಮಂದಿ ಇನ್ನೂ ಲಸಿಕೆ ಪಡೆದುಕೊಂಡಿಲ್ಲ. ಆರೋಗ್ಯ ಇಲಾಖೆಯಿಂದ ಅಂತಹವರಿಗೆ ಕರೆ ಮಾಡಿ ಮನವೊಲಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ವಯೋ ಸಹಜ ಕಾಯಿಲೆಯವರಿಗೆ, ಅಶಕ್ತ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ಶೇ.96.94ರಷ್ಟು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಮೊದಲನೇ ಡೋಸ್‌, ಶೇ.68.96ರಷ್ಟು ಮಂದಿಗೆ 2ನೇ ಡೋಸ್‌, ಶೇ.100ರಷ್ಟು ಮಂದಿ ಮುಂಚೂಣಿ ಕಾರ್ಯ ಕರ್ತರಿಗೆ ಮೊದಲ ಡೋಸ್‌, ಶೇ.56.97ರಷ್ಟು ಮಂದಿಗೆ 2ನೇ ಡೋಸ್‌ ಲಸಿಕೆ ನೀಡಲಾಗಿದೆ. ಅದೇರೀತಿ, 18 ವರ್ಷದಿಂದ 44 ವರ್ಷ ದೊಳಗಿನ ಶೇ.71.22ರಷ್ಟು ಮಂದಿಗೆ ಮೊದಲ ಡೋಸ್‌, ಶೇ. 37.58ರಷ್ಟು ಮಂದಿಗೆ ಎರಡನೇ ಡೋಸ್‌, 45ರಿಂದ 60 ವರ್ಷದೊಳಗಿನ ಶೇ.97.89ರಷ್ಟು ಮಂದಿಗೆ ಮೊದಲ ಡೋಸ್‌, ಶೇ.60.19ರಷ್ಟು ಮಂದಿಗೆ 2ನೇ ಡೋಸ್‌ ಮತ್ತು 60 ವರ್ಷ ಮೇಲ್ಪಟ್ಟ ಶೇ.100ರಷ್ಟು ಮಂದಿಗೆ ಮೊದಲ ಡೋಸ್‌, ಶೇ.69.13ರಷ್ಟು ಮಂದಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ.

ಇಂದಿನಿಂದ ಹೊಸ ನಿಯಮ: ಲಸಿಕೆ ಪಡೆದುಕೊಳ್ಳುವಂತೆ ಪ್ರೇರೇಪಿಸಲು ಅ. 16 ರಿಂದ ಮಂಗಳೂರು ನಗರದ ಮಾಲ್‌ ಸಹಿತ ಎಲ್ಲ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಪಡೆಯಲು ಸಾರ್ವಜನಿಕರು ಲಸಿಕೆ ಸ್ವೀರಿಸಿದ ದಾಖಲೆ ಇಟ್ಟು ಕೊಳ್ಳುವುದು ಕಡ್ಡಾಯ ಎಂಬ ಸೂಚನೆಯನ್ನು ಪಾಲಿಕೆ ನೀಡಿದೆ. ನಗರದಲ್ಲಿ ಬೇಕಾಬಿಟ್ಟಿ ತಿರುಗಾಡುವುದನ್ನು ಗಂಭೀರ ವಾಗಿ ಪರಿಗಣಿಸಲಾಗುತ್ತದೆ ಎಂದು ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ 

ಶೇ. 100 ಲಸಿಕೆ ಗುರಿಗೆ ಸಹಕರಿಸೋಣ
ಇದು “ಉದಯವಾಣಿ-ಸುದಿನ’ ಕಳಕಳಿ
ಕೋವಿಡ್‌ ತಡೆಗಟ್ಟುವಲ್ಲಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್‌ ನಿರೋಧಕ ಲಸಿಕೆ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರು ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕೆಂಬುದು ಉದಯವಾಣಿ-ಸುದಿನ ಕಳಕಳಿಯಾಗಿದೆ. ಲಸಿಕೆ ಪಡೆದುಕೊಳ್ಳುವುದು ಕೊರೊನಾ ನಿಯಂತ್ರಿಸುವಲ್ಲಿ ಒಂದು ರೀತಿಯಲ್ಲಿ ಶ್ರೀರಕ್ಷೆಯಾಗಿದೆ. ಜಿಲ್ಲೆಗೆ ಈಗ ಲಸಿಕೆ ಪೂರೈಕೆ ಕೂಡ ಹೆಚ್ಚಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆ, ಹತ್ತಿರದ ಪ್ರಾ.ಆ. ಕೇಂದ್ರ, ಸ.ಆ.ಕೇಂದ್ರ, ತಾ| ಆ. ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಅಶಕ್ತರು ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯಲು ಸಾಧ್ಯವಿಲ್ಲದಾಗ ಹತ್ತಿರದ ಪ್ರಾ.ಆ. ಕೇಂದ್ರಕ್ಕೆ ಮಾಹಿತಿ ನೀಡಿದರೆ ಮನೆಗೆ ಬಂದು ಲಸಿಕೆ ನೀಡಲಾಗುತ್ತಿದೆ. ಎರಡನೇ ಡೋಸ್‌ ಪಡೆಯಲು ಮೊಬೈಲ್‌ಗೆ ಸಂದೇಶ ಬರದಿದ್ದರೂ ಕೊವಿಶೀಲ್ಡ್‌ ಲಸಿಕೆ ಪಡೆದು 84 ದಿನ, ಕೊವ್ಯಾಕ್ಸಿನ್‌ ಲಸಿಕೆ ಪಡೆದು 28 ದಿನ ಆದವರು 2ನೇ ಡೋಸ್‌ ಲಸಿಕೆ ಪಡೆಯಬಹುದು. ದ.ಕ. ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕೆ ಗುರಿ ತಲುಪುವುದಕ್ಕೆ ಪ್ರತಿಯೊಬ್ಬರು ಸಹಕರಿಸುವ ಮೂಲಕ ಜಿಲ್ಲಾಡಳಿತದ ಜತೆಗೆ ಕೈಜೋಡಿಸಬೇಕು ಎನ್ನುವುದು ಪತ್ರಿಕೆಯ ಕಳಕಳಿಯಾಗಿದೆ.

ಶಿಬಿರ ಆಯೋಜನೆ
ಸದ್ಯ ಮೊದಲ ಡೋಸ್‌ ಲಸಿಕೆ ಪಡೆದುಕೊಳ್ಳಲು ಕಡಿಮೆ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಇದೇ ಕಾರಣಕ್ಕೆ ಮೊದಲ ಡೋಸ್‌ ಲಸಿಕೆ ಪಡೆದುಕೊಳ್ಳಲು ಬಾಕಿ ಇರುವ ಎಲ್ಲರಿಗೂ ಕರೆ ಮಾಡಿ ಮಾಹಿತಿ ನೀಡಲಾಗುತ್ತಿದೆ. ಕೆಲವರಲ್ಲಿ ಲಸಿಕೆ ತೆಗೆದುಕೊಳ್ಳುವುದೇ ಇಲ್ಲ ಎಂಬ ಭಾವನೆ ಇದೆ. ಕೆಲವರು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳೋಣ ಎನ್ನುವವರು ಇದ್ದಾರೆ. ಇನ್ನು ಕೆಲವೊಬ್ಬರಿಗೆ ಅಲರ್ಜಿ ಸಹಿತ ಕೆಲವು ಕಾರಣದಿಂದಾಗಿ ಲಸಿಕೆ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಗ್ರಾಮೀಣ ಭಾಗದಲ್ಲಿ ಲಸಿಕೆ ಕೇಂದ್ರಗಳಿಗೆ ತೆರಳಲು ಸಾಧ್ಯವಿರದ ಕಡೆ ಹತ್ತಿರದ ಅಂಗನವಾಡಿ ಕೇಂದ್ರಗಳಲ್ಲಿ ಶಿಬಿರ ಆಯೋಜಿಸುತ್ತಿದ್ದೇವೆ.
-ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.