ಜಾನುವಾರುಗಳ ಮೇಲೆ ಹರಿದ ಕಾರು; 3 ಜಾನುವಾರು ಮೃತ್ಯು, ಓರ್ವನಿಗೆ ಗಾಯ
Team Udayavani, Jul 9, 2023, 10:44 AM IST
ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡವರು. ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ಜಾನುವಾರುಗಳಿಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ.
ಪರಿಣಾಮ ರಸ್ತೆ ಬದಿಯಲ್ಲಿ ಮಲಗಿದ್ದ ಮೂರು ಜಾನುವಾರುಗಳು ಸಾವನ್ನಪ್ಪಿವೆ, ಕಾರಲ್ಲಿದ್ದ ವೈದ್ಯ ವಿದ್ಯಾರ್ಥಿ ಕೈ ಮೂಳೆ ಮುರಿತಕ್ಕೊಳಗಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ