ಜನಾಕರ್ಷಣೆಯ ತಾಣ- ಅಂಚೆ ಚೀಟಿ, ಹಳೆಯ ನಾಣ್ಯ ಮತ್ತು ನೋಟುಗಳ ಪ್ರದರ್ಶನ


Team Udayavani, Oct 12, 2019, 5:25 AM IST

d-5

ಮಧುಕರ್‌ ಜಿಂಗನ್‌ ಅವರು ಉದ್ಘಾಟಿಸಿದರು.

ಮಹಾನಗರ: ನಗರದ ಎಂ.ಜಿ. ರಸ್ತೆಯ ದೀಪಾ ಕಂಫರ್ಟ್ಸ್ ಹೊಟೇಲ್‌ ಸಭಾಂಗಣದಲ್ಲಿ ಫಿಲಾಟೆಲಿಕ್‌ ಡೀಲರ್ ಅಸೋಸಿಯೇಶನ್‌, ಇಂಡಿಯಾ ವತಿಯಿಂದ ಏರ್ಪಡಿಸಿರುವ ಅಂಚೆ ಚೀಟಿಗಳು, ಹಳೆಯ ನಾಣ್ಯ ಮತ್ತು ನೋಟುಗಳ ಪ್ರದರ್ಶನವು ಜನರ ಆಕರ್ಷಣೆಯ ತಾಣವಾಗಿದೆ.

ಅಂಚೆ ಚೀಟಿ ಮತ್ತು ನಾಣ್ಯ ಸಂಗ್ರಹಿಸುವ ಹವ್ಯಾಸಿಗಳು ಮತ್ತು ಮಾರಾಟಗಾರರು ಸೇರಿಕೊಂಡು ಈ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಿದ್ದು, ದೇಶಾದ್ಯಂತದ 20 ಮಂದಿ ಡೀಲರ್‌ಗಳು ದೇಶ ವಿದೇಶಗಳ ಅಂಚೆ ಚೀಟಿಗಳು, ಹಳೆಯ ನಾಣ್ಯಗಳು ಮತ್ತು ನೋಟುಗಳನ್ನು ಇಲ್ಲಿ ಪ್ರದರ್ಶಿಸಿದ್ದಾರೆ.

ಪ್ರದರ್ಶನದ ಉದ್ಘಾಟನೆಯನ್ನು ಶುಕ್ರವಾರ ಫಿಲಾಟೆಲಿಕ್‌ ಡೀಲರ್ ಅಸೋಸಿಯೇಶನ್‌, ಇಂಡಿಯಾದ ಅಧ್ಯಕ್ಷ ಮಧುಕರ್‌ ಜಿಂಗನ್‌ ಅವರು ನೆರವೇರಿಸಿದರು. ಅಂಚೆ ಚೀಟಿಗಳು, ನಾಣ್ಯಗಳನ್ನು ಮತು ಕರೆನ್ಸಿಗಳನ್ನು ಸಂಗ್ರಹಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಢಿಸುವುದು ಹಾಗೂ ವಿಶೇಷವಾಗಿ ಯುವಕರನ್ನು ಈ ಹವ್ಯಾಸದಲಿಯಲ ತೊಡಗಿಸುವುದು ಈ ಪ್ರದರ್ಶನದ ಉದ್ದೇಶ ಎಂದವರು ಈ ಸಂದರ್ಭದಲ್ಲಿ ಹೇಳಿದರು.

ಚಿನ್ನ, ಬೆಳ್ಳಿ ಮತ್ತಿತರ ಲೋಹಗಳಿಂದ ಹಾಗೂ ರಬ್ಬರ್‌, ರೇಶ್ಮೆ, ಮೀನಿನ ಚರ್ಮ ಇತ್ಯಾದಿಗಳಿಂದ ತಯಾರಿಸಿದ ನಾಣ್ಯಗಳು, ವಿವಿಧ ಗಾತ್ರದ ಅಂಚೆ ಚೀಟಿಗಳು, ಪಾಂಡಿಚೇರಿಯಲ್ಲಿ ಫ್ರೆಂಚ್‌ ಆಡಳಿತದ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಇಂಡೊ- ಫ್ರೆಂಚ್‌ ನಾಣ್ಯಗಳು, ಬ್ರಿಟಿಷ್‌ ಇಂಡಿಯಾ ನೋಟುಗಳು, ಗಾಂಧಿ ಅಂಚೆ ಚೀಟಿಗಳನ್ನು ಇಲ್ಲಿ ಪ್ರದರ್ಶಿಸಲಾಗಿದೆ. ಈ ಪ್ರದರ್ಶನವು ಅ. 13 ರ ತನಕ ಇರುತ್ತದೆ ಎಂದು ಅಸೋಸಿಯೇಶನ್‌ನ ಉಪಾಧ್ಯಕ್ಷ ಎ.ವಿ.ಜಯಚಂದ್ರನ್‌ ತಿಳಿಸಿದರು.

ಮಂಗಳೂರಿನ ನಾಗರಾಜ ಶೇಟ್‌ ಅವರು ತನ್ನ ಬಳಿ 1835 ರಿಂದ 1943 ವರೆಗಿನ ಬೆಳ್ಳಿ ನಾಣ್ಯಗಳ ಸಂಗ್ರಹವಿದೆ. ನಾಣ್ಯಗಳ ಸಂಗ್ರಹದ ಜತೆಗೆ ಮಾರಾಟವನ್ನೂ ಮಾಡುತ್ತಿದ್ದೇನೆ ಎಂದು ಉದಯವಾಣಿ ಜತೆ ಮಾತನಾಡುತ್ತಾ ತಿಳಿಸಿದರು.

ಕೊಚ್ಚಿಯ ಜೊಸೆಫ್‌ ಡಿ’ಕೋತೊ ಮತ್ತು ಜೇಮ್ಸ್‌ ವಿ.ಪಿ. ಅವರು ಭಾರತ ಮಾತ್ರವಲ್ಲದೆ ಹಲವು ವಿದೇಶಗಳ ಅಂಚೆ ಚೀಟಿ, ನೋಟುಗಳು ಮತ್ತು ನಾಣ್ಯಗಳನ್ನು ಪ್ರದರ್ಶಿಸಿದ್ದಾರೆ. ಜಗತ್ತಿನ ಮೊದಲ ಪ್ಲಾಸ್ಟಿಕ್‌ ನಾಣ್ಯ, ವಿವಿಧ ರಾಜ ಮನೆತನದ ಮದುವೆಗಳ ಫೋಟೊಗಳು ಇವರ ಸಂಗ್ರಹದಲ್ಲಿದೆ.

ಬೆಂಗಳೂರಿನ ಸಂತೋಷ್‌ ಅವರ ಬಳಿ 107 ದೇಶಗಳ ನೋಟುಗಳ ಸಂಗ್ರಹವಿದೆ. ಚೆನ್ನೈನ ಅರವಮುತ್ತನ್‌ ಅವರ ಹವ್ಯಾಸ ವಿದೇಶಿ ನಾಣ್ಯ, ನೋಟು ಮತ್ತು ಅಂಚೆ ಚೀಟಿ ಸಂಗ್ರಹಕ್ಕೆ ಮೀಸಲಾಗಿದ್ದು, 250 ದೇಶಗಳ ನಾಣ್ಯಗಳು, 200 ದೇಶಗಳ ಕರೆನ್ಸಿ ನೋಟುಗಳು, 100 ದೇಶಗಳ ಗಾಂಧಿ ಕರೆನ್ಸಿಗಳ ಸಂಗ್ರಹವಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.