![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Panamburu; ಕಡಲನಗರಿಯ “ಆಕಾಶ’ದೆತ್ತರದಲ್ಲೊಂದು “ಹೊಟೇಲ್’!
ಪಣಂಬೂರು ಕಡಲ ಕಿನಾರೆಯಲ್ಲಿ "ಸ್ಕೈ ಡೈನಿಂಗ್'
Team Udayavani, Apr 21, 2024, 7:15 AM IST
![Panamburu; ಕಡಲನಗರಿಯ “ಆಕಾಶ’ದೆತ್ತರದಲ್ಲೊಂದು “ಹೊಟೇಲ್’!](https://www.udayavani.com/wp-content/uploads/2024/04/aaaa-1-620x365.jpg)
ಮಂಗಳೂರು: ಭೂಮಿಯಿಂದ 120 ಅಡಿ ಎತ್ತರದಲ್ಲಿ ಕುಳಿತು ಕಡಲ ನಗರಿ ಮಂಗಳೂರನ್ನು ನೋಡುತ್ತಲೇ ಅಹಾರ ಸವಿಯಲು ಇಲ್ಲಿದೆ ಅವಕಾಶ!
ಕಡಲಲ್ಲಿ ತೇಲುವ ಹೋಟೆಲ್ ಗಳನ್ನು ಕಂಡಿದ್ದೇವೆ. ಕೆಲವೆಡೆ ತೂಗುವ ಹೋಟೆಲುಗಳೂ ಇವೆ. ಆದರೆ ಮಂಗಳೂರಿನಲ್ಲಿ ಆಕಾಶದೆತ್ತರದಲ್ಲಿ ಕುಳಿತು ಆಹಾರ ಸೇವಿಸಲು ಹೋಟೆಲ್ ಸಿದ್ಧವಾಗುತ್ತಿದೆ.
ರಾಜ್ಯದಲ್ಲಿ ಬೀಚ್ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಣೀಯವಾಗಿಸಲು ಕರಾವಳಿ ತೀರದಲ್ಲೇ ಮೊದಲ ಬಾರಿಗೆ ಎಂಬಂತೆ “ಸ್ಕೈ ಡೈನಿಂಗ್’ ಪಣಂಬೂರು ಬೀಚ್ನಲ್ಲಿ ಆರಂಭವಾಗಲಿದೆ.
ಪಣಂಬೂರು ಬೀಚ್ನ ಅಭಿವೃದ್ಧಿಯ ಗುತ್ತಿಗೆ ಕಂಪೆನಿ “ಕದಳೀ ಬೀಚ್ ಟೂರಿಸಂ ಸಂಸ್ಥೆ’ ಈ ಯೋಜನೆಯನ್ನು ರೂಪಿಸಿದೆ. ಮೇ ಮೊದಲ ವಾರದಲ್ಲಿ ಸ್ಕೈ ಡೈನಿಂಗ್ ಕಾರ್ಯಾರಂಭಿಸುವ ಸಾಧ್ಯತೆ ಇದೆ. “ಸ್ಕೈ ಡೈನಿಂಗ್’ ವಿದೇಶದ ವಿವಿಧೆಡೆ ಪ್ರಸಿದ್ಧವಾಗಿದೆ. ಭಾರತದಲ್ಲೂ ಕೆಲವೆಡೆ ಈ ಪರಿಕಲ್ಪನೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಂಗಳೂರಿನಲ್ಲೂ ಆರಂಭವಾದರೆ ಕರಾವಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶೇಷ ಅನುಭವ ನೀಡಬಹುದು ಎಂದು ಅಂದಾಜಿಸಲಾಗಿದೆ.
120 ಅಡಿ ಎತ್ತರ
ಈಗಾಗಲೇ “ಸ್ಕೈ ಡೈನಿಂಗ್’ಗೆ ಸಂಬಂಧಿಸಿ ನಿರ್ಮಾಣ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದರ ಪ್ರಧಾನ ಅಂಗವಾಗಿರುವ ಕ್ರೇನ್ ರಚನೆ ಆರಂಭವಾಗಬೇಕಿದೆ. ಅಡುಗೆ ಮನೆಯೂ ನಿರ್ಮಾಣವಾಗಲಿದೆ. ಈ ಕ್ರೇನ್ 120 ಅಡಿಗಳಷ್ಟು ಎತ್ತರಕ್ಕೆ ಪ್ರವಾಸಿಗರನ್ನು ಕರೆದೊಯ್ಯಲಿದೆ. ಒಂದೆಡೆ ಸಮುದ್ರ- ಇನ್ನೊಂದೆಡೆ ಮಂಗಳೂರು ನಗರದ ವಿಹಂಗಮ ದೃಶ್ಯಗಳನ್ನು ಸವಿಯುತ್ತಾ ಆಹಾರ ಸವಿಯಲು ಅವಕಾಶವಿರಲಿದೆ. ಇಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿಸಲಾಗುತ್ತಿದೆ. ಸ್ಕೈ ಡೈನಿಂಗ್ ಜತೆಗೆ ಸಾಹಸ ಕ್ರೀಡೆ, ವಾಟರ್ ಸ್ಪೋರ್ಟ್ಸ್, ರೆಸ್ಟೋರೆಂಟ್ ಗಳಿಗೆ ಜಿಲ್ಲಾಡಳಿತ – ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮೀಶ್ ಭಂಡಾರಿ. ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪಣಂಬೂರು ಬೀಚ್ನಲ್ಲಿ ವಿವಿಧ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. “ಸ್ಕೈ ಡೈನಿಂಗ್’ ಕೂಡ ಹೊಸ ಪರಿಕಲ್ಪನೆ ಎನ್ನುತ್ತಾರೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಮಾಣಿಕ್ಯ.
16 ಮಂದಿಗೆ ಅವಕಾಶ
-ಒಮ್ಮೆ 16 ಮಂದಿಗೆ ಸಂಗೀತದ ಜತೆಗೆ ತಿನಿಸು ಸವಿಯಲು ಅವಕಾಶ
-ಪ್ರತಿಯೊಬ್ಬರಿಗೂ ಸೇಫ್ಟಿ ಬೆಲ್ಟ್ ಅಳವಡಿಕೆ
-ಪರಿಚಾರಕರಿಗೆ, ತಾಂತ್ರಿಕ ಸಿಬಂದಿಗೆ ಪ್ರತ್ಯೇಕ ಕ್ಯಾಬಿನ್
-ಮೆನು ಆಧರಿಸಿ ಮೊದಲೇ ಆಹಾರ ಕಾದಿರಿಸಬಹುದು
-ಶೀಘ್ರವೇ ದರ ನಿಗದಿ
ಏನಿದು “ಸ್ಕೈ ಡೈನಿಂಗ್’?
ನೆಲಕ್ಕಿಂತ ಹಲವು ಅಡಿಗಳಷ್ಟು ಮೇಲ್ಭಾಗದಲ್ಲಿ ಕುಳಿತು ಊಟ ಸವಿಯುವುದು. ಇದೊಂದು ಸಾಹಸವೂ ಹೌದು. ಗಾಜಿನ ಮಾದರಿಯ ಪಾರದರ್ಶಕ ವಸ್ತು ಮತ್ತು ಕಬ್ಬಿಣದಿಂದ ರಚಿಸಲಾದ ಕ್ಯಾಬಿನ್ ಅನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಲಾಗುತ್ತದೆ. ಇದರಲ್ಲಿ ಟೇಬಲ್, ಚೇರ್ ಸಹಿತ ಎಲ್ಲ ವ್ಯವಸ್ಥೆ ಇರಲಿದೆ. ಸುತ್ತಲಿನ ವಿಹಂಗಮ ದೃಶ್ಯವನ್ನು ನೋಡುತ್ತ ಊಟ/ತಿಂಡಿ ಸವಿಯಬಹುದಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.