ಎರಡು ವರ್ಷಗಳು ಕಳೆದರೂ ಪೂರ್ಣಗೊಳ್ಳದ ಅಳಕೆ ಮಾರುಕಟ್ಟೆ

ಅಗತ್ಯ ಸೌಕರ್ಯವಿಲ್ಲ; ಇನ್ನಷ್ಟು ಕಾಮಗಾರಿಗೆ ಟೆಂಡರ್‌

Team Udayavani, Mar 15, 2020, 5:15 AM IST

Alake-market

ಮಹಾನಗರ: ಕುದ್ರೋಳಿಯ ಅಳಕೆಯಲ್ಲಿ ಎರಡು ವರ್ಷಗಳಿಂದ ನಿರ್ಮಾಣಗೊಳ್ಳುತ್ತಿರುವ ಮಾರುಕಟ್ಟೆಯ ಕಟ್ಟಡ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ! ಒಂದು ಹಂತದ ಕಾಮಗಾರಿ ಪೂರ್ಣಗೊಂಡಿದ್ದ ಕಟ್ಟಡ ಹಲವು ತಿಂಗಳುಗಳ ಕಾಲ ಪಾಳುಬಿದ್ದ ಸ್ಥಿತಿಯಲ್ಲಿದೆ. ಹೆಸರಿಗೆ ಮಾತ್ರ ಎಂಬಂತೆ ಕಟ್ಟಡ ನಿರ್ಮಾಣವಾಗಿತ್ತೇ ಹೊರತು ಮಾರುಕಟ್ಟೆಗೆ ಅಗತ್ಯವಾದ ನೀರು ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ಹಾಗಾಗಿ ಈ ಮಾರುಕಟ್ಟೆ ವ್ಯಾಪಾರಿಗಳು, ಸಾರ್ವಜನಿಕರಿಗೆ ತೆರೆದುಕೊಂಡಿಲ್ಲ.

1 ಕೋ.ರೂ. ವೆಚ್ಚದ ಕಾಮಗಾರಿ
ಇದು ಒಟ್ಟು ಅಂದಾಜು 1 ಕೋ.ರೂ. ವೆಚ್ಚದ ಕಾಮಗಾರಿ. ಮೊದಲು 87 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಟೆಂಡರ್‌ ಕರೆಯಲಾಗಿತ್ತು. 84 ಲ.ರೂ.ಗಳಿಗೆ ಬಿಡ್‌ ಸಲ್ಲಿಕೆಯಾಗಿ 2016-17ರಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಇದೀಗ ಮತ್ತೆ ನೀರಿನ ಟ್ಯಾಂಕ್‌ ಮತ್ತಿತರ ಸೌಕರ್ಯಗಳಿಗೆ ಮತ್ತೆ 30 ಲ.ರೂ. ವೆಚ್ಚದ ಕಾಮ ಗಾರಿಗೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗುತ್ತಿದೆ.

30 ಮಳಿಗೆಗಳು
ಈ ಮಾರುಕಟ್ಟೆಯಲ್ಲಿ ಮಾಂಸ, ತರಕಾರಿ ಸಹಿತ ಸುಮಾರು 30ರಷ್ಟು ಮಳಿಗೆಗಳಿಗೆ ಅವ ಕಾಶ ಒದಗಿಸಲಾಗುತ್ತಿದೆ. 4 ಜನರಲ್‌ ಸ್ಟಾಲ್‌ಗಳು, 12 ಹಸಿಮೀನು ಮಾರಾಟ ಮಳಿಗೆಗಳು, 2 ಒಣಮೀನು ಮಾರಾಟ ಮಳಿಗೆಗಳು, 4 ಹಣ್ಣು ಹಂಪಲು, ಒಂದು ಚಿಕನ್‌, ಮಟನ್‌ ಸ್ಟಾಲ್‌ಗಳು ಇದರಲ್ಲಿ ಒಳಗೊಂಡಿವೆ. ಮಾರು ಕಟ್ಟೆಯ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದೆ ಗುತ್ತಿಗೆದಾರರಿಂದ ಲೋಪವಾಗಿದೆ. ಇದೀಗ ಇದೇ ಮಾರುಕಟ್ಟೆಗೆ 30 ಲ.ರೂ. ಮೊತ್ತದ ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗುತ್ತಿದೆ. ಈ ಹಿಂದಿನ ಗುತ್ತಿಗೆದಾರರಿಗೆ ಕಾಮಗಾರಿ ನೀಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೆಲವು ಮಂದಿ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆದರೆ ಇದನ್ನು ಪಾಲಿಕೆ ಅಧಿಕಾರಿಗಳು ನಿರಾಕರಿಸಿದ್ದಾರೆ. 84 ಲ.ರೂ. ವೆಚ್ಚದ ಕಾಮಗಾರಿ ನಡೆದಿದೆ. ಮರಳು ಕೊರತೆ, ಚುನಾವಣೆ ಮೊದಲಾದ ಕಾರಣಗಳಿಂದ ವಿಳಂಬವಾಗಿದೆ. ಆದರೆ ಎಲ್ಲ ಪ್ರಕ್ರಿಯೆಗಳ ಪಾರದರ್ಶಕವಾಗಿ ನಡೆದಿವೆ. ಈಗ ನೀರಿನ ಟ್ಯಾಂಕ್‌, ಇತರ ಕೆಲವು ಅಗತ್ಯ ಕಾಮಗಾರಿ ಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗು ತ್ತಿದೆ. ಯಾರು ಕಾಮಗಾರಿ ವಹಿಸಿಕೊಳ್ಳುತ್ತಾರೆ ಎಂಬುದು ಅಂತಿಮ ವಾಗಿಲ್ಲ. ಯಾವುದೇ ಲೋಪ ನಡೆದಿಲ್ಲ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.

2 ವರ್ಷಗಳಿಂದ ಕಾಯುತ್ತಿದ್ದೇವೆ
ಯಾರ ಕಡೆಯಿಂದ ವಿಳಂಬವಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಆದರೆ ಎರಡು ವರ್ಷಗಳಿಂದ ಮಾರ್ಕೆಟ್‌ ಕಟ್ಟಡ ನಿರ್ಮಾಣ ವಾಗುತ್ತದೆ ಎಂದು ನಿರೀಕ್ಷಿಸುತ್ತಿದ್ದೇವೆ. ಹಳೆಯ ಕಟ್ಟಡ ಸಂಪೂರ್ಣ ಶಿಥಿಲವಾಗಿದೆ. ಈ ಜಾಗ ಕೂಡ ಕೊಳಚೆಯಂತಾಗುತ್ತಿದೆ ಎಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ಕುದ್ರೋಳಿಯಲ್ಲಿ ಸುವ್ಯವಸ್ಥಿತವಾದ ಮಾರುಕಟ್ಟೆಯ ಬೇಡಿಕೆ ಮುಂದಿಟ್ಟಿದ್ದ ಸ್ಥಳೀಯ ಮತ್ತು ಸುತ್ತಲಿನ ಸಾರ್ವಜನಿಕರು ಕೂಡ ಮಾರ್ಕೆಟ್‌ ಕಾಮಗಾರಿ ವಿಳಂಬದ ಬಗ್ಗೆ ಅಸಮಾಧಾನ ಹೊರಗೆಡಹಿದ್ದಾರೆ. ಮಾರುಕಟ್ಟೆಗೆ ಅಗತ್ಯ ಸೌಕರ್ಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ತಿಂಗಳಾಂತ್ಯಕ್ಕೆ ಪೂರ್ಣ
ಮಾರುಕಟ್ಟೆಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳು ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿವೆ. ಅನಂತರ ಮಳಿಗೆಗಳ ಏಲಂ ನಡೆಯಲಿದೆ. ಪೂರಕ ಕಾಮಗಾರಿಗಳಿಗಾಗಿ ಟೆಂಡರ್‌ ಕರೆಯಲಾಗಿದೆಯೇ ಹೊರತು ಒಂದೇ ಕಾಮಗಾರಿಗೆ ಅಲ್ಲ. ಟೆಂಡರ್‌ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ಕಾಮಗಾರಿ ಸ್ಥಳಕ್ಕೆ ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾನೆ. ಕಾಮಗಾರಿ ಸಂಪೂರ್ಣಗೊಳ್ಳುವವರೆಗೂ ನಿಗಾ ವಹಿಸಲಾಗುತ್ತದೆ.
 - ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ, ಆಯುಕ್ತರು, ಮಹಾನಗರ ಪಾಲಿಕೆ

-  ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.