ಪರಿಹಾರ ಕೇಂದ್ರದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Team Udayavani, Aug 26, 2018, 11:20 AM IST
ಸುಳ್ಯ: ಪಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿ ಅರಂತೋಡು ತೆಕ್ಕಿಲ ಸಭಾಭವನದ ಪರಿಹಾರ ಕೇಂದ್ರ
ದಲ್ಲಿದ್ದ ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿ ನಿವಾಸಿ ಅಂಗಾರ (60) ಶುಕ್ರವಾರ ತಡರಾತ್ರಿ ಹೃದಯಾ
ಘಾತದಿಂದ ಮೃತಪಟ್ಟಿದ್ದಾರೆ.
ಆ. 24ರಂದು ರಾತ್ರಿ ಊಟ ಮಾಡಿ ಮಲಗಿದ್ದ ಸುಂದರ ಅವರಿಗೆ 1 ಗಂಟೆಯ ಹೊತ್ತಿಗೆ ಎದೆನೋವು ಕಾಣಿಸಿಕೊಂಡಿತ್ತು. ತತ್ಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬಡ ಕುಟುಂಬದ ನಿವಾಸಿ ಆಗಿರುವ ಸುಂದರ ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರು. ಆ. 16ರಂದು ಮೊಣ್ಣಂಗೇರಿ ಬಳಿ ಪಾಕೃತಿಕ ಅವಘಡ ಸಂದರ್ಭ ಮಡಿಕೇರಿಯ ಪರಿಹಾರ ಕೇಂದ್ರಕ್ಕೆ ತೆರಳಿದ್ದರು. ಅಲ್ಲಿನ ವಾತಾವರಣ ಒಗ್ಗದ ಕಾರಣ ಮರುದಿನ ಭಾಗಮಂಡಲ-ಕರಿಕೆ-ಸುಳ್ಯ ಮೂಲಕ ಅರಂತೋಡು ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ಹೂಡಿದ್ದರು. ಅವರ ಮನೆ ಮಂದಿಯು ಕೇಂದ್ರದಲ್ಲಿ ಇದ್ದಾರೆ.
ಅಂಗಾರ ಅವರು ಪ್ರಥಮ ದಿನ ಮಡಿಕೇರಿಯಲ್ಲಿನ ಸಂತ್ರಸ್ತರ ಕೇಂದ್ರದಲ್ಲಿದ್ದ ಕಾರಣ, ಅರಂತೋಡಿನಲ್ಲಿ ಅವರ
ನೋಂದಣಿ ಮಾಡಿರಲಿಲ್ಲ ಎಂಬ ಮಾಹಿತಿಯು ಇದೆ. ಇದರಿಂದ ಅವರ ಹೆಸರು ಯಾವ ಕೇಂದ್ರದಲ್ಲಿ ನಮೂದು ಆಗಿದೆ ಎಂಬ ಬಗ್ಗೆ ಕುಟುಂಬದವರಿಗೆ ಗೊಂದಲ ಇದೆ. ಅಂಗಾರ ಅವರದ್ದು ಅರ್ಹ ಸಂತ್ರಸ್ತ ಕುಟುಂಬ. ಇಲ್ಲಿ ನೋಂದಣಿ ಆಗಿಲ್ಲ ಎಂಬ ಕಾರಣವೊಡ್ಡಿ ಪರಿಹಾರ ನಿರಾಕರಿಸಬಾರದು ಎಂಬ ಆಗ್ರಹ ಕೇಳಿ ಬಂದಿದೆ.
ವಿರಾಜಪೇಟೆ ಶಾಸಕರ ಭೇಟಿ
ಸಂತ್ರಸ್ತ ಅಂಗಾರ ಅವರು ಮೃತಪಟ್ಟ ಸುದ್ದಿ ತಿಳಿದು ವಿರಾಜಪೇಟೆ ಶಾಸಕ ಕೆ.ಜೆ. ಬೋಪಯ್ಯ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಯಾವುದಾದರೂ ಒಂದು ಕೇಂದ್ರದಲ್ಲಿ ನೋಂದಣಿ ಆಗಿದ್ದರೆ ಸಾಕು ಎಂದು ಅವರು ಕುಟುಂಬಸ್ಥರಿಗೆ ತಿಳಿಸಿದ್ದು, ಈ ಬಗ್ಗೆ ತಾನು ಗಮನ ಹರಿಸುವ ಭರವಸೆ ನೀಡಿದ್ದಾರೆ. ಕೊಡಗು ಜಿ.ಪಂ. ಮುಖ್ಯಕಾರ್ಯನಿರ್ವ ಹಣಾಧಿಕಾರಿ ಪ್ರಶಾಂತ್, ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ, ತಹಶೀಲ್ದಾರ್ ಕುಂಞಮ್ಮ ಆಸ್ಪತ್ರೆಗೆ ಭೇಟಿ ನೀಡಿದರು.
ಸುಳ್ಯದಲ್ಲಿ ಅಂತ್ಯಸಂಸ್ಕಾರ
ಮೊಣ್ಣಂಗೇರಿ ಪ್ರದೇಶ ಸಹಜ ಸ್ಥಿತಿಗೆ ಬಾರದಿರುವ ಕಾರಣ ಸುಳ್ಯ ಕುಟುಂಬದ ಸದಸ್ಯರ ನಿರ್ಧಾರದಂತೆ ನಗರದ ಕೇರ್ಪಳದ ರುದ್ರಭೂಮಿಯಲ್ಲಿ ಅಂಗಾರ ಅಂತ್ಯಸಂಸ್ಕಾರ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…