ಕಾಲು ಸ್ವಾಧೀನ ಕಳೆದುಕೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು


Team Udayavani, Feb 8, 2018, 11:06 AM IST

8-Feb-7.jpg

ಸ್ಟೇಟ್‌ಬ್ಯಾಂಕ್‌ : ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಾಲು ಸ್ವಾಧೀನ ಕಳೆದುಕೊಂಡು ರಸ್ತೆಯಲ್ಲಿ ನರಳುತ್ತಿದ್ದ ವ್ಯಕ್ತಿಯನ್ನು ಆಸ್ಪತ್ತೆಗೆ ಸೇರಿಸುವ ಮೂಲಕ ಮಂಗಳೂರು ಯುವ ಬ್ರಿಗೇಡ್‌ ಮಾನವೀಯ ಕಾಳಜಿ ಪ್ರದರ್ಶಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಸಂಕಲ್ಪದಂತೆ ಪ್ರತೀ ರವಿವಾರ ಈ ತಂಡ ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಅದರಂತೆ ಕಳೆದ ರವಿವಾರ ಸ್ಟೇಟ್‌ ಬ್ಯಾಂಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ, ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ನಲ್ಲಿ ವ್ಯಕ್ತಿಯೋರ್ವ ನಡೆಯಲಾರದೆ ನರಳುತ್ತಿರುವುದನ್ನು ತಂಡ ಗಮನಿಸಿತು.

ಆ ವ್ಯಕ್ತಿಗೆ ಏಳಲು ಸಾಧ್ಯವಾಗದ್ದರಿಂದ ಮಲಮೂತ್ರವನ್ನೂ ಅಲ್ಲೇ ಪೂರೈಸಿಕೊಳ್ಳುತ್ತಿದ್ದರು. ಇದನ್ನು ಕಂಡ ತಂಡವು, ಅವರನ್ನು ಮಾತನಾಡಿಸಿದಾಗ ಮೈಸೂರಿನ ಶ್ರೀನಿವಾಸ್‌ ಎಂಬುದು ತಿಳಿಯಿತು. ಯಾವುದೋ ಸಮಸ್ಯೆಯಿಂದ ಮನೆ ಬಿಟ್ಟು ಬಂದು ಮಂಗಳೂರಿನಲ್ಲಿದ್ದರು. ಇತ್ತೀಚೆಗೆ ಸರ್ಕಲ್‌ ಬಳಿ ಮಲಗಿದ್ದಾಗ ಲಾರಿಯೊಂದು ಅವರ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಸ್ವಾಧೀನ ಕಳೆದುಕೊಂಡು ಸ್ನಾನ-ಊಟವಿಲ್ಲದೆ ನರಳುತ್ತಿದ್ದರು.

ಬಳಿಕ ತಂಡದ ತಿಲಕ್‌ ಶಿಶಿಲ, ಮನು ಭಕ್ತ, ದಯಾ ಆಕಾಶ್‌, ವಿಕ್ರಮ್‌ ಮಂಗಳೂರು, ಸುಜಿತ್‌ ಕೋಟೆಕಾರ್‌ ಮತ್ತಿತರರು, ಆತನಿಗೆ ಕ್ಷೌರ ಮಾಡಿಸಿ, ಸ್ನಾನ ಮಾಡಿಸಿ, ಚಿಕಿತ್ಸೆಗಾಗಿ ಸರಕಾರಿ ವೆನ್‌ ಲಾಕ್‌ ಆಸ್ಪತ್ರೆಗೆ ದಾಖಲಿಸಿದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. 

ಸ್ವಚ್ಛತೆಗೆ ಪ್ರಶಂಸೆ
ನಿತ್ಯವೂ ರಸ್ತೆಯಲ್ಲಿ ಬಿದ್ದಿರುವ ಮಣ್ಣು, ಮರಳನ್ನು ತೆಗೆದು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ. ಕಳೆದ ವಾರ ಮಹಾನಗರ ಪಾಲಿಕೆ ಮುಂಭಾಗದ ಸರ್ಕಲ್‌ ಬಳಿ ರಸ್ತೆಯಲ್ಲೇ ಮರಳು ಬಿದ್ದಿತ್ತು. ಇದರಿಂದ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗಿ ಬೀಳು ಅಪಾಯದ ಬಗೆ ಸ್ಥಳೀಯರೊಬ್ಬರು ಯುವ ಬ್ರಿಗೇಡ್‌ಗೆ ತಿಳಿಸಿದ್ದರು. ತತ್‌ಕ್ಷಣ ಕಾರ್ಯ ಪ್ರವೃತ್ತವಾದ ತಂಡ, ಮರಳನ್ನು ತೆಗೆದು ಶುಚಿಗೊಳಿಸಿತು. ಸರ್ಕಿಟ್  ಹೌಸ್‌ ಬಳಿಯೂ ಎರಡು ದಿನಗಳ ಹಿಂದೆ ಲಾರಿಯಿಂದ ಲೀಕ್‌ ಆಗಿ ಬಿದ್ದ ಆಯಿಲ್‌ ಮೇಲೆ ಮಣ್ಣು ಮತ್ತು ಮರಳನ್ನು ರಾಶಿ ಹಾಕಿ, ಪೊಲೀಸರು ಬ್ಯಾರಿಕೇಡ್‌ ಇರಿಸಿದ್ದರು. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುವುದನ್ನು ಗಮನಿಸಿದ್ದರು. ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದರೂ ಪ್ರಯೋಜನವಾಗಿರಲಿಲ್ಲ. ಹಾಗಾಗಿ ತಂಡವೇ ಶುಚಿಗೊಳಿಸಿತು.

ಆಶ್ರಯ ಕಲ್ಪಿಸಲು ವ್ಯವಸ್ಥೆ 
ಶ್ರೀನಿವಾಸ ಅವರು ಪೂರ್ಣವಾಗಿ ಗುಣಮುಖನಾದ ಬಳಿಕ ನಗರದ ಯಾವುದಾದರೂ ಆಶ್ರಮದಲ್ಲಿ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ತಂಡ ಯೋಚಿಸುತ್ತಿದೆ. ಉತ್ತಮ ಕೆಲಸ ಮಾಡಿದ ನಂತರ ಸಿಗುವ ಆತ್ಮ ಸಂತೃಪ್ತಿ ಇನ್ನಾವುದರಿಂದಲೂ ಸಿಗದು. ಆತನಿಗೆ ವಸತಿ ಕಲ್ಪಿಸಲೂ ಚಿಂತಿಸಲಾಗಿದೆ ಎನ್ನುತ್ತಾರೆ ತಂಡದ ತಿಲಕ್‌ ಶಿಶಿಲ.

ಸರ್ಕಲ್‌ಗೆ ಹೊಸರೂಪ
ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ನಲ್ಲೇ ಶ್ರೀನಿವಾಸ ಮಲಮೂತ್ರವನ್ನೂ ಮಾಡಿದ್ದರಿಂದ ಪರಿಸರ ಕಲುಷಿತವಾಗಿತ್ತು. ತಂಡವು ಸರ್ಕಲ್‌ ನ್ನು ಸ್ವಚ್ಛಗೊಳಿಸಿ, ಬಣ್ಣ ಬಳಿದು ಹೊಸ ರೂಪ ನೀಡಿದೆ. 

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.