“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಬಂದೂಕು ತರಬೇತಿಗೆ ತೊಡಕು ; ಕರಾವಳಿಯಲ್ಲಿ "ಶೂಟಿಂಗ್‌ ಅಕಾಡೆಮಿ'ಗೆ ಬೇಡಿಕೆ

Team Udayavani, Oct 27, 2021, 6:40 AM IST

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಸಾಂದರ್ಭಿಕ ಚಿತ್ರ

ಮಂಗಳೂರು: ಬಂದೂಕು ತರಬೇತಿಗಾಗಿ “ಫೈರಿಂಗ್‌ ರೇಂಜ್‌’ (ಸುರಕ್ಷಿತ ಸ್ಥಳ) ಇಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಗೆ, ಬಂದೂಕು ಪರವಾನಿಗೆ ಪಡೆಯುವ ನಾಗರಿಕರಿಗೆ ತೊಂದರೆಯಾಗಿದೆ.

ಕಾಡು ಪ್ರಾಣಿಗಳಿಂದ ಕೃಷಿ ರಕ್ಷಣೆ ಮತ್ತು ಆತ್ಮರಕ್ಷಣೆಗಾಗಿ ಬಂದೂಕು ಪರವಾನಿಗೆ ನೀಡಲಾಗುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿರುವುದರಿಂದ ಬಂದೂಕು ಪರವಾನಿಗೆ ಹೊಂದಿರುವವರು, ಪರವಾನಿಗೆ ಬಯಸಿರುವವರ ಸಂಖ್ಯೆಯೂ ಹೆಚ್ಚು. ವಿವಿಧ ಕಾರಣಗಳಿಂದಾಗಿ ಆತ್ಮರಕ್ಷಣೆಗಾಗಿ ಬಂದೂಕು ಪರವಾನಿಗೆಗೂ ಬೇಡಿಕೆ ಇದೆ. ಈಗಾಗಲೇ ಪರವಾನಿಗೆ ಹೊಂದಿರುವವರಿಂದಲೂ ತರಬೇತಿಗೆ ಬೇಡಿಕೆ ಇದೆ. ಅಲ್ಲದೆ ಕಳೆದ ಒಂದು ವರ್ಷದಿಂದ ಪರವಾನಿಗೆಗೆ ತರಬೇತಿ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ. ತರಬೇತಿ ನೀಡುವ ಜವಾಬ್ದಾರಿ ಪೊಲೀಸರ ಮೇಲಿದ್ದು ಅವರು ಸಮರ್ಪಕ “ಫೈರಿಂಗ್‌ ರೇಂಜ್‌’ ಇಲ್ಲದೆ ಪರದಾಡುವಂತಾಗಿದೆ.

ಈ ಹಿಂದೆ ನಗರದ ಮೂಡುಶೆಡ್ಡೆ ಬಳಿ “ಫೈರಿಂಗ್‌ ರೇಂಜ್‌’ ಇತ್ತು. ಈಗ ಅಲ್ಲಿ ಜನವಸತಿ ಹೆಚ್ಚಿರುವುದರಿಂದ ಅದರ ಬಳಕೆ ಅಸಾಧ್ಯವಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಕಾರ್ಕಳದಲ್ಲಿ ತರಬೇತಿ ನೀಡಲಾಗುತ್ತಿದೆ. ಆದರೆ ಪೂರ್ಣ ಸುರಕ್ಷಿತವಾದ “ಫೈರಿಂಗ್‌ ರೇಂಜ್‌’ ಕರಾವಳಿ ಭಾಗದಲ್ಲಿಲ್ಲ.

ಅಕಾಡೆಮಿಗೆ ಬೇಡಿಕೆ
ತರಬೇತಿ ನಿರಂತರವಾಗಿ ಬೇಕಿರುವುದರಿಂದ ಶೂಟಿಂಗ್‌ ಅಕಾಡೆಮಿ ಇದ್ದರೆ ಸೂಕ್ತ. ಗೋವಾ, ಬೆಂಗಳೂರು, ಚೆನ್ನೈ ಮಾದರಿಯಲ್ಲಿ ಕರಾವಳಿಯಲ್ಲಿಯೂ ಶೂಟಿಂಗ್‌ ಅಕಾಡೆಮಿ ಆರಂಭಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ. ಅಕಾಡೆಮಿ ಆರಂಭವಾದರೆ ಅಲ್ಲಿ ಬಂದೂಕು ತರಬೇತಿಯ ಜತೆಗೆ ಶೂಟಿಂಗ್‌ ಕ್ರೀಡಾಸಕ್ತರ ತರಬೇತಿಗೂ ಸಹಾಯಕವಾಗಲಿದೆ ಎನ್ನುತ್ತಾರೆ ಹಿರಿಯ ಪೊಲೀಸ್‌ ಅಧಿಕಾರಿಗಳು.

ದುರ್ಬಳಕೆ, ಅನಾಹುತ ತಡೆಗೆ ಪೂರಕ
ಹಲವು ವರ್ಷಗಳಿಂದಲೂ ಬಂದೂಕು ಪರವಾನಿಗೆ ಹೊಂದಿರುವ ಸಾವಿರಾರು ಮಂದಿ ಜಿಲ್ಲೆಯಲ್ಲಿ ಇದ್ದಾರೆ. ಕುಟುಂಬದ ಹಿರಿಯರಿಂದ ವರ್ಗಾವಣೆಯಾಗಿರುವ ಬಂದೂಕು ಪರವಾನಿಗೆಗಳೂ ಹೆಚ್ಚಿನ ಸಂಖೆಯಲ್ಲಿವೆ. ಆದರೆ ಅನೇಕ ಮಂದಿಗೆ ಸೂಕ್ತ ತರಬೇತಿ ಇಲ್ಲ. ಇದೇ ಕಾರಣದಿಂದ ಕೆಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಅಕಾಡೆಮಿ ಇದ್ದರೆ ವ್ಯವಸ್ಥಿತ, ನಿರಂತರ ತರಬೇತಿ, ನಿಗಾ ಸಾಧ್ಯವಾಗಲಿದೆ ಎನ್ನುತ್ತಾರೆ ಬಂದೂಕು ತರಬೇತಿದಾರರು.

ಇದನ್ನೂ ಓದಿ:ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

14,000ಕ್ಕೂ ಅಧಿಕ ಪರವಾನಿಗೆದಾರರು!
ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 1,500ಕ್ಕೂ ಅಧಿಕ, ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 10,000ಕ್ಕೂ ಅಧಿಕ ಹಾಗೂ ಉಡುಪಿ ಜಿಲ್ಲೆಯಲ್ಲಿ 3,000ಕ್ಕೂ ಅಧಿಕ ಮಂದಿ ಬಂದೂಕು ಪರವಾನಿಗೆ ಹೊಂದಿದ್ದಾರೆ.ಪ್ರಸ್ತುತ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 300ಕ್ಕೂ ಅಧಿಕ ಮಂದಿ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದು ವಿಲೇವಾರಿಗೆ ಬಾಕಿ ಇದೆ.

ಸದ್ಯ ದ.ಕ. ಜಿಲ್ಲೆಯಲ್ಲಿ ಫೈರಿಂಗ್‌ ರೇಂಜ್‌ ಇಲ್ಲ. ಅಗತ್ಯ ಸಂದರ್ಭದಲ್ಲಿ ಕಾರ್ಕಳದ ಫೈರಿಂಗ್‌ ರೇಂಜ್‌ ಬಳಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸೂಕ್ತ ಸ್ಥಳಕ್ಕಾಗಿ ಗಮನ ಹರಿಸಲಾಗುತ್ತಿದೆ.
– ಹೃಷಿಕೇಶ್‌ ಸೋನಾವಣೆ,
ಎಸ್‌ಪಿ, ದ.ಕ. ಜಿಲ್ಲೆ

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.