ಅಲ್ಲಿಪಾದೆ: ಸೂರಿಲ್ಲದೆ ಬಡ ಕುಟುಂಬ ಕಂಗಾಲು


Team Udayavani, Jun 13, 2018, 2:30 AM IST

mane-12-6.jpg

ಪುಂಜಾಲಕಟ್ಟೆ: ಅದೊಂದು ಗುಡಿಸಲು. ಅದರಲ್ಲಿದೆ ಗಂಡ, ಹೆಂಡತಿ, ನಾಲ್ಕು ಮಕ್ಕಳಿರುವ ಕುಟುಂಬ. ಆಧಾರ್‌ ಕಾರ್ಡ್‌ ಹೊರತು ಬೇರೆ ಯಾವ ಆಧಾರವೂ ಅವರಲ್ಲಿ ಇಲ್ಲ. ಕುಟುಂಬಕ್ಕೆ ಮನೆ ಇಲ್ಲ, ರೇಷನ್‌ ಕಾರ್ಡ್‌ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ, ರಸ್ತೆ ಇಲ್ಲ. ಹೀಗೆ ಇಲ್ಲಗಳ ಪಟ್ಟಿಯೇ ಇದೆ. ಸರಕಾರಗಳು ಜನರ ಕಲ್ಯಾಣಕ್ಕೆ ಅದೆಷ್ಟೋ ಯೋಜನೆಗಳನ್ನು ರೂಪಿಸಿ ಪ್ರಚಾರ ಪಡೆಯುತ್ತದೆಯಾದರೂ ಅರ್ಹ ಫಲಾನುಭವಿಗಳಿಗೆ ಅವೆಲ್ಲ ಆಕಾಶ ಬುಟ್ಟಿ ಎಂಬುದಕ್ಕೆ ಇದೇ ನಿದರ್ಶನ.

ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾ.ಪಂ. ವ್ಯಾಪ್ತಿಯ ಅಲ್ಲಿಪಾದೆ, ಉಜಿರಾಡಿ ಕ್ವಾಟ್ರಸ್‌ ನಲ್ಲಿ ಬಡ ಕುಟುಂಬ ತಾತ್ಕಾಲಿಕವಾಗಿ ನಿರ್ಮಿಸಿದ ಗುಡಿಸಲಿನಲ್ಲಿ ವಾಸವಾಗಿದ್ದು, ಗಾಳಿ – ಮಳೆಗೆ ಅವರಿಗೆ ಇಲ್ಲಿ ವಾಸ ನರಕ ಸದೃಶವಾಗಿದೆ. ಸಂಜೀವ-ಸುನಂದಾ ದಂಪತಿ ಕಳೆದ 7 ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದಾರೆ. ಗುಡ್ಡದ ಮೇಲ್ಭಾಗದಲ್ಲಿ ಸರಕಾರಿ ಸ್ಥಳದಲ್ಲಿ ಚಿಕ್ಕ ಒಂದು ಕೋಣೆಯ ಗುಡಿಸಲು ನಿರ್ಮಿಸಿ ಮೇಲ್ಭಾಗಕ್ಕೆ ಟರ್ಪಾಲು ಹಾಸಿದ್ದಾರೆ. ಆದರೆ ಈಗ ಟಾರ್ಪಾಲು ಹರಿದಿದ್ದು, ಮಳೆಗೆ ಸೋರುತ್ತಿದೆ. ರಾತ್ರಿ ನಿದ್ದೆ ಇಲ್ಲದೆ ಕಳೆಯುವಂತಹ ಪರಿಸ್ಥಿತಿ ಈ ಕುಟುಂಬದವರದ್ದಾಗಿದೆ. ಅವರ ಗುಡಿಸಲು ಗುಡ್ಡದ ಮೇಲ್ಭಾಗದಲ್ಲಿದ್ದು, ಇದಕ್ಕೆ ಹೋಗಲು ದಾರಿಯೇ ಇಲ್ಲ. ಮಣ್ಣನ್ನು ಕೆತ್ತಿ ಮೆಟ್ಟಿಲು ತರಹ ಮಾಡಿದ್ದರೂ ಮಳೆ ನೀರಿಗೆ ಮಣ್ಣು ಕರಗಿ ಹೋಗಿದೆ. ಮಕ್ಕಳು ಈ ದಾರಿಯಲ್ಲೇ ಗುಡ್ಡ ಹತ್ತ ಬೇಕಾಗಿದೆ. ರಾತ್ರಿ ಹೊತ್ತು ಸಂಚಾರವೇ ಅಸಾಧ್ಯ. ಇವರಿಗೆ ಶೌಚಾಲಯ, ವಿದ್ಯುತ್‌ ವ್ಯವಸ್ಥೆಯೇ ಇಲ್ಲ.


ಸಂಜೀವ ಅವರು ಕೂಲಿ ಕೆಲಸ ಮಾಡುತ್ತಿದ್ದು, ಕಳೆದ ಎಂಟು ತಿಂಗಳಿನಿಂದ ಅನಾರೋಗ್ಯದಿಂದ್ದಾರೆ. ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ಶೀಘ್ರ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದರೂ ಆರ್ಥಿಕ ಸಮಸ್ಯೆಯಿಂದ ಅಸಹಾಯಕರಾಗಿದ್ದಾರೆ. ಸುನಂದಾ ಅವರು ಬೀಡಿ ಕೆಲಸ ಮಾಡುತ್ತಿದ್ದು, ಅವರೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸುನಂದಾ ಅವರ ಆದಾಯದಿಂದ ಈ ಕುಟುಂಬದ ನಿರ್ವಹಣೆ ಮತ್ತು 4 ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ಕಷ್ಟಕರವಾಗಿದೆ. ಮಕ್ಕಳನ್ನು ಉಚಿತ ಶಿಕ್ಷಣದ ಆಸೆಯಿಂದ ದೂರದ ಖಾಸಗಿ ಶಾಲೆಗೆ ಸೇರಿಸಿದ್ದು, ಈಗ ಬಸ್‌ ವೆಚ್ಚ, ಸಮವಸ್ತ್ರ ವೆಚ್ಚ ಭರಿಸಲಾಗದೇ ಕಂಗಾಲಾಗಿದ್ದಾರೆ. ಹಲವಾರು ಸಮಾಜಮುಖೀ ಸೇವಾ ಕಾರ್ಯಗಳನ್ನು ನಡೆಸುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್‌ ಈ ಬಡ ಕುಟುಂಬದ ದುಃಸ್ಥಿತಿಯನ್ನು ಮನಗಂಡು ದಾನಿಗಳ ಸಹಕಾರದಿಂದ ಈ ಕುಟುಂಬಕ್ಕೆ ಸಹಾಯ ಹಸ್ತ ನೀಡಲು ಮುಂದೆ ಬಂದಿದೆ. ಅವರೊಡನೆ ಇತರ ಸಂಘ ಸಂಸ್ಥೆಗಳು, ದಾನಿಗಳು ಜತೆಗೂಡಿದರೆ ಈ ಬಡ ಕುಟುಂಬಕ್ಕೆ ಸಹಾಯವಾದೀತು.

ಕಷ್ಟದ ಬದುಕು
ಕಳೆದ 7 ವರ್ಷಗಳಿಂದ ಇಲ್ಲಿ ವಾಸವಾಗಿದ್ದೇವೆ. ಮನೆ ನಿರ್ಮಾಣಕ್ಕೆ ಸ್ಥಳದ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದೇವೆ. ಆದರೆ ಹಕ್ಕುಪತ್ರ ಲಭಿಸಿಲ್ಲ. ರೇಷನ್‌ ಕಾರ್ಡ್‌ ಇಲ್ಲ. ಬಡತನದಿಂದಾಗಿ ಮನೆ ದುರಸ್ತಿಪಡಿಸಲು ಅನಾನುಕೂಲವಾಗಿದೆ. ಮಕ್ಕಳ ಶಾಲಾ ಖರ್ಚು-ವೆಚ್ಚ ಭರಿಸಲು ಅಸಾಧ್ಯವಾಗಿದೆ. ಮಳೆಯಿಂದಾಗಿ ದಿನ ಕಳೆಯವುದೇ ಕಷ್ಟವಾಗಿದೆ.
– ಸುನಂದಾ, ಗುಡಿಸಲು ನಿವಾಸಿ

ಅರ್ಜಿ ಸಲ್ಲಿಕೆಯಾಗಿಲ್ಲ
ಸುನಂದಾ ಅವರಿಂದ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಕೆಯಾಗಿಲ್ಲ. ಜಾಗದ ಹಕ್ಕುಪತ್ರ ಲಭಿಸಿದರೆ  ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಬಹುದು.
– ರಾಜಶೇಖರ ರೈ, ಪ್ರಭಾರ ಪಿಡಿಒ, ಸರಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.