ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಸರಣಿ ದರೋಡೆ ಪ್ರಕರಣ: 9 ಮಂದಿ ಆರೋಪಿಗಳು ಪೊಲೀಸರ ಬಲೆಗೆ
Team Udayavani, Apr 3, 2021, 1:34 PM IST
ಮಂಗಳೂರು: ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಣಿ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಅಬ್ದುಲ್ ರವೂಫ್ (24 ವ), ರಾಮಮೂರ್ತಿ (23 ವ) ಅಶ್ರಫ್ ಪೆರಾಡಿ (27 ವ), ಸಂತೋಷ್ (24 ವ) ನವೀದ್ ( 36 ವ), ರಮಾನಂದ (48 ವ), ಸುಮನ್ (24 ವ), ಸಿದ್ದಿಕ್ (27 ವ) ಮತ್ತು ಅಲಿಕೋಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ:10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ನೊಂದ ಬಾಲಕಿ ಆತ್ಮಹತ್ಯೆ!
ಮಾರ್ಚ್ 27ರಿಂದ 31ರವರೆಗೆ ಮೂಡಬಿದಿರೆಯಲ್ಲಿ ನಾಲ್ಕು, ಮೂಲ್ಕಿಯಲ್ಲಿ ಒಂದು ಮತ್ತು ಬಜಪೆಯಲ್ಲಿ ಎರಡು ಪ್ರಕರಣಗಳು ನಡೆದಿದ್ದವು. ಈ ಹಿಂದೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಬೆಂಗಳೂರು ಜಿಲ್ಲೆಗಳಲ್ಲೂ ನಡೆದ ದರೋಡೆ ಪ್ರಕರಣಗಳಲ್ಲಿ ಈ ಆರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ‘ಕಬ್ಜ’ ಶೂಟಿಂಗ್ ವೇಳೆ ಅವಘಡ : ಉಪ್ಪಿ ತಲೆಗೆ ರಾಡ್ ಏಟು
ಆರೋಪಿಗಳಿಂದ ಎರಡು ತಲವಾರು, ಒಂದು ಏರ್ ಗನ್, ಒಂದು ಕಬ್ಬಿಣದ ರಾಡು, ಒಂದು ಕಬ್ಬಿಣದ ಲಿವರ್, ಒಂದು ಉದ್ದನೆಯ ಚಾಕು, ಒಂದು ಪಾಕೆಟ್ ಖಾರದ ಪುಡಿ, ಮರದ ದೊಣ್ಣೆಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!