ವಿಶೇಷ ಚೇತನ ಮಕ್ಕಳಿಗೆ ಕದ್ರಿಯಲ್ಲಿ ಪ್ರತ್ಯೇಕ ಪಾರ್ಕ್‌..!


Team Udayavani, Feb 8, 2023, 10:04 AM IST

PArk

ಮಂಗಳೂರು: ವಿಶೇಷ ಚೇತನ ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಮತ್ತಷ್ಟು ಆದ್ಯತೆ ನೀಡಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದಾಗಿದೆ. ನಗರದ ಪ್ರಮುಖ ಪಾರ್ಕ್‌ ಎನಿಸಿದ ಕದ್ರಿ ಪಾರ್ಕ್‌ನ ಒಳಗೆ ವಿಶೇಷ ಚೇತನ ಮಕ್ಕಳಿಗೆಂದೇ ಪ್ರತ್ಯೇಕ ಪಾರ್ಕ್‌ ನಿರ್ಮಾಣ ಮತ್ತು ಮೂಲಸೌಕರ್ಯ ಒದಗಿಸಲು ಮುಡಾ ನಿರ್ಧರಿಸಿದೆ.

ನಗರದಲ್ಲಿ ಕೆಲವೊಂದು ವಿಶೇಷ ಚೇತನರಿಗೆಂದೇ ಮೀಸಲಿಟ್ಟ ಶಾಲೆಗಳಿವೆ. ಶಾಲಾ ಮಟ್ಟದಲ್ಲಿ ಕ್ರೀಡಾಂಗಣ ಇದ್ದರೂ, ನಗರದಲ್ಲಿ ಪ್ರತ್ಯೇಕ ಸಾರ್ವಜನಿಕ ಕ್ರೀಡಾಂಗಣ ಇಲ್ಲ. ಇದರಿಂದಾಗಿ ವಿಶೇಷ ಚೇತನ ಮಕ್ಕಳು ಸಾರ್ವಜನಿಕವಾಗಿ ಆಟೋಟಗಳಲ್ಲಿ ಬೆರೆಯಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕದ್ರಿ ಪಾರ್ಕ್‌ನ ಒಂದು ಭಾಗದಲ್ಲಿ ಈ ಆಟದ ಪ್ರದೇಶ ನಿರ್ಮಾಣ ಮಾಡಲು ನಿರ್ಧರಿಸಿದೆ.

ಈ ಪ್ರದೇಶವನ್ನು ಕೇವಲ ವಿಶೇಷ ಚೇತನ ಮಕ್ಕಳ ಚಟುವಟಕೆಗಳಿಗೆ ಮಾತ್ರ ನಿಗದಿಪಡಿಸಲು ಮತ್ತು ಅಲ್ಲಿ ಸಂಬಂಧಿತ ಆಟಿಕೆ, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ. ಈ ಕುರಿತು ಸೂಕ್ತ ಸೌಲಭ್ಯ ಕಲ್ಪಿಸಲು ಈಗಾಗಲೇ ಸಭೆ ನಡೆಸಿದೆ. ಕದ್ರಿ ಪಾರ್ಕ್‌ನಲ್ಲಿ ಈಗಾಗಲೇ ಸಾಮಾನ್ಯ ಮಕ್ಕಳ ಆಟಕ್ಕೆಂದು ಪ್ರತ್ಯೇಕ ಜಾಗವಿದೆ. ಆದರೆ, ಅಲ್ಲಿ ವಿಶೇಷ ಚೇತನ ಮಕ್ಕಳು ಆಟವಾಡಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಪಾರ್ಕ್‌ ಒಳಗಿನ ಬಾಲ ಮಂಗಳ ರೈಲು ನಿಲುಗಡೆ ಭಾಗ ದಲ್ಲಿ ಪ್ರತ್ಯೇಕ ಆಟದ ಪ್ರದೇಶ ನಿರ್ಮಾಣವಾಗಲಿದೆ.

ಈ ಕುರಿತಂತೆ ಸದ್ಯದಲ್ಲೇ ರೂಪುರೇಷೆಗಳು ತಯಾರಾಗಲಿದೆ. ಕದ್ರಿ ಪಾರ್ಕ್‌ಗೆ ಈಗಾಗಲೇ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದ್ದು, ಪಾರ್ಕ್‌ನ ಅಂದ ಹೆಚ್ಚಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಪಾಳು ಬಿದ್ದಿದ್ದ ಗಂಗನಪಳ್ಳವನ್ನು ಅಭಿವೃದ್ಧಿಪಡಿಸಲಾಗಿದೆ.

ಬಯಲು ರಂಗ ಮಂದಿರಕ್ಕೆ ಹೊಸ ರೂಪ

ಬಯಲು ರಂಗ ಮಂದಿರಕ್ಕೆ ಮುಡಾ ಹೊಸ ರೂಪ ನೀಡಲಿದೆ. ಕರಾವಳಿಯ ವೈಭವವನ್ನು ಸಾರುವ ತ್ರೀಡಿ ಕಲಾಕೃತಿಗಳ ಮೂಲಕರಂಗ ಮಂದಿರ ಮತ್ತಷ್ಟು ಗಮನ ಸೆಳೆಯಲಿದೆ. ರಂಗಮಂದಿರದಲ್ಲೂ ಯಕ್ಷಗಾನ, ಕಂಬಳ, ಬೂತಾರಾಧನೆ ಸಹಿತ ವಿವಿಧ ಕಲಾಕೃತಿಗಳನ್ನು ಇರಿಸಿ ಬಯಲು ರಂಗ ಮಂದಿರ ಅಭಿವೃದ್ಧಿಗೆ ನಿರ್ಧರಿಸಲಾಗಿದೆ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.