ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್


Team Udayavani, Jun 2, 2023, 6:13 PM IST

MLA Vedavyasa Kamath

ಮಂಗಳೂರು: ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರಕಾರ ತಡೆ ನೀಡಿ ಆದೇಶ ಹೊರಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಅನುಷ್ಠಾನದ ಹಂತದಲ್ಲಿರುವ ನೂರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಮಸ್ಯೆ ಆಗಲಿದೆ. ರಾಜಕೀಯ ಕಾರಣಕ್ಕಾಗಿ ಸರಕಾರ ಹೊರಡಿಸಿದ ಈ ಆದೇಶದಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸರಕಾರದ ಈ ನಡೆ ಖಂಡನೀಯ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಈಗಾಗಲೇ ಮಳೆಗಾಲ ಆರಂಭ ಆಗಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಹತ್ತಾರು ಕಾಮಗಾರಿಗಳು ತುರ್ತಾಗಿ ಆಗಬೇಕಿದೆ. ಮಂಗಳೂರು ನಗರದಲ್ಲಿ ವಿಪರೀತ ಮಳೆ ಸುರಿಯುವುದರಿಂದ ಅಲ್ಲಲ್ಲಿ ನೆರೆ ಸಮಸ್ಯೆಗಳು ಉಂಟಾಗುತ್ತವೆ. ಕಾಮಗಾರಿಗಳು ನಿಂತು ಹೋದರೆ ಜನರ ಬದುಕು ನರಕಯಾತನೆ ಆಗಲಿದೆ. ಅನೇಕ ಕಡೆಗಳಲ್ಲಿ ರಸ್ತೆಯಲ್ಲಿ ನಡೆದಾಡಲೂ ಸಮಸ್ಯೆ ಆಗಲಿದೆ. ಕುಡಿಯುವ ನೀರಿನ ಕಾಮಗಾರಿ, ರಾಜಕಾಲುವೆಗಳಿಗೆ ತಡೆಗೋಡೆ ಕಾಮಗಾರಿಗಳು, ಚರಂಡಿ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆಗಳು ಸೇರಿದಂತೆ ಹಲವು ಕಾಮಗಾರಿಗಳು ತುರ್ತಾಗಿ ನಡೆಯಬೇಕಿವೆ. ಆದರೆ ಈಗ ರಾಜ್ಯ ಸರಕಾರದ ಆದೇಶದಿಂದ ಎಲ್ಲದಕ್ಕೂ ತಡೆ ಬಿದ್ದಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಆಡಳಿತ ನಡೆಸುವುದು ಸರಕಾರದ ಜನವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಸರಕಾರ ಅಧಿಕಾರ ನಡೆಸುವಾಗ ರಾಜಕೀಯ ದ್ವೇಷದ ಅಡಿಯಲ್ಲಿ ನಿರ್ಧಾರ ಕೈಗೊಳ್ಳಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಾಜಕೀಯ ಹಗೆತನ ಸಾಧಿಸುವ ಸಲುವಾಗಿ ಈ ಕೆಟ್ಟ ನಿರ್ಧಾರ ಕೈಗೊಂಡಿದೆ. ಸರಕಾರದ ಈ ನಡೆಯಿಂದಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಆಗಲಿದೆ. ತಕ್ಷಣ ಸರಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಅವರು ಆಗ್ರಹಿಸಿದ್ದಾರೆ.

ಯಾವುದೇ ಸ್ಪಷ್ಟ ಕಾರಣ ಇಲ್ಲದೆ ಸರಕಾರ ಈ ನಿರ್ಧಾರ ಕೈಗೊಂಡಿದೆ. ಅನುದಾನ ತಡೆದು ಟೆಂಡರ್ ಆಗಿರುವ ಕಾಮಗಾರಿಗಳ ಗುತ್ತಿಗೆದಾರರನ್ನು ಬ್ಯ್ಲಾಕ್ ಮೇಲ್ ಮಾಡಿ ಕಮಿಷನ್ ಹೊಡೆಯುವ ದಂಧೆಯ ಭಾಗವಾಗಿ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಮುಂದೆ ಆಗುವ ಎಲ್ಲ ಸಮಸ್ಯೆಗಳಿಗೆ ಕಾಂಗ್ರೆಸ್ ನೇತೃತ್ವದ ಸರಕಾರವೇ ನೇರ ಹೊಣೆ ಎಂದು ಶಾಸಕ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

ramak

KVG ಶಿಕ್ಷಣ ಸಂಸ್ಥೆಗಳ ಎ.ಎಸ್‌. ರಾಮಕೃಷ್ಣ ಕೊಲೆ ಪ್ರಕರಣ- ಸಹೋದರ ಸೇರಿ 6 ಮಂದಿ ದೋಷಿ

ಸೆ. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು

Sept. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

karnataka govt logo

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.