ಗ್ರಾಮೀಣ ಪ್ರದೇಶದಲ್ಲೂ ಕೊಳಚೆ ನೀರು ಶುದ್ಧೀಕರಣ ಘಟಕ ಕಡ್ಡಾಯ

ದ.ಕ. ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸಿಇಒ ಡಾ| ಆರ್‌. ಸೆಲ್ವಮಣಿ

Team Udayavani, Nov 27, 2019, 5:08 AM IST

as-47

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿಯೂ ಪ್ರತೀ ಅಪಾರ್ಟ್‌ಮೆಂಟ್‌, ಇತರ ಕಟ್ಟಡಗಳಿಗೆ ಕೊಳಚೆ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಕಡ್ಡಾಯಗೊಳಿಸಲಾಗಿದೆ. ಘಟಕ ನಿರ್ಮಿಸದಿದ್ದರೆ ಕಟ್ಟಡಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ ತಿಳಿಸಿದ್ದಾರೆ.

ಮಂಗಳವಾರ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ಯಲ್ಲಿ ಜರಗಿದ ಜಿ.ಪಂ.ನ 18ನೇ ಸಾಮಾನ್ಯ ಸಭೆಯಲ್ಲಿ ಮಮತಾ ಡಿ.ಎಸ್‌. ಗಟ್ಟಿ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಎಸ್‌ಟಿಪಿ ಕಡ್ಡಾಯಗೊಳಿಸಲಾಗಿದೆ. ಸದ್ಯ 2 ಗ್ರಾ.ಪಂ.ಗಳು ಎಸ್‌ಟಿಪಿ ರಹಿತ ಕಟ್ಟಡಗಳಿಗೆ ಪರವಾನಿಗೆ ತಡೆಹಿಡಿದಿವೆ. ಪರವಾನಿಗೆ ನವೀಕರಣ ಕೂಡ ಮಾಡುತ್ತಿಲ್ಲ ಎಂದರು.

ಶೌಚಾಲಯ ಬಾಕಿ
ಸದಸ್ಯ ಕೊರಗಪ್ಪ ನಾಯ್ಕ, ಜಿಲ್ಲೆ ಯಲ್ಲಿ ಶೌಚಾಲಯ ನಿರ್ಮಾಣ ಪೂರ್ಣಪ್ರಮಾಣದಲ್ಲಿ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಾಕಿ ಇರುವ 235 ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಇಒ ಹೇಳಿದರು.

ಕುಡಿಯುವ ನೀರಿನ ಘಟಕಕ್ಕೆ ಡಿಸೆಂಬರ್‌ ಗಡುವು
ವಿವಿಧೆಡೆ ಕುಡಿಯುವ ನೀರಿನ ಘಟಕಗಳ ದುರಸ್ತಿ, ಗ್ರಾ.ಪಂ.ಗಳಿಗೆ ವರ್ಗಾವಣೆ ನಡೆದಿಲ್ಲ ಎಂದು ಎಂ.ಎಸ್‌. ಮಹಮ್ಮದ್‌, ಕೆ.ಪಿ. ವರ್ಗೀಸ್‌ ಅಸಮಾಧಾನ ವ್ಯಕ್ತ ಪಡಿಸಿದರು. ಬಾಕಿ ಉಳಿದಿರುವ ಘಟಕಗಳನ್ನು ಡಿಸೆಂಬರ್‌ ಒಳಗೆ ಪೂರ್ಣಗೊಳಿ ಸಬೇಕು. ಇಲ್ಲದಿದ್ದರೆ ಸರಕಾರಕ್ಕೆ ವರದಿ
ಸಲ್ಲಿಸುತ್ತೇನೆ ಎಂದು ಸಿಇಒ ಇಲಾಖಾಧಿ ಕಾರಿಗಳಿಗೆ ಎಚ್ಚರಿಕೆ ನೀಡಿದರು.

ಶಾಲೆಗಳಿಗೆ ಆರ್‌ಟಿಸಿ ಸಿಗುತ್ತಿಲ್ಲ
ಶಾಲೆಗಳಿಗೆ ದಾನರೂಪದಲ್ಲಿ ದೊರೆತ ಜಾಗಕ್ಕೆ ಶುಲ್ಕ ಪಾವತಿಸಲು ಸಾಧ್ಯವಾ ಗದ ಕಾರಣ ಆರ್‌ಟಿಸಿ ಮಾಡಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲದಿರುವುದರಿಂದ ಶಾಲೆಗಳಿಗೆ ಕುಮ್ಕಿ ಜಾಗದ ಆರ್‌ಟಿಸಿ ಕೂಡ ದೊರೆಯುತ್ತಿಲ್ಲ. ಡೀಮ್ಡ್ ಫಾರೆಸ್ಟ್‌ನಿಂದಲೂ ತೊಂದರೆಯಾಗಿದೆ. ಬಡವರು ಮನೆ ಕಟ್ಟುವುದಕ್ಕೂ ಅಸಾಧ್ಯವಾಗಿದೆ. ಸಮಸ್ಯೆ ಪರಿಹರಿಸಲು ಜಂಟಿ ಸರ್ವೆ ನಡೆಸಬೇಕು ಎಂದು ಸದಸ್ಯರು ಹೇಳಿದರು.

ದಾನಪತ್ರ ಉಚಿತವಾಗಿ ಮಾಡಿ ಕೊಡುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗುವುದು. ಕುಮ್ಕಿ ಕುರಿತು ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗುವುದು ಎಂದು ಸಿಇಒ ತಿಳಿಸಿದರು. ಹರೀಶ್‌ ಕಂಜಿಪಿಲಿ, ಧರಣೇಂದ್ರ ಕುಮಾರ್‌, ಸರ್ವೋತ್ತಮ ಗೌಡ, ಅನಿತಾ ಹೇಮನಾಥ ಶೆಟ್ಟಿ, ಯು.ಪಿ. ಇಬ್ರಾಹಿಂ, ಎಸ್‌.ಎನ್‌. ಮನ್ಮಥ, ಧನಲಕ್ಷ್ಮೀ ಮೊದಲಾದವರು ವಿವಿಧ ವಿಚಾರಗಳ ಚರ್ಚೆಯಲ್ಲಿ ಪಾಲ್ಗೊಂಡರು.

ಮನೆ ನಿರ್ಮಾಣಕ್ಕೆ 3.60 ಕೋ.ರೂ.
ಭಾರೀ ಮಳೆಯಿಂದ ಜಿಲ್ಲೆಯಲ್ಲಿ 629 ಮನೆಗಳಿಗೆ ಹಾನಿಯಾಗಿದೆ. 571 ಮನೆಗಳ ನಿರ್ಮಾಣಕ್ಕೆ ಗ್ರಾ.ಪಂ.ನಿಂದ ಜಿಪಿಎಸ್‌ ಆಗಿದೆ. 24 ಪೂರ್ಣಗೊಂಡಿವೆ. 22 ಮನೆಗಳ ತಳಪಾಯ ಆಗಿದೆ. ಮನೆ ನಿರ್ಮಾಣಕ್ಕಾಗಿ ಇದುವರೆಗೆ ಬಂಟ್ವಾಳ ತಾಲೂಕಿಗೆ 60 ಲ.ರೂ. ಬೆಳ್ತಂಗಡಿಗೆ 2.1 ಕೋ.ರೂ., ಮಂಗ ಳೂರಿಗೆ 36.25 ಲ.ರೂ., ಪುತ್ತೂರಿಗೆ 30.25 ಲ.ರೂ. ಮತ್ತು ಸುಳ್ಯಕ್ಕೆ 32.5 ಲ.ರೂ. ಬಿಡುಗಡೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ರೇಷನ್‌ಗೆ ಬೆರಳಚ್ಚು ಸಮಸ್ಯೆ
ನ್ಯಾಯಬೆಲೆ ಅಂಗಡಿಗಳು ರವಿ ವಾರವೂ ತೆರೆದಿರಬೇಕು ಎಂಬ ಸೂಚನೆ ಇದ್ದರೂ ಕೆಲವೆಡೆ ತೆರೆದಿರುವುದಿಲ್ಲ. ಹಲವೆಡೆ ಸರ್ವರ್‌ ಸಮಸ್ಯೆಯಿಂದಾಗಿ ಥಂಬ್‌ ನೀಡುವುದು ಸಾಧ್ಯವಾಗುತ್ತಿಲ್ಲ ಎಂಬ ದೂರು ವ್ಯಕ್ತವಾಯಿತು. ಮಂಗಳವಾರ ರಜೆ ಮಾಡಿ ರವಿವಾರ ತೆರೆದಿರಲು ಸೂಚಿಸಲಾಗಿದೆ. ಸೂಚನೆ ಪಾಲಿಸದ ಸಹಕಾರಿ ಸಂಘಗಳ ಪಡಿತರ ಮಾರಾಟ ಅನುಮತಿ ತಡೆದು ಬೇರೆ ಖಾಸಗಿ ಸಂಸ್ಥೆ ಅಥವಾ ಗ್ರಾ.ಪಂ.ಗಳಿಗೆ ನೀಡುವ ಬಗ್ಗೆ ನಿರ್ಧರಿ ಸಲಾಗುವುದು’ ಎಂದು ಸಂಬಂಧಿತ ಇಲಾಖಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.