ಪೊಲೀಸ್ ಆಗುವ ಕನಸು ಹೊತ್ತಿದ್ದ ವಿದ್ಯಾರ್ಥಿನಿ ಸಾವು
Team Udayavani, Dec 16, 2022, 6:27 PM IST
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ (14) ಡಿ.15 ರಂದು ಅನಾರೋಗ್ಯದಿಂದ ನಿಧನ ಹೊಂದಿದರು.
ಕಾವು ನಿವಾಸಿ ಧರ್ಮಲಿಂಗಮ್ ಅವರ ಪುತ್ರಿ. ಮೂರು ದಿನಗಳಿಂದ ಜ್ವರ ಕಾಣಿಸಿದ್ದು, ಪುತ್ತೂರು ಆಸ್ಪತ್ರೆಯಿಂದ ಔಷಧ ಪಡೆದಿದ್ದರು. ಡಿ.15 ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆ ತಂದಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಡಿವೈಎಸ್ಪಿ ಭೇಟಿ
ಅನುಶ್ರೀ ಅವರು ಭವಿಷ್ಯದಲ್ಲಿ ಪೊಲೀಸ್ ಅಧಿಕಾರಿ ಆಗಬೇಕು ಎನ್ನುವ ಕಾರಣಕ್ಕೆ ಕೊಂಬೆಟ್ಟಿಗೆ ಸೇರಿದ್ದಳು. ಇಲ್ಲಿ ಪೊಲೀಸ್ ಕೆಡೆಟ್ ತರಬೇತಿ ಪಡೆಯುತ್ತಿದ್ದು, ತಾನು ಪೊಲೀಸ್ ಆಗುವ ಕನಸು ಹೊತ್ತಿದ್ದಳು. ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಪೊಲೀಸ್ ಆಗುವ ಕನಸು ಕನಸಾಗಿ ಉಳಿದು ಹೋಯಿತು. ಈ ಕುರಿತು ಮಾಹಿತಿ ಪಡೆದ ಪುತ್ತೂರು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಅನುಶ್ರೀ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಉಪಸ್ಥಿತರಿದ್ದರು. ಅನುಶ್ರೀ ಅವರ ನಿಧನದ ಹಿನ್ನಲೆಯಲ್ಲಿ ಡಿ.16 ರಂದು ಶಾಲೆಗೆ ರಜೆ ಸಾರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು