ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಸವಾರರು ಪ್ರಾಣಾಪಾಯದಿಂದ ಪಾರು
Team Udayavani, Aug 29, 2021, 11:00 AM IST
ಬಂಟ್ವಾಳ : ತಾಲೂಕಿನ ಬಂಟ್ವಾಳ ಧರ್ಮಸ್ಥಳ ರಸ್ತೆಯ ಭಂಡಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವುನಲ್ಲಿ ಶನಿವಾರ ಸಂಜೆ ಅಪಘಾತ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ಕಕ್ಯೆಪದವು ನಿವಾಸಿ ಕೃಷ್ಣಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯ ಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಜೊತೆ ಸಹ ಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅಪಾಯ ವಿಲ್ಲದೆ ಪಾರಾಗಿದ್ದಾರೆ.
ಬಂಟ್ವಾಳ ಬೈಪಾಸ್ ರಸ್ತೆಯಿಂದ ಬಂಟ್ವಾಳ ಪೇಟೆಗೆ ಭಂಡಾರಿ ಬೆಟ್ಟು ಎಂಬಲ್ಲಿಂದ ಎಸ್ಕೇಪ್ ರೋಡ್ ಗೆ ಕ್ರಾಸ್ ಮಾಡುವ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿಟಿ.ವಿಯಲ್ಲಿ ಸೆರೆಯಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರಿಬ್ವರು ರಸ್ತೆಯ ಮೇಲೆ ಎಸೆಯುವ ದೃಶ್ಯ ಕೂಡ ಇದೆ. ಅದೃಷ್ಟವಶಾತ್ ಬೈಕ್ ಸವಾರ ಕೃಷ್ಣ ಮಯ್ಯ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಜೊತೆಗೆ ಸಹಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅವರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ