ಆರು ತಿಂಗಳಲ್ಲಿ 1,389 ಪ್ರಕರಣ ಪತ್ತೆ 


Team Udayavani, Jul 12, 2018, 12:27 PM IST

Lakshadeepa-7.jpg

ಮಂಗಳೂರು : ಪ್ರತಿ ವರ್ಷವೂ ಜಿಲ್ಲೆಯಲ್ಲೇ ಅತ್ಯಧಿಕ ಮಲೇರಿಯಾ ಪ್ರಕರಣ ಮಂಗಳೂರಿನಲ್ಲೇ ದಾಖಲಾಗುತ್ತಿವೆ. ಈ ಬಾರಿ ಜೂನ್‌ ವರೆಗೆ ಕಂಡು ಬಂದಿರುವ ಒಟ್ಟು 1,519 ಪ್ರಕರಣ ಪೈಕಿ 1,389 ನಗರದಿಂದಲೇ ವರದಿಯಾಗಿವೆ. ಆರೋಗ್ಯ ಇಲಾಖೆಯ ಎಚ್ಚರಿಕೆಯ ಹೊರತಾಗಿಯೂ ನಗರದಲ್ಲಿ ಮಲೇರಿಯಾ ಪ್ರಕರಣ ದಿನೇ ದಿನೇ ಏರುತ್ತಿರುವುದು ಕಳವಳಕಾರಿಯಾಗಿದೆ.

ಜಿಲ್ಲೆಯಲ್ಲಿ ಜೂನ್‌ ತಿಂಗಳಲ್ಲಿ ಅತೀ ಹೆಚ್ಚು ಅಂದರೆ 473 ಪ್ರಕರಣ ಕಂಡು ಬಂದಿವೆ. ಉಳಿದಂತೆ ಜನವರಿಯಲ್ಲಿ ಒಟ್ಟು 287, ಫೆಬ್ರವರಿಯಲ್ಲಿ 170, ಮಾರ್ಚ್‌ನಲ್ಲಿ 231, ಎಪ್ರಿಲ್‌ನಲ್ಲಿ 175, ಮೇಯಲ್ಲಿ 233 ಪಾಸಿಟಿವ್‌ ಪ್ರಕರಣ ದಾಖಲಾಗಿವೆ. ಈ ಪೈಕಿ ನಗರದಲ್ಲಿ ಜನವರಿ-268, ಫೆಬ್ರವರಿ- 152, ಮಾರ್ಚ್‌-219, ಎಪ್ರಿಲ್‌-165, ಮೇ-201 ಹಾಗೂ ಜೂನ್‌ ತಿಂಗಳಲ್ಲಿ 284 ಪ್ರಕರಣಗಳ ಮೂಲಕ ಒಟ್ಟು 1,389 ಮಲೇರಿಯಾ ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿವೆ. ಮಲೇರಿಯಾದಿಂದಾಗಿ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ.

ಅತ್ಯಧಿಕ ಮಲೇರಿಯಾ ಪ್ರಕರಣ
ಹೊಗೆಬಜಾರ್‌, ಕಂಟೋನ್ಮೆಂಟ್‌, ಕೋರ್ಟ್‌, ಸೆಂಟ್ರಲ್‌ ಮಾರ್ಕೆಟ್‌, ಬಂದರು, ಪೋರ್ಟ್‌, ಮಣ್ಣಗುಡ್ಡ, ದೇರೆಬೈಲ್‌, ಬೆಂಗ್ರೆ, ಮಿಲಾಗ್ರಿಸ್‌ ಮುಂತಾದೆಡೆಗಳಲ್ಲಿ ಅತೀ ಹೆಚ್ಚು ಮಲೇರಿಯಾ ವರದಿಯಾಗುತ್ತಿದೆ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ನಿಲ್ಲಿಸುವುದು, ಮನೆಯ ಆಸುಪಾಸಿನಲ್ಲಿರುವ ಗುಂಡಿಗಳ ನೀರು ತೆಗೆಯದೇ ಇರುವುದು, ನೀರು ಹರಿದು ಹೋಗಲು ಸ್ಥಳಾವಕಾಶವಿಲ್ಲದಿರುವುದು, ಸೊಳ್ಳೆ ಪರದೆ ಬಳಸದಿರುವುದು ಮುಂತಾದ ಕಾರಣಗಳಿಂದ ಮಲೇರಿಯಾ ತಗಲುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ಗಮನ ಹರಿಸಬೇಕು ಎಂದು ಇಲಾಖೆ ವಿನಂತಿಸಿದೆ.

ಗ್ರಾಮೀಣ ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯಲ್ಲಿ ಜನವರಿಯಿಂದ ಜೂನ್‌ ವರೆಗೆ ಒಟ್ಟು 360 ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.