ಹಡಿಲು ಬಿದ್ದ ಹೊಲದ ಮಡಿಲು ತುಂಬಿದ ಯುವಕ


Team Udayavani, Dec 9, 2017, 12:55 PM IST

09-42.jpg

ಮೂಡಬಿದಿರೆ: ಕೃಷಿಗೆ ಬೆನ್ನು ಹಾಕಿ ನಗರದತ್ತ ಮುಖ ಮಾಡುತ್ತಿರುವ ಈಗಿನ ಯುವ ಜನತೆಗೆ ಮಾದರಿಯಾಗುವಂತೆ ಇಲ್ಲೊಬ್ಬರಿದ್ದಾರೆ. ಅವರೇ ನೀರ್ಕೆರೆಯ ಲಿಂಗಪ್ಪ ಗೌಡ(ಲಿಖೀತ್‌ರಾಜ್‌). ಪರಿಶ್ರಮವೇ ಮೂರ್ತಿವೆತ್ತಂತೆ ಇರುವವರು. 

ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ, ಕುಡುಬಿ ಜ್ಞಾನದೀಪ್ತಿ ಮಾಸ ಪತ್ರಿಕೆಯ ಸಂಪಾದಕ, ಎಲೆಕ್ಟ್ರಿಶಿಯನ್‌, ಆಫ್ಘಾನಿಸ್ಥಾನದ ಕಂದಹಾರ್‌ನ ಯುದ್ಧ ಭೂಮಿಯಲ್ಲಿ ಟ್ಯಾಂಕರ್‌ ಚಾಲಕರಾಗಿದ್ದವರು ಈಗ ಹಡಿಲು ಹೊಲದಲ್ಲಿ ಭತ್ತದ ಹೊನ್ನ ಬೆಳೆ ತೆಗೆವ ಛಲಗಾರ. 
ಮೂಡಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ನೂಯಿಯಲ್ಲಿ 2 ದಶಕಗಳಿಂದ ಹಡಿಲು ಬಿದ್ದಿದ್ದ ಹೊಲಗಳನ್ನು ಮಾಲಕರಿಂದ ಪಡೆದು, ಭತ್ತ ಬೆಳೆದು ಅಬ್ಟಾ ಅನ್ನಿಸುವಂಥ ಸಾಧನೆ ಮಾಡಿ ತೋರಿದ್ದಾರೆ. 3 ಎಕ್ರೆ ಹೊಲದಲ್ಲಿ ಖರ್ಚು ಕಳೆದು ಎಕ್ರೆಗೆ 50 ಸಾವಿರ ರೂ.ಗಳಷ್ಟು ಆದಾಯ ಸಾಧ್ಯವಿದೆ ಎಂದು ತೋರಿಸಿಕೊಟ್ಟಿದ್ದಾರೆ.

ಲಿಂಗಪ್ಪ ಅವರು ಐಟಿಐ ವ್ಯಾಸಂಗ ಮಾಡಿದ್ದರೂ ಕೃಷಿಯಲ್ಲಿ ಆಸಕ್ತಿ ಹೊಂದಿದವರು. ಕೃಷಿ ಕುಟುಂಬದವರಲ್ಲದಿದ್ದರೂ ಬಜಪೆಯಲ್ಲಿ ಈ ಹಿಂದೆ ಭೂಮಿ ಎರವಲು ಪಡೆದು ಭತ್ತ ಬೆಳೆದಿದ್ದರು. ಆ ಅನುಭವವೇ ಅವರನ್ನು ಮೂಡಬಿದಿರೆ ನೂಯಿಯಲ್ಲಿ ಭತ್ತ ಬೆಳೆವಂತೆ ಪ್ರೇರೇಪಿಸಿತು. ನೂಯಿಯಲ್ಲಿ ಜಾಗ ಖರೀದಿಸಿದ್ದ ಕೇಶವ್‌ ಕಿರಣ್‌ ಅವರ ಸ್ನೇಹದಿಂದಾಗಿ ಭತ್ತ ಬೆಳೆಯಲು ಮುಂದಾದರು. 

ಯಂತ್ರಧಾರೆ ನೆರವು
ಕಳೆಗಿಡ, ಮುಳ್ಳು ಬೆಳೆದ ಭೂಮಿಯ ಕಾಯಕಲ್ಪಕ್ಕೆ ಕೃಷಿ ಇಲಾಖೆಯ “ಯಂತ್ರಧಾರೆ’ ನೆರವು ನೀಡಿತು. ಕಳೆಗಿಡ ಕೊಚ್ಚುವ ಯಂತ್ರವನ್ನು ದಿನಕ್ಕೆ 500 ರೂ. ಬಾಡಿಗೆಗೆ ತಂದು ಲಿಂಗಪ್ಪ ಅವರು ತಾನೇ ಕಳೆ ತೆಗೆದಿದ್ದರು. ಬಳಿಕ ಗಂಟೆಗೆ 480 ರೂ. ಬಾಡಿಗೆಯಲ್ಲಿ ಉಳುಮೆ ಮಾಡಿದ್ದೂ ಆಯಿತು. ಸನಿಹದ ತೋಡಿನಿಂದ ಭೂಮಿಗೆ ನೀರು ಹಾಯಿಸಿದ್ದರು. ಮೂಡಬಿದಿರೆ ರೈತ ಸಂಪರ್ಕ ಕೇಂದ್ರದಿಂದ “ಭದ್ರ’ ಭತ್ತ ಮತ್ತು “ಕಜೆ ಜಯ’ ಭತ್ತದ ಬೀಜವನ್ನು ತಂದು ಬಿತ್ತಿದ್ದರು. ಸಾವಯವ ಗೊಬ್ಬರವನ್ನೇ ಅವರು ಬಳಸಿದ್ದು, ಯಾವುದೇ ಕೀಟ ನಾಶಕವನ್ನೂ ಬಳಸಲಿಲ್ಲ.  

ಇದೆಲ್ಲ ಆಗಿ 120 ದಿನಗಳಲ್ಲಿ. ಭತ್ತದ ಬೆಳೆ ಕೊಯ್ಲಿಗೆ ಬಂತು. ಮನೆಯವರ ಸಹಿತ ಊರಿನ 10 ಮಂದಿ ಕೃಷಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಬಂದು ಕಟಾವು ಮಾಡಿದರು. ಲಿಂಗಪ್ಪ ಗೌಡರ ಈ ಸಾಹಸ ನೋಡಿ ಜಾಗದ ಮಾಲಕರು ಪ್ರೋತ್ಸಾಹ ಧನವನ್ನೂ ಕೈಗಿತ್ತಿದ್ದಾರಂತೆ! ನೂಯಿಯಲ್ಲಿ ಪಂಪ್‌ ಬಳಸಿ 2ನೇ ಬೆಳೆ ಮಾಡುವೆ, ಮುಂದೆ ತರಕಾರಿಯನ್ನೂ ಬೆಳೆಸುವೆ ಎನ್ನುತ್ತಿದ್ದಾರೆ ಲಿಂಗಪ್ಪ. 
ಕಟಾವಿಗೆ ಯಂತ್ರ ತಂದರೆ ಬೈಹುಲ್ಲು ಪುಡಿಯಾಗುತ್ತದೆ. ಡೀಸೆಲ್‌ ವಾಸನೆಯಿಂದ ಜಾನುವಾರುಗಳು ತಿನ್ನುವುದಿಲ್ಲ. ಅದಕ್ಕಾಗಿ ಕೃಷಿ ಕಾರ್ಮಿಕರನ್ನೇ ಬಳಸಿದೆ ಎಂದಿದ್ದಾರೆ. ಇವರ ಸಾಧನೆಗೆ ತಾಯಿ, ನಾಟಿ ವೈದ್ಯೆ ಕಲ್ಯಾಣಿ ಬಾಯಿ ಕೈ ಜೋಡಿಸಿದ್ದಾರೆ.

ಬಹುಮುಖೀ ಸಾಧಕ
ಲಿಂಗಪ್ಪ ಗೌಡ ಹೋರಾಟಮಯ ಬದುಕಿನ ವ್ಯಕ್ತಿ. ತನ್ನೂರಿನಲ್ಲಿ ಈ ಹಿಂದೆ ಆಗುತ್ತಿದ್ದ ಅಕ್ರಮಗಳನ್ನು ಬಹಿರಂಗಗೊಳಿಸುತ್ತ ಗ್ರಾಮಸಭೆಗಳನ್ನು “ಗರಂ ಸಭೆ’ಗಳನ್ನಾಗಿಸುತ್ತಿದ್ದರು. ಕುಡುಬಿ ಜನಾಂಗದ ಒಳಿತಿಗಾಗಿ ಶ್ರಮಿಸುತ್ತಿರುವ ಅವರೀಗ ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ಮಾಂಡ್‌ ಸೋಭಾಣ್‌ ಸದಸ್ಯರಾಗಿದ್ದಾರೆ. “ಕುಡುಬಿ ಜ್ಞಾನದೀಪ್ತಿ’ ಮಾಸಪತ್ರಿಕೆಯನ್ನೂ ಸಂಪಾದಿಸಿ, ಪ್ರಕಟಿಸುತ್ತಿದ್ದಾರೆ. ಎಲೆಕ್ಟ್ರಿಕಲ್‌, ಪ್ಲಂಬಿಂಗ್‌, ನೀರಾವರಿ ಮುಂತಾದ ತಾಂತ್ರಿಕ ಕೆಲಸ ಬಲ್ಲ ಲಿಂಗಪ್ಪ ಗೌಡರು ಅಫ್ಘಾನಿಸ್ಥಾನದ ಕಂದಹಾರ್‌ನ ಯುದ್ಧಭೂಮಿಯಲ್ಲಿ ಟ್ಯಾಂಕರ್‌ ಚಾಲಕರಾಗಿಯೂ ಕೆಲಸ ಮಾಡಿದ್ದರು. ಕೆಲ ತಿಂಗಳ ಹಿಂದಷ್ಟೇ ಅವರಿಗೆ ಸಿಂಗಾಪುರದಲ್ಲಿ ನೌಕರಿಯ ಆಫ‌ರ್‌ ಬಂದಿತ್ತು. ಆದರೂ ನೂಯಿಯ ಹೊನ್ನಿನ ಭತ್ತದ ಬೆಳೆ ಅವರನ್ನು ಸದ್ಯ ಇಲ್ಲೇ ಇರುವಂತೆ ಮಾಡಿದೆ! 

1.50 ಲಕ್ಷ ರೂ. ಲಾಭ!
ಭತ್ತದ ಕೃಷಿಯಿಂದ ಸುಮಾರು 80-85 ಮುಡಿ ಅಕ್ಕಿ ಸಂಗ್ರಹವಾಗಿದೆ. ಇದರ ಮೌಲ್ಯ ಸುಮಾರು 1.35 ಲಕ್ಷ ರೂ. ಇದೆ. ಇದರೊಂದಿಗೆ ಸೂಡಿ ಬೈಹುಲ್ಲಿಂದ 12 ಸಾವಿರ ರೂ. ಆದಾಯ ನಿರೀಕ್ಷೆ ಇದೆ. ಒಟ್ಟಾರೆ 1.70 ಲಕ್ಷ ಆದಾಯದ ಲೆಕ್ಕಾಚಾರವಿದೆ. ಖರ್ಚು ಕಳೆದು 1.50 ಲಕ್ಷ ರೂ. ಕೈ ಸೇರಬಹುದು ಎಂದು ಲಿಂಗಪ್ಪ ಅವರು ಹೇಳುತ್ತಾರೆ. 

ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.